AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

T20 World Cup 2024: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಪಾಕಿಸ್ತಾನ್ ತಂಡದ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Jun 10, 2024 | 7:33 AM

Share
T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ (Pakistan) ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ (Pakistan) ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ಆಟಗಾರ ವಿರಾಟ್ ಕೊಹ್ಲಿ (4) ಬೇಗನೆ ನಿರ್ಗಮಿಸಿದರೆ, ರೋಹಿತ್ ಶರ್ಮಾ 13 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 31 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19 ಓವರ್​ಗಳಲ್ಲಿ 119 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು.

ಆರಂಭಿಕ ಆಟಗಾರ ವಿರಾಟ್ ಕೊಹ್ಲಿ (4) ಬೇಗನೆ ನಿರ್ಗಮಿಸಿದರೆ, ರೋಹಿತ್ ಶರ್ಮಾ 13 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 31 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19 ಓವರ್​ಗಳಲ್ಲಿ 119 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು.

2 / 6
120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭವನ್ನೇ ಪಡೆದಿತ್ತು. 11 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 89 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಬುಮ್ರಾ ಕಮಾಲ್ ಮಾಡಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭವನ್ನೇ ಪಡೆದಿತ್ತು. 11 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 89 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಬುಮ್ರಾ ಕಮಾಲ್ ಮಾಡಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

3 / 6
ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಜಯ ಸಾಧಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಯಿತು. ಅದು ಕೂಡ ಪಾಕಿಸ್ತಾನ್ ತಂಡದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಜಯ ಸಾಧಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಯಿತು. ಅದು ಕೂಡ ಪಾಕಿಸ್ತಾನ್ ತಂಡದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

4 / 6
ಅಂದರೆ ಟಿ20 ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು. ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ 6 ಬಾರಿ ಗೆಲ್ಲುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

ಅಂದರೆ ಟಿ20 ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು. ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ 6 ಬಾರಿ ಗೆಲ್ಲುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ  ಭಾರತ ತಂಡವು 7 ಬಾರಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ದ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಭಾರತೀಯ ಪಡೆ ತಮ್ಮದಾಗಿಸಿಕೊಂಡಿದೆ.

ಇದೀಗ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಭಾರತ ತಂಡವು 7 ಬಾರಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ದ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಭಾರತೀಯ ಪಡೆ ತಮ್ಮದಾಗಿಸಿಕೊಂಡಿದೆ.

6 / 6
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!