AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಭಾರತ-ಪಾಕ್ ಮತ್ತೆ ಮುಖಾಮುಖಿ ಯಾವಾಗ?

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಆ ತಂಡಗಳೆಂದರೆ... ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ. ಈ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಗಾಗಿ ಸೆಣಸಾಟ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Jun 15, 2024 | 3:23 PM

Share
T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ (Pakistan) ತಂಡ ಹೊರಬಿದ್ದಿದೆ. ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಕಾರಣ ಭಾರತ ಮತ್ತು ಪಾಕಿಸ್ತಾನ್ ನಡುವಣ ಮತ್ತೊಂದು ಕದನವನ್ನು ನಿರೀಕ್ಷಿಸುವಂತಿಲ್ಲ. ಏಕೆಂದರೆ, ಒಂದು ವೇಳೆ ಪಾಕಿಸ್ತಾನ್ ತಂಡ ಸೂಪರ್-8 ಹಂತಕ್ಕೇರಿದ್ದರೆ, ಸೆಮಿಫೈನಲ್ ಅಥವಾ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಗಳಿದ್ದವು.

T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ (Pakistan) ತಂಡ ಹೊರಬಿದ್ದಿದೆ. ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಕಾರಣ ಭಾರತ ಮತ್ತು ಪಾಕಿಸ್ತಾನ್ ನಡುವಣ ಮತ್ತೊಂದು ಕದನವನ್ನು ನಿರೀಕ್ಷಿಸುವಂತಿಲ್ಲ. ಏಕೆಂದರೆ, ಒಂದು ವೇಳೆ ಪಾಕಿಸ್ತಾನ್ ತಂಡ ಸೂಪರ್-8 ಹಂತಕ್ಕೇರಿದ್ದರೆ, ಸೆಮಿಫೈನಲ್ ಅಥವಾ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಗಳಿದ್ದವು.

1 / 6
ಆದರೀಗ ಟೀಮ್ ಇಂಡಿಯಾ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದರೆ, ಅತ್ತ ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಗ್ಗರಿಸಿ ಗಂಟು ಮೂಟೆ ಕಟ್ಟಿದೆ. ಹೀಗಾಗಿ ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುವುದಿಲ್ಲ ಎಂಬುದು ಖಚಿತವಾಗಿದೆ.

ಆದರೀಗ ಟೀಮ್ ಇಂಡಿಯಾ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದರೆ, ಅತ್ತ ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಗ್ಗರಿಸಿ ಗಂಟು ಮೂಟೆ ಕಟ್ಟಿದೆ. ಹೀಗಾಗಿ ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುವುದಿಲ್ಲ ಎಂಬುದು ಖಚಿತವಾಗಿದೆ.

2 / 6
ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿ ಯಾವಾಗ? ಎಂಬ ಪ್ರಶ್ನೆಗೆ ಸದ್ಯದ ಉತ್ತರ ಮುಂಬರುವ ಚಾಂಪಿಯನ್ಸ್ ಟ್ರೋಫಿ. 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ ಎಂದೇ ಹೇಳಬಹುದು.

ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿ ಯಾವಾಗ? ಎಂಬ ಪ್ರಶ್ನೆಗೆ ಸದ್ಯದ ಉತ್ತರ ಮುಂಬರುವ ಚಾಂಪಿಯನ್ಸ್ ಟ್ರೋಫಿ. 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ ಎಂದೇ ಹೇಳಬಹುದು.

3 / 6
ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 8 ತಂಡಗಳು ಮಾತ್ರ ಕಣಕ್ಕಿಳಿಯಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ನಿರೀಕ್ಷಿಸಬಹುದು. ಅದರಂತೆ ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕಾಗಿ ಮುಂದಿನ ವರ್ಷದವರೆಗೆ ಕಾಯಲೇಬೇಕು.

ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 8 ತಂಡಗಳು ಮಾತ್ರ ಕಣಕ್ಕಿಳಿಯಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ನಿರೀಕ್ಷಿಸಬಹುದು. ಅದರಂತೆ ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕಾಗಿ ಮುಂದಿನ ವರ್ಷದವರೆಗೆ ಕಾಯಲೇಬೇಕು.

4 / 6
ಚಾಂಪಿಯನ್ಸ್ ಟ್ರೋಫಿ ಯಾವಾಗ?: ಪ್ರಸ್ತುತ ಮಾಹಿತಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿ  ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ಪಾಕ್​ಗೆ ಚಾಂಪಿಯನ್ಸ್ ಟ್ರೋಫಿ ಆಡಲು ತೆರಳಿದೆಯಾ ಎಂಬುದೇ ಪ್ರಶ್ನೆ.

ಚಾಂಪಿಯನ್ಸ್ ಟ್ರೋಫಿ ಯಾವಾಗ?: ಪ್ರಸ್ತುತ ಮಾಹಿತಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ಪಾಕ್​ಗೆ ಚಾಂಪಿಯನ್ಸ್ ಟ್ರೋಫಿ ಆಡಲು ತೆರಳಿದೆಯಾ ಎಂಬುದೇ ಪ್ರಶ್ನೆ.

5 / 6
ಒಂದು ವೇಳೆ ಭಾರತ ತಂಡವು ಪಾಕ್​ನಲ್ಲಿ ಚಾಂಪಿಯನ್ಸ್​ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೆ, ತಟಸ್ಥ ಸ್ಥಳದಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ಆಯೋಜನೆಗೊಳ್ಳಬಹುದು. ಅದರಂತೆ ಯುಎಇ ಅಥವಾ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

ಒಂದು ವೇಳೆ ಭಾರತ ತಂಡವು ಪಾಕ್​ನಲ್ಲಿ ಚಾಂಪಿಯನ್ಸ್​ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೆ, ತಟಸ್ಥ ಸ್ಥಳದಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ಆಯೋಜನೆಗೊಳ್ಳಬಹುದು. ಅದರಂತೆ ಯುಎಇ ಅಥವಾ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ