AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Dravid: ರೋಚಕ ಪಂದ್ಯಕ್ಕೆ ಪಿಚ್ ಸಿದ್ದಪಡಿಸಿದ ಸಿಬ್ಬಂದಿಗೆ ಭರ್ಜರಿ ಗಿಫ್ಟ್ ನೀಡಿದ ರಾಹುಲ್ ದ್ರಾವಿಡ್

India vs New Zealand: ಅಂತಿಮ ವಿಕೆಟ್​ಗೆ ಜೊತೆಗೂಡಿದ ರಚಿನ್ ರವೀಂದ್ರ ಹಾಗೂ ಏಜಾಝ್ ಪಟೇಲ್ 9 ಓವರ್​ಗಳ ಕಾಲ ಬ್ಯಾಟ್ ಮಾಡುವ ಮೂಲಕ 9 ವಿಕೆಟ್ ನಷ್ಟಕ್ಕೆ 165 ರನ್​ಗಳಿಸಿದರು. ಇದರೊಂದಿಗೆ ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತು.

TV9 Web
| Edited By: |

Updated on: Nov 29, 2021 | 8:09 PM

Share
ಕಾನ್ಪುರದಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅಂತಿಮ ಓವರ್​ವರೆಗೂ ಸಾಗಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದರು. ಅದರಲ್ಲೂ ಭಾರತ ಗೆಲ್ಲಬಹುದಾಗಿದ್ದ ಪಂದ್ಯವನ್ನು ನ್ಯೂಜಿಲೆಂಡ್ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಟೆಸ್ಟ್​ ಕ್ರಿಕೆಟ್​ನಲ್ಲಿ ಅಪರೂಪ ಎನಿಸುವ ಇಂತಹ ಸನ್ನಿವೇಶಕ್ಕೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಫುಲ್ ಖುಷ್ ಆಗಿದ್ದಾರೆ.

ಕಾನ್ಪುರದಲ್ಲಿ ನಡೆದ ಭಾರತ-ನ್ಯೂಜಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಅಂತಿಮ ಓವರ್​ವರೆಗೂ ಸಾಗಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದರು. ಅದರಲ್ಲೂ ಭಾರತ ಗೆಲ್ಲಬಹುದಾಗಿದ್ದ ಪಂದ್ಯವನ್ನು ನ್ಯೂಜಿಲೆಂಡ್ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಟೆಸ್ಟ್​ ಕ್ರಿಕೆಟ್​ನಲ್ಲಿ ಅಪರೂಪ ಎನಿಸುವ ಇಂತಹ ಸನ್ನಿವೇಶಕ್ಕೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಫುಲ್ ಖುಷ್ ಆಗಿದ್ದಾರೆ.

1 / 5
ಹೌದು, ಪ್ರತಿ ಕ್ಷಣಕ್ಕೂ ರೋಚಕ ಸೃಷ್ಟಿಸಿದ್ದ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನ  ಪಿಚ್​ ಸಿದ್ಧಪಡಿಸಿದ ಸಿಬ್ಬಂದಿಗಳ ಬಗ್ಗೆ ರಾಹುಲ್ ದ್ರಾವಿಡ್ ಮೆಚ್ಚುಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಈ ಪಿಚ್​ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಿಬ್ಬಂದಿಗಳಿಗೆ ದ್ರಾವಿಡ್ ಅವರು 35 ಸಾವಿರ ರೂ. ನೀಡಿದ್ದಾರೆ.

ಹೌದು, ಪ್ರತಿ ಕ್ಷಣಕ್ಕೂ ರೋಚಕ ಸೃಷ್ಟಿಸಿದ್ದ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನ ಪಿಚ್​ ಸಿದ್ಧಪಡಿಸಿದ ಸಿಬ್ಬಂದಿಗಳ ಬಗ್ಗೆ ರಾಹುಲ್ ದ್ರಾವಿಡ್ ಮೆಚ್ಚುಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಈ ಪಿಚ್​ ನಿರ್ವಹಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಿಬ್ಬಂದಿಗಳಿಗೆ ದ್ರಾವಿಡ್ ಅವರು 35 ಸಾವಿರ ರೂ. ನೀಡಿದ್ದಾರೆ.

2 / 5
ಈ ವಿಚಾರವನ್ನು ಬಹಿರಂಗಪಡಿಸಿರುವ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ (ಯುಪಿಸಿಎ), ರಾಹುಲ್ ದ್ರಾವಿಡ್ ಖುದ್ದಾಗಿ 35 ಸಾವಿರ ರೂಪಾಯಿಗಳನ್ನು ನಮ್ಮ ಮೈದಾನದ ಸಿಬ್ಬಂದಿಗಳಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಚಾರವನ್ನು ಬಹಿರಂಗಪಡಿಸಿರುವ ಉತ್ತರ ಪ್ರದೇಶ ಕ್ರಿಕೆಟ್ ಸಂಸ್ಥೆ (ಯುಪಿಸಿಎ), ರಾಹುಲ್ ದ್ರಾವಿಡ್ ಖುದ್ದಾಗಿ 35 ಸಾವಿರ ರೂಪಾಯಿಗಳನ್ನು ನಮ್ಮ ಮೈದಾನದ ಸಿಬ್ಬಂದಿಗಳಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

3 / 5
 5 ದಿನಗಳ ಕಾಲ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದರು. ಅದರಲ್ಲೂ ಟೀಮ್ ಇಂಡಿಯಾಬೌಲರ್‌ಗಳು 19 ವಿಕೆಟ್ ಪಡೆದರೆ, ಮತ್ತೊಂದೆಡೆ, ನ್ಯೂಜಿಲೆಂಡ್ ಬೌಲರ್‌ಗಳು 17 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಬ್ಯಾಟರುಗಳು ಮತ್ತು ಬೌಲರ್ ಇಬ್ಬರೂ ಪ್ರಾಬಲ್ಯ ಮೆರೆದಿದ್ದರು. ಇಂತಹದೊಂದು ಅತ್ಯುತ್ತಮ ಪಿಚ್​ ಸಿದ್ಧಪಡಿಸಿದ್ದಕ್ಕಾಗಿ ಕೋಚ್ ಆಗಿ ದ್ರಾವಿಡ್ ಅವರು ಈ ಕಾಣಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

5 ದಿನಗಳ ಕಾಲ ನಡೆದ ಪಂದ್ಯದಲ್ಲಿ ಉಭಯ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದರು. ಅದರಲ್ಲೂ ಟೀಮ್ ಇಂಡಿಯಾಬೌಲರ್‌ಗಳು 19 ವಿಕೆಟ್ ಪಡೆದರೆ, ಮತ್ತೊಂದೆಡೆ, ನ್ಯೂಜಿಲೆಂಡ್ ಬೌಲರ್‌ಗಳು 17 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ ಬ್ಯಾಟರುಗಳು ಮತ್ತು ಬೌಲರ್ ಇಬ್ಬರೂ ಪ್ರಾಬಲ್ಯ ಮೆರೆದಿದ್ದರು. ಇಂತಹದೊಂದು ಅತ್ಯುತ್ತಮ ಪಿಚ್​ ಸಿದ್ಧಪಡಿಸಿದ್ದಕ್ಕಾಗಿ ಕೋಚ್ ಆಗಿ ದ್ರಾವಿಡ್ ಅವರು ಈ ಕಾಣಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

4 / 5
ಒಟ್ಟಿನಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ತಮ್ಮ ಕೋಚಿಂಗ್​ನಲ್ಲಿ ಮೊದಲ ಟೆಸ್ಟ್​ ಪಂದ್ಯದಲ್ಲೇ ರೋಚಕತೆ ಸೃಷ್ಟಿಸಿದ್ದಾರೆ. ಟೀಮ್ ಇಂಡಿಯಾ ನೀಡಿದ 284 ರನ್​ಗಳ ಟಾರ್ಗೆಟ್ ಬೆನ್ನತ್ತಿದ ನ್ಯೂಜಿಲೆಂಡ್ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿಕೊಂಡಿತು. 86ನೇ ಓವರ್​ ಮುಕ್ತಾಯದ ವೇಳೆಗೆ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 147 ರನ್​ಗಳಿಸಿತ್ತು. ಆದರೆ ಅಂತಿಮ ವಿಕೆಟ್​ಗೆ ಜೊತೆಗೂಡಿದ ರಚಿನ್ ರವೀಂದ್ರ ಹಾಗೂ ಏಜಾಝ್ ಪಟೇಲ್ 9 ಓವರ್​ಗಳ ಕಾಲ ಬ್ಯಾಟ್ ಮಾಡುವ ಮೂಲಕ 9 ವಿಕೆಟ್ ನಷ್ಟಕ್ಕೆ 165 ರನ್​ಗಳಿಸಿದರು. ಇದರೊಂದಿಗೆ ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು.

ಒಟ್ಟಿನಲ್ಲಿ ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ತಮ್ಮ ಕೋಚಿಂಗ್​ನಲ್ಲಿ ಮೊದಲ ಟೆಸ್ಟ್​ ಪಂದ್ಯದಲ್ಲೇ ರೋಚಕತೆ ಸೃಷ್ಟಿಸಿದ್ದಾರೆ. ಟೀಮ್ ಇಂಡಿಯಾ ನೀಡಿದ 284 ರನ್​ಗಳ ಟಾರ್ಗೆಟ್ ಬೆನ್ನತ್ತಿದ ನ್ಯೂಜಿಲೆಂಡ್ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿಕೊಂಡಿತು. 86ನೇ ಓವರ್​ ಮುಕ್ತಾಯದ ವೇಳೆಗೆ ನ್ಯೂಜಿಲೆಂಡ್ 8 ವಿಕೆಟ್ ಕಳೆದುಕೊಂಡು 147 ರನ್​ಗಳಿಸಿತ್ತು. ಆದರೆ ಅಂತಿಮ ವಿಕೆಟ್​ಗೆ ಜೊತೆಗೂಡಿದ ರಚಿನ್ ರವೀಂದ್ರ ಹಾಗೂ ಏಜಾಝ್ ಪಟೇಲ್ 9 ಓವರ್​ಗಳ ಕಾಲ ಬ್ಯಾಟ್ ಮಾಡುವ ಮೂಲಕ 9 ವಿಕೆಟ್ ನಷ್ಟಕ್ಕೆ 165 ರನ್​ಗಳಿಸಿದರು. ಇದರೊಂದಿಗೆ ರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು.

5 / 5
Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ