AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ಗೂ ಮುನ್ನ ಕಣಕ್ಕಿಳಿದರೆ ವಿರಾಟ್ ಕೊಹ್ಲಿ ಹೆಸರಿಗೆ ಹೊಸ ದಾಖಲೆ ಸೇರ್ಪಡೆ

India vs New zealand: ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಝಿಲೆಂಡ್ ತಂಡ ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಕಣಕ್ಕಿಳಿದರೆ ವಿರಾಟ್ ಕೊಹ್ಲಿ ಹೆಸರಿಗೆ ಹೊಸ ದಾಖಲೆಯೊಂದು ಸೇರ್ಪಡೆಯಾಗಲಿದೆ. ಅಲ್ಲದೆ ಈ ಸಾಧನೆ ಮಾಡಿದ ಭಾರತದ 7ನೇ ಆಟಗಾರ ಹಾಗೂ ವಿಶ್ವದ 22ನೇ ಪ್ಲೇಯರ್ ಎನಿಸಿಕೊಳ್ಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Mar 01, 2025 | 10:54 AM

Share
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೊಸ ದಾಖಲೆಯ ಹೊಸ್ತಿಲ್ಲ್ಲಿದ್ದಾರೆ. ಅದು ಕೂಡ ವಿಶ್ವ ಕ್ರಿಕೆಟ್​ನಲ್ಲಿ ಕೇವಲ 21 ಆಟಗಾರರು ಮಾಡಿದ ವಿಶೇಷ ದಾಖಲೆಯ ಸನಿಹದಲ್ಲಿ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಕೇವಲ 21 ಆಟಗಾರರು ಮಾತ್ರ 300 ಕ್ಕೂ ಅಧಿಕ ಪಂದ್ಯಗಳನ್ನಾಡಿದ್ದಾರೆ.

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೊಸ ದಾಖಲೆಯ ಹೊಸ್ತಿಲ್ಲ್ಲಿದ್ದಾರೆ. ಅದು ಕೂಡ ವಿಶ್ವ ಕ್ರಿಕೆಟ್​ನಲ್ಲಿ ಕೇವಲ 21 ಆಟಗಾರರು ಮಾಡಿದ ವಿಶೇಷ ದಾಖಲೆಯ ಸನಿಹದಲ್ಲಿ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಕೇವಲ 21 ಆಟಗಾರರು ಮಾತ್ರ 300 ಕ್ಕೂ ಅಧಿಕ ಪಂದ್ಯಗಳನ್ನಾಡಿದ್ದಾರೆ.

1 / 6
ಈ ಇಪ್ಪತ್ತೊಂದು ಆಟಗಾರರಲ್ಲಿ ಕೇವಲ 6 ಭಾರತೀಯರು ಮಾತ್ರ ಈ ಸಾಧನೆ ಮಾಡಿದ್ದಾರೆ. ಇದೀಗ ಈ ಸಾಧನೆ ಮಾಡಲಿರುವ 7ನೇ ಆಟಗಾರನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ಮಾರ್ಚ್​ 2 ರಂದು ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿದರೆ ಏಕದಿನ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ 22ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

ಈ ಇಪ್ಪತ್ತೊಂದು ಆಟಗಾರರಲ್ಲಿ ಕೇವಲ 6 ಭಾರತೀಯರು ಮಾತ್ರ ಈ ಸಾಧನೆ ಮಾಡಿದ್ದಾರೆ. ಇದೀಗ ಈ ಸಾಧನೆ ಮಾಡಲಿರುವ 7ನೇ ಆಟಗಾರನಾಗಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ. ಮಾರ್ಚ್​ 2 ರಂದು ನಡೆಯಲಿರುವ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಕಣಕ್ಕಿಳಿದರೆ ಏಕದಿನ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ 22ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

2 / 6
ಈವರೆಗೆ 299 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 287 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 15078 ಎಸೆತಗಳನ್ನು ಎದುರಿಸಿ ಒಟ್ಟು 14085 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈವರೆಗೆ 299 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 287 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 15078 ಎಸೆತಗಳನ್ನು ಎದುರಿಸಿ ಒಟ್ಟು 14085 ರನ್ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 6
ಹಾಗೆಯೇ 299 ಏಕದಿನ ಮ್ಯಾಚ್​ಗಳ 296 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ವಿರಾಟ್ ಕೊಹ್ಲಿ ಒಟ್ಟು 158 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಹೆಚ್ಚು ಕ್ಯಾಚ್​ಗಳನ್ನು ಹಿಡಿದ ಫೀಲ್ಡರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ 299 ಏಕದಿನ ಮ್ಯಾಚ್​ಗಳ 296 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ವಿರಾಟ್ ಕೊಹ್ಲಿ ಒಟ್ಟು 158 ಕ್ಯಾಚ್​ಗಳನ್ನು ಹಿಡಿದಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಹೆಚ್ಚು ಕ್ಯಾಚ್​ಗಳನ್ನು ಹಿಡಿದ ಫೀಲ್ಡರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇದೀಗ ಟೀಮ್ ಇಂಡಿಯಾದ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 3 ಕ್ಯಾಚ್ ಹಿಡಿದರೆ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಅಂದರೆ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿಗೆ ಎರಡು ವಿಶ್ವ ದಾಖಲೆ ನಿರ್ಮಿಸುವ ಅವಕಾಶವಿದೆ.

ಇದೀಗ ಟೀಮ್ ಇಂಡಿಯಾದ ಬೆಸ್ಟ್ ಫೀಲ್ಡರ್ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ 3 ಕ್ಯಾಚ್ ಹಿಡಿದರೆ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಲಿದ್ದಾರೆ. ಅಂದರೆ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ ಕೊಹ್ಲಿಗೆ ಎರಡು ವಿಶ್ವ ದಾಖಲೆ ನಿರ್ಮಿಸುವ ಅವಕಾಶವಿದೆ.

5 / 6
ಅಂದಹಾಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 1989 ರಿಂದ 2012 ರವರೆಗೆ ಸಚಿನ್ ತೆಂಡೂಲ್ಕರ್ ಒಟ್ಟು 463 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 452	 ಇನಿಂಗ್ಸ್ ಆಡಿರುವ ಅವರು 18426 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಅಂದಹಾಗೆ ಏಕದಿನ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. 1989 ರಿಂದ 2012 ರವರೆಗೆ ಸಚಿನ್ ತೆಂಡೂಲ್ಕರ್ ಒಟ್ಟು 463 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 452 ಇನಿಂಗ್ಸ್ ಆಡಿರುವ ಅವರು 18426 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ