AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿರುದ್ಧದ ಪಂದ್ಯ ರದ್ದು: ಸೂಪರ್-4 ಹಂತಕ್ಕೇರಲು ಭಾರತ ಏನು ಮಾಡಬೇಕು?: ಇಲ್ಲಿದೆ ಲೆಕ್ಕಾಚಾರ

How Team India Qualify For Super 4: ಏಷ್ಯಾಕಪ್​ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯ ರದ್ದಾದ ಕಾರಣ ಭಾರತಕ್ಕೆ ಮುಂದಿನ ಹಂತಕ್ಕೆ ತೇರ್ಗಡೆ ಆಗುವ ಹಾದಿ ಅಷ್ಟೊಂದು ಸುಲಭವಿಲ್ಲ. ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಪಡೆ ಗೆಲ್ಲಲೇ ಬೇಕು ಅಥವಾ ಆ ಪಂದ್ಯ ಕೂಡ ಮಳೆಯಿಂದ ರದ್ದಾಗಬೇಕು.

Vinay Bhat
|

Updated on: Sep 03, 2023 | 10:20 AM

Share
ಏಷ್ಯಾಕಪ್ 2023 ರಲ್ಲಿ ಶನಿವಾರ ಆಯೋಜಿಸಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಪೂರ್ಣಗೊಳ್ಳದೆ ಮಳೆಯಿಂದಾಗಿ ರದ್ದಾಯಿತು. ಟೀಮ್ ಇಂಡಿಯಾದ ಬ್ಯಾಟಿಂಗ್ ಇನ್ನಿಂಗ್ಸ್ ಮುಕ್ತಾಯದ ಬಳಿಕ ಶುರುವಾದ ಮಳೆ ನಿಲ್ಲಲೇ ಇಲ್ಲ. ಕೆಲ ಹೊತ್ತು ಕಾದರೂ ಪಾಕಿಸ್ತಾನಕ್ಕೆ ಟಾರ್ಗೆಟ್ ಬೆನ್ನಟ್ಟಲು ಮಳೆ ಅವಕಾಶ ನೀಡಲಿಲ್ಲ. ಹೀಗಾಗಿ ಅಂತಿಮವಾಗಿ ಪಂದ್ಯವನ್ನು ರದ್ದು ಮಾಡಲಾಯಿತು.

ಏಷ್ಯಾಕಪ್ 2023 ರಲ್ಲಿ ಶನಿವಾರ ಆಯೋಜಿಸಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಪೂರ್ಣಗೊಳ್ಳದೆ ಮಳೆಯಿಂದಾಗಿ ರದ್ದಾಯಿತು. ಟೀಮ್ ಇಂಡಿಯಾದ ಬ್ಯಾಟಿಂಗ್ ಇನ್ನಿಂಗ್ಸ್ ಮುಕ್ತಾಯದ ಬಳಿಕ ಶುರುವಾದ ಮಳೆ ನಿಲ್ಲಲೇ ಇಲ್ಲ. ಕೆಲ ಹೊತ್ತು ಕಾದರೂ ಪಾಕಿಸ್ತಾನಕ್ಕೆ ಟಾರ್ಗೆಟ್ ಬೆನ್ನಟ್ಟಲು ಮಳೆ ಅವಕಾಶ ನೀಡಲಿಲ್ಲ. ಹೀಗಾಗಿ ಅಂತಿಮವಾಗಿ ಪಂದ್ಯವನ್ನು ರದ್ದು ಮಾಡಲಾಯಿತು.

1 / 8
ಇಂಡೋ-ಪಾಕ್ ಕದನ ರದ್ದಾದ ಪರಿಣಾಮ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಹೀಗಾಗಿ ಭಾರತ ಒಂದು ಅಂಕ ಸಂಪಾದಿಸಿದ್ದರೆ, ಉದ್ಘಾಟನಾ ಪಂದ್ಯದಲ್ಲಿ ಗೆದ್ದ ಕಾರಣ ಪಾಕಿಸ್ತಾನ ಒಟ್ಟು ಮೂರು ಪಾಯಿಂಟ್ ಸಂಪಾದಿಸಿದೆ. ಈ ಮೂಲಕ ಬಾಬರ್ ಪಡೆ ಸೂಪರ್-4 ಹಂತಕ್ಕೂ ತೇರ್ಗಡೆ ಆಗಿದೆ.

ಇಂಡೋ-ಪಾಕ್ ಕದನ ರದ್ದಾದ ಪರಿಣಾಮ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗಿದೆ. ಹೀಗಾಗಿ ಭಾರತ ಒಂದು ಅಂಕ ಸಂಪಾದಿಸಿದ್ದರೆ, ಉದ್ಘಾಟನಾ ಪಂದ್ಯದಲ್ಲಿ ಗೆದ್ದ ಕಾರಣ ಪಾಕಿಸ್ತಾನ ಒಟ್ಟು ಮೂರು ಪಾಯಿಂಟ್ ಸಂಪಾದಿಸಿದೆ. ಈ ಮೂಲಕ ಬಾಬರ್ ಪಡೆ ಸೂಪರ್-4 ಹಂತಕ್ಕೂ ತೇರ್ಗಡೆ ಆಗಿದೆ.

2 / 8
ಆದರೆ, ಭಾರತಕ್ಕೆ ಮುಂದಿನ ಹಂತಕ್ಕೆ ತೇರ್ಗಡೆ ಆಗುವ ಹಾದಿ ಅಷ್ಟೊಂದು ಸುಲಭವಿಲ್ಲ. ಮುಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕು ಅಥವಾ ಆ ಪಂದ್ಯ ಕೂಡ ಮಳೆಯಿಂದ ರದ್ದಾಗಬೇಕು. ಹೀಗಾದಲ್ಲಿ ಮಾತ್ರ ಟೀಮ್ ಇಂಡಿಯಾ ಸೂಪರ್-4ಗೆ ಲಗ್ಗೆಯಿಡಲಿದೆ. ಎಲ್ಲಾದರು ಮುಂದಿನ ಪಂದ್ಯ ಭಾರತ ಸೋತರೆ ಟೂರ್ನಿಯಿಂದ ಹೊರಬೀಳಲಿದೆ.

ಆದರೆ, ಭಾರತಕ್ಕೆ ಮುಂದಿನ ಹಂತಕ್ಕೆ ತೇರ್ಗಡೆ ಆಗುವ ಹಾದಿ ಅಷ್ಟೊಂದು ಸುಲಭವಿಲ್ಲ. ಮುಂದಿನ ಪಂದ್ಯದಲ್ಲಿ ಗೆಲ್ಲಲೇ ಬೇಕು ಅಥವಾ ಆ ಪಂದ್ಯ ಕೂಡ ಮಳೆಯಿಂದ ರದ್ದಾಗಬೇಕು. ಹೀಗಾದಲ್ಲಿ ಮಾತ್ರ ಟೀಮ್ ಇಂಡಿಯಾ ಸೂಪರ್-4ಗೆ ಲಗ್ಗೆಯಿಡಲಿದೆ. ಎಲ್ಲಾದರು ಮುಂದಿನ ಪಂದ್ಯ ಭಾರತ ಸೋತರೆ ಟೂರ್ನಿಯಿಂದ ಹೊರಬೀಳಲಿದೆ.

3 / 8
ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ನೇಪಾಳ ವಿರುದ್ಧ ಆಡಲಿದೆ. ಈ ಮ್ಯಾಚ್ ಸೆಪ್ಟೆಂಬರ್ 4 ಸೋಮವಾರದಂದು ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಆದರೆ, ಈ ಪಂದ್ಯಕ್ಕೂ ವರುಣನ ಕಾಟ ಇರಲಿದೆ ಎಂದು ಹೇಳಲಾಗಿದೆ. ಪಂದ್ಯ ನಡೆಯುವ ಸಂದರ್ಭ ಶೇ. 76 ರಷ್ಟು ಮಳೆಯಾಗುವ ಸಾಧ್ಯತೆ ಇದೆಯಂತೆ.

ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ನೇಪಾಳ ವಿರುದ್ಧ ಆಡಲಿದೆ. ಈ ಮ್ಯಾಚ್ ಸೆಪ್ಟೆಂಬರ್ 4 ಸೋಮವಾರದಂದು ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಆದರೆ, ಈ ಪಂದ್ಯಕ್ಕೂ ವರುಣನ ಕಾಟ ಇರಲಿದೆ ಎಂದು ಹೇಳಲಾಗಿದೆ. ಪಂದ್ಯ ನಡೆಯುವ ಸಂದರ್ಭ ಶೇ. 76 ರಷ್ಟು ಮಳೆಯಾಗುವ ಸಾಧ್ಯತೆ ಇದೆಯಂತೆ.

4 / 8
ಒಂದುವೇಳೆ ಭಾರತ-ನೇಪಾಳ ಪಂದ್ಯಕ್ಕೂ ವಡುಣ ಅಡ್ಡಿಪಡಿಸಿ ರದ್ದಾದರೆ ಆಗ ಟೀಮ್ ಇಂಡಿಯಾಕ್ಕೆ ಮತ್ತೆ ಒಂದು ಅಂಕ ಸಿಗುತ್ತದೆ. ಭಾರತ ಒಟ್ಟು 2 ಪಾಯಿಂಟ್​ನೊಂದಿಗೆ ಸೂಪರ್ 4 ಹಂತಕ್ಕೆ ತೇರ್ಗಡೆ ಆಗುತ್ತದೆ. ಹೀಗಾಗಿ ಮುಂದಿನ ಮ್ಯಾಚ್ ಟೀಮ್ ಇಂಡಿಯಾ ಗೆಲ್ಲಬೇಕು ಅಥವಾ ಪಂದ್ಯ ರದ್ದಾಗಬೇಕು ಎಂಬ ಎರಡು ಆಯ್ಕೆ ಇದೆಯಷ್ಟೆ.

ಒಂದುವೇಳೆ ಭಾರತ-ನೇಪಾಳ ಪಂದ್ಯಕ್ಕೂ ವಡುಣ ಅಡ್ಡಿಪಡಿಸಿ ರದ್ದಾದರೆ ಆಗ ಟೀಮ್ ಇಂಡಿಯಾಕ್ಕೆ ಮತ್ತೆ ಒಂದು ಅಂಕ ಸಿಗುತ್ತದೆ. ಭಾರತ ಒಟ್ಟು 2 ಪಾಯಿಂಟ್​ನೊಂದಿಗೆ ಸೂಪರ್ 4 ಹಂತಕ್ಕೆ ತೇರ್ಗಡೆ ಆಗುತ್ತದೆ. ಹೀಗಾಗಿ ಮುಂದಿನ ಮ್ಯಾಚ್ ಟೀಮ್ ಇಂಡಿಯಾ ಗೆಲ್ಲಬೇಕು ಅಥವಾ ಪಂದ್ಯ ರದ್ದಾಗಬೇಕು ಎಂಬ ಎರಡು ಆಯ್ಕೆ ಇದೆಯಷ್ಟೆ.

5 / 8
ಏಷ್ಯಾಕಪ್​ನಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾಗಿದ್ದರೆ ಯಾವುದೇ ಮೀಸಲು ದಿನವನ್ನು ನಿಗದಿ ಮಾಡಿಲ್ಲ. ಎಲ್ಲಾದರು ಪಂದ್ಯ ಆರಂಭಕ್ಕೆ ಮಳೆ ಅಡ್ಡಿಪಡಿಸಿ ಕೆಲ ಸಮಯ ಕಾದು ಬಳಿಕ ಇನ್ನೂ ಸಮಯವಿದ್ದರೆ ಎರಡೂ ತಂಡಗಳು ಕನಿಷ್ಠ 20 ಓವರ್‌ಗಳ ಪಂದ್ಯವನ್ನು ಆಡಬೇಕು. ಒಂದುವೇಳೆ ಎರಡನೇ ಬ್ಯಾಟಿಂಗ್ ಮಾಡುವಾಗ ಮಳೆ ಅಡ್ಡಿಪಡಿಸಿದರೆ ಡಕ್ವರ್ತ್ ಲೂಯಿಸ್ ನಿಯಮವನ್ನು ತರಲಾಗುತ್ತದೆ.

ಏಷ್ಯಾಕಪ್​ನಲ್ಲಿ ಮಳೆಯಿಂದಾಗಿ ಪಂದ್ಯ ರದ್ದಾಗಿದ್ದರೆ ಯಾವುದೇ ಮೀಸಲು ದಿನವನ್ನು ನಿಗದಿ ಮಾಡಿಲ್ಲ. ಎಲ್ಲಾದರು ಪಂದ್ಯ ಆರಂಭಕ್ಕೆ ಮಳೆ ಅಡ್ಡಿಪಡಿಸಿ ಕೆಲ ಸಮಯ ಕಾದು ಬಳಿಕ ಇನ್ನೂ ಸಮಯವಿದ್ದರೆ ಎರಡೂ ತಂಡಗಳು ಕನಿಷ್ಠ 20 ಓವರ್‌ಗಳ ಪಂದ್ಯವನ್ನು ಆಡಬೇಕು. ಒಂದುವೇಳೆ ಎರಡನೇ ಬ್ಯಾಟಿಂಗ್ ಮಾಡುವಾಗ ಮಳೆ ಅಡ್ಡಿಪಡಿಸಿದರೆ ಡಕ್ವರ್ತ್ ಲೂಯಿಸ್ ನಿಯಮವನ್ನು ತರಲಾಗುತ್ತದೆ.

6 / 8
ಏಷ್ಯಾಕಪ್ ಪಾಯಿಂಟ್ಸ್ ಟೇಬಲ್ ಗಮನಿಸಿದರೆ ಪಾಕ್ ಒಟ್ಟು 3 ಅಂಕದೊಂದಿಗೆ ಅಗ್ರಸ್ಥಾನದಲ್ಲಿದೆ. ಆಡಿರುವ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಜಯ ಹಾಗೂ ಮತ್ತೊಂದು ಪಂದ್ಯ ಮಳೆಯಿಂದ ರದ್ದಾದ ಕಾರಣ 3 ಅಂಕದೊಂದಿಗೆ ಸೂಪರ್-4 ಹಂತಕ್ಕೆ ಪ್ರವೇಶಿಸಿದೆ. ಭಾರತ 1 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಒಂದು ಪಂದ್ಯದಲ್ಲಿ ಸೋತಿರುವ ನೇಪಾಳ ಯಾವುದೇ ಅಂಕ ಪಡೆಯದೆ ಕೊನೆಯ ಸ್ಥಾನದಲ್ಲಿದೆ.

ಏಷ್ಯಾಕಪ್ ಪಾಯಿಂಟ್ಸ್ ಟೇಬಲ್ ಗಮನಿಸಿದರೆ ಪಾಕ್ ಒಟ್ಟು 3 ಅಂಕದೊಂದಿಗೆ ಅಗ್ರಸ್ಥಾನದಲ್ಲಿದೆ. ಆಡಿರುವ ಎರಡು ಪಂದ್ಯಗಳ ಪೈಕಿ ಒಂದರಲ್ಲಿ ಜಯ ಹಾಗೂ ಮತ್ತೊಂದು ಪಂದ್ಯ ಮಳೆಯಿಂದ ರದ್ದಾದ ಕಾರಣ 3 ಅಂಕದೊಂದಿಗೆ ಸೂಪರ್-4 ಹಂತಕ್ಕೆ ಪ್ರವೇಶಿಸಿದೆ. ಭಾರತ 1 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಒಂದು ಪಂದ್ಯದಲ್ಲಿ ಸೋತಿರುವ ನೇಪಾಳ ಯಾವುದೇ ಅಂಕ ಪಡೆಯದೆ ಕೊನೆಯ ಸ್ಥಾನದಲ್ಲಿದೆ.

7 / 8
ಗ್ರೂಪ್ ಬಿಯಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದೆ. ಆಡಿರುವ ಒಂದು ಪಂದ್ಯದಲ್ಲಿ ಗೆದ್ದು 2 ಅಂಕ ಪಡೆದುಕೊಂಡಿದೆ. ಅಫ್ಘಾನಿಸ್ತಾನ ದ್ವಿತೀಯ ಸ್ಥಾನದಲ್ಲಿದ್ದು, ಇನ್ನು ಯಾವುದೇ ಪಂದ್ಯವನ್ನು ಆಡಿಲ್ಲ. ಇಂದು ಬಾಂಗ್ಲಾವನ್ನು ಎದುರಿಸಲಿದೆ. ಮೂರನೇ ಸ್ಥಾನದಲ್ಲಿ ಬಾಂಗ್ಲಾದೇಶ ತಂಡವಿದೆ. ಆಡಿರುವ ಒಂದು ಪಂದ್ಯದಲ್ಲಿ ಸೋತು -0.951 ರನ್​ರೇಟ್ ಹೊಂದಿದೆ.

ಗ್ರೂಪ್ ಬಿಯಲ್ಲಿ ಶ್ರೀಲಂಕಾ ಅಗ್ರಸ್ಥಾನದಲ್ಲಿದೆ. ಆಡಿರುವ ಒಂದು ಪಂದ್ಯದಲ್ಲಿ ಗೆದ್ದು 2 ಅಂಕ ಪಡೆದುಕೊಂಡಿದೆ. ಅಫ್ಘಾನಿಸ್ತಾನ ದ್ವಿತೀಯ ಸ್ಥಾನದಲ್ಲಿದ್ದು, ಇನ್ನು ಯಾವುದೇ ಪಂದ್ಯವನ್ನು ಆಡಿಲ್ಲ. ಇಂದು ಬಾಂಗ್ಲಾವನ್ನು ಎದುರಿಸಲಿದೆ. ಮೂರನೇ ಸ್ಥಾನದಲ್ಲಿ ಬಾಂಗ್ಲಾದೇಶ ತಂಡವಿದೆ. ಆಡಿರುವ ಒಂದು ಪಂದ್ಯದಲ್ಲಿ ಸೋತು -0.951 ರನ್​ರೇಟ್ ಹೊಂದಿದೆ.

8 / 8
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ