AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

T20 World Cup 2024: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಪಾಕಿಸ್ತಾನ್ ತಂಡದ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Jun 10, 2024 | 7:33 AM

Share
T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ (Pakistan) ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ (Pakistan) ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ಆಟಗಾರ ವಿರಾಟ್ ಕೊಹ್ಲಿ (4) ಬೇಗನೆ ನಿರ್ಗಮಿಸಿದರೆ, ರೋಹಿತ್ ಶರ್ಮಾ 13 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 31 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19 ಓವರ್​ಗಳಲ್ಲಿ 119 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು.

ಆರಂಭಿಕ ಆಟಗಾರ ವಿರಾಟ್ ಕೊಹ್ಲಿ (4) ಬೇಗನೆ ನಿರ್ಗಮಿಸಿದರೆ, ರೋಹಿತ್ ಶರ್ಮಾ 13 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 31 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19 ಓವರ್​ಗಳಲ್ಲಿ 119 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು.

2 / 6
120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭವನ್ನೇ ಪಡೆದಿತ್ತು. 11 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 89 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಬುಮ್ರಾ ಕಮಾಲ್ ಮಾಡಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭವನ್ನೇ ಪಡೆದಿತ್ತು. 11 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 89 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಬುಮ್ರಾ ಕಮಾಲ್ ಮಾಡಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

3 / 6
ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಜಯ ಸಾಧಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಯಿತು. ಅದು ಕೂಡ ಪಾಕಿಸ್ತಾನ್ ತಂಡದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಜಯ ಸಾಧಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಯಿತು. ಅದು ಕೂಡ ಪಾಕಿಸ್ತಾನ್ ತಂಡದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

4 / 6
ಅಂದರೆ ಟಿ20 ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು. ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ 6 ಬಾರಿ ಗೆಲ್ಲುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

ಅಂದರೆ ಟಿ20 ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು. ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ 6 ಬಾರಿ ಗೆಲ್ಲುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ  ಭಾರತ ತಂಡವು 7 ಬಾರಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ದ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಭಾರತೀಯ ಪಡೆ ತಮ್ಮದಾಗಿಸಿಕೊಂಡಿದೆ.

ಇದೀಗ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಭಾರತ ತಂಡವು 7 ಬಾರಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ದ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಭಾರತೀಯ ಪಡೆ ತಮ್ಮದಾಗಿಸಿಕೊಂಡಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್