AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

T20 World Cup 2024: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ರೋಚಕ ಜಯ ಸಾಧಿಸಿ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಪಾಕಿಸ್ತಾನ್ ತಂಡದ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದು ವಿಶೇಷ. ಆ ದಾಖಲೆ ಯಾವುದು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ...

ಝಾಹಿರ್ ಯೂಸುಫ್
|

Updated on: Jun 10, 2024 | 7:33 AM

Share
T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ (Pakistan) ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

T20 World Cup 2024: ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ (Pakistan) ತಂಡದ ನಾಯಕ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ಆಟಗಾರ ವಿರಾಟ್ ಕೊಹ್ಲಿ (4) ಬೇಗನೆ ನಿರ್ಗಮಿಸಿದರೆ, ರೋಹಿತ್ ಶರ್ಮಾ 13 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 31 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19 ಓವರ್​ಗಳಲ್ಲಿ 119 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು.

ಆರಂಭಿಕ ಆಟಗಾರ ವಿರಾಟ್ ಕೊಹ್ಲಿ (4) ಬೇಗನೆ ನಿರ್ಗಮಿಸಿದರೆ, ರೋಹಿತ್ ಶರ್ಮಾ 13 ರನ್​ಗಳಿಸಿ ಔಟಾದರು. 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 31 ಎಸೆತಗಳಲ್ಲಿ 6 ಫೋರ್​ಗಳೊಂದಿಗೆ 41 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 19 ಓವರ್​ಗಳಲ್ಲಿ 119 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು.

2 / 6
120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭವನ್ನೇ ಪಡೆದಿತ್ತು. 11 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 89 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಬುಮ್ರಾ ಕಮಾಲ್ ಮಾಡಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

120 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭವನ್ನೇ ಪಡೆದಿತ್ತು. 11 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 89 ರನ್​ ಕಲೆಹಾಕಿದ್ದರು. ಈ ಹಂತದಲ್ಲಿ ದಾಳಿಗಿಳಿದ ಹಾರ್ದಿಕ್ ಪಾಂಡ್ಯ ಹಾಗೂ ಜಸ್​ಪ್ರೀತ್ ಬುಮ್ರಾ ಇಡೀ ಪಂದ್ಯದ ಚಿತ್ರಣ ಬದಲಿಸಿದರು. ಅದರಲ್ಲೂ ಕೊನೆಯ ಓವರ್​ಗಳ ವೇಳೆ ಬುಮ್ರಾ ಕಮಾಲ್ ಮಾಡಿದರು. ಪರಿಣಾಮ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಪಾಕಿಸ್ತಾನ್ 113 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

3 / 6
ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಜಯ ಸಾಧಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಯಿತು. ಅದು ಕೂಡ ಪಾಕಿಸ್ತಾನ್ ತಂಡದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಜಯ ಸಾಧಿಸಿದ ವಿಶ್ವ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಯಿತು. ಅದು ಕೂಡ ಪಾಕಿಸ್ತಾನ್ ತಂಡದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

4 / 6
ಅಂದರೆ ಟಿ20 ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು. ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ 6 ಬಾರಿ ಗೆಲ್ಲುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

ಅಂದರೆ ಟಿ20 ವಿಶ್ವಕಪ್​ನಲ್ಲಿ ಒಂದೇ ತಂಡದ ವಿರುದ್ಧ ಅತೀ ಹೆಚ್ಚು ಬಾರಿ ಗೆದ್ದ ದಾಖಲೆ ಪಾಕ್ ತಂಡದ ಹೆಸರಿನಲ್ಲಿತ್ತು. ಬಾಂಗ್ಲಾದೇಶ್ ವಿರುದ್ಧ ಪಾಕಿಸ್ತಾನ್ ತಂಡ 6 ಬಾರಿ ಗೆಲ್ಲುವ ಮೂಲಕ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ  ಭಾರತ ತಂಡವು 7 ಬಾರಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ದ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಭಾರತೀಯ ಪಡೆ ತಮ್ಮದಾಗಿಸಿಕೊಂಡಿದೆ.

ಇದೀಗ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಹೊಸ ಇತಿಹಾಸ ನಿರ್ಮಿಸಿದೆ. ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಭಾರತ ತಂಡವು 7 ಬಾರಿ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಒಂದೇ ತಂಡದ ವಿರುದ್ದ ಅತ್ಯಧಿಕ ಗೆಲುವು ದಾಖಲಿಸಿದ ವಿಶ್ವ ದಾಖಲೆಯನ್ನು ಭಾರತೀಯ ಪಡೆ ತಮ್ಮದಾಗಿಸಿಕೊಂಡಿದೆ.

6 / 6
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?