AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishabh Pant: ರಿಷಭ್ ಪಂತ್​ಗಾಗಿ ರಾಹುಲ್ ದ್ರಾವಿಡ್ ಮಾಸ್ಟರ್​ ಪ್ಲ್ಯಾನ್

India vs South Africa: ಪಂತ್ ಅವರ ತಪ್ಪುಗಳನ್ನು ತಿದ್ದುವ ಪ್ರಯತ್ನವನ್ನು ಮಾಡಿದ್ದರು. ಹೀಗಾಗಿ ನಾಲ್ಕನೇ ಟಿ20 ಪಂದ್ಯದಲ್ಲಿ ರಿಷಭ್ ಪಂತ್ ಮತ್ತೆ ಫಾರ್ಮ್​ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

TV9 Web
| Edited By: |

Updated on: Jun 17, 2022 | 11:58 AM

Share
ಸೌತ್ ಆಫ್ರಿಕಾ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೂ, ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯದ ಚಿಂತೆ ದೂರವಾಗಿಲ್ಲ. ಟೀಮ್ ಇಂಡಿಯಾ ಆರಂಭಿಕರಾದ ಇಶಾನ್ ಕಿಶನ್ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದ್ದರೂ, ಮಧ್ಯಮ ಕ್ರಮಾಂಕದಲ್ಲಿ ರನ್​ ವೇಗ ಕುಂಠಿತವಾಗುತ್ತಿದೆ.

ಸೌತ್ ಆಫ್ರಿಕಾ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೂ, ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯದ ಚಿಂತೆ ದೂರವಾಗಿಲ್ಲ. ಟೀಮ್ ಇಂಡಿಯಾ ಆರಂಭಿಕರಾದ ಇಶಾನ್ ಕಿಶನ್ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದ್ದರೂ, ಮಧ್ಯಮ ಕ್ರಮಾಂಕದಲ್ಲಿ ರನ್​ ವೇಗ ಕುಂಠಿತವಾಗುತ್ತಿದೆ.

1 / 5
ಅದರಲ್ಲೂ ತಂಡದ ನಾಯಕ ರಿಷಭ್ ಪಂತ್ ಸತತವಾಗಿ ವೈಫಲ್ಯ ಹೊಂದುತ್ತಿರುವುದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಪಂತ್ ಕಳೆದ 3 ಟಿ20 ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 40 ರನ್ ಗಳಿಸಲಷ್ಟೇ.  ಅವರ ಬ್ಯಾಟ್‌ನಿಂದ ಕೇವಲ 2 ಬೌಂಡರಿ ಮತ್ತು 2 ಸಿಕ್ಸರ್‌ಗಳು ಮಾತ್ರ ಮೂಡಿ ಬಂದಿವೆ. ಕಳೆದ ಎರಡು ಪಂದ್ಯಗಳಲ್ಲಿ ಪಂತ್ ಕೇವಲ 5 ಮತ್ತು 6 ರನ್ ಗಳಿಸಿದ್ದು, ಅತ್ಯಂತ ಕೆಟ್ಟ ಹೊಡೆತಗಳನ್ನು ಆಡುವ ಮೂಲಕ ತಮ್ಮ ವಿಕೆಟ್ ಕೈಚೆಲ್ಲಿದ್ದಾರೆ.

ಅದರಲ್ಲೂ ತಂಡದ ನಾಯಕ ರಿಷಭ್ ಪಂತ್ ಸತತವಾಗಿ ವೈಫಲ್ಯ ಹೊಂದುತ್ತಿರುವುದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಪಂತ್ ಕಳೆದ 3 ಟಿ20 ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 40 ರನ್ ಗಳಿಸಲಷ್ಟೇ. ಅವರ ಬ್ಯಾಟ್‌ನಿಂದ ಕೇವಲ 2 ಬೌಂಡರಿ ಮತ್ತು 2 ಸಿಕ್ಸರ್‌ಗಳು ಮಾತ್ರ ಮೂಡಿ ಬಂದಿವೆ. ಕಳೆದ ಎರಡು ಪಂದ್ಯಗಳಲ್ಲಿ ಪಂತ್ ಕೇವಲ 5 ಮತ್ತು 6 ರನ್ ಗಳಿಸಿದ್ದು, ಅತ್ಯಂತ ಕೆಟ್ಟ ಹೊಡೆತಗಳನ್ನು ಆಡುವ ಮೂಲಕ ತಮ್ಮ ವಿಕೆಟ್ ಕೈಚೆಲ್ಲಿದ್ದಾರೆ.

2 / 5
ಪಂತ್ ಅವರ ಕಳಪೆ ಫಾರ್ಮ್ ನೋಡಿ ಇದೀಗ ಕೋಚ್ ರಾಹುಲ್ ದ್ರಾವಿಡ್ ಚಿಂತೆ ಕೂಡ ಹೆಚ್ಚಾಗಿದ್ದು,  ಹೀಗಾಗಿ ಅವರನ್ನು ಲಯಕ್ಕೆ ತರುವ ಕೆಲಸವನ್ನು ಸ್ವತಃ ಮುಖ್ಯ ಕೋಚ್ ಕೈಗೆತ್ತಿಕೊಂಡಿದ್ದಾರೆ. ರಾಜ್​ಕೋಟ್​ನಲ್ಲಿ ನಡೆಯಲಿರುವ 4ನೇ ಟಿ20 ಪಂದ್ಯಕ್ಕೂ ಮುನ್ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪಂತ್​ನೊಂದಿಗೆ ಸಾಕಷ್ಟು ಸಮಯ ಕಳೆದಿದ್ದರು.

ಪಂತ್ ಅವರ ಕಳಪೆ ಫಾರ್ಮ್ ನೋಡಿ ಇದೀಗ ಕೋಚ್ ರಾಹುಲ್ ದ್ರಾವಿಡ್ ಚಿಂತೆ ಕೂಡ ಹೆಚ್ಚಾಗಿದ್ದು, ಹೀಗಾಗಿ ಅವರನ್ನು ಲಯಕ್ಕೆ ತರುವ ಕೆಲಸವನ್ನು ಸ್ವತಃ ಮುಖ್ಯ ಕೋಚ್ ಕೈಗೆತ್ತಿಕೊಂಡಿದ್ದಾರೆ. ರಾಜ್​ಕೋಟ್​ನಲ್ಲಿ ನಡೆಯಲಿರುವ 4ನೇ ಟಿ20 ಪಂದ್ಯಕ್ಕೂ ಮುನ್ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಪಂತ್​ನೊಂದಿಗೆ ಸಾಕಷ್ಟು ಸಮಯ ಕಳೆದಿದ್ದರು.

3 / 5
 ಪಂತ್ ಅವರು ಶಾಟ್ ಆಯ್ಕೆಯ ಬಗ್ಗೆ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದರು. ಅಷ್ಟೇ ಅಲ್ಲದೆ ದ್ರಾವಿಡ್ ಅವರ ಸಲಹೆಯಂತೆ ತುಂಬಾ ಹೊತ್ತು ಬ್ಯಾಟಿಂಗ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ರಾಹುಲ್ ದ್ರಾವಿಡ್ ಪಂತ್ ಅವರ ತಪ್ಪುಗಳನ್ನು ತಿದ್ದುವ ಪ್ರಯತ್ನವನ್ನು ಮಾಡಿದ್ದರು. ಹೀಗಾಗಿ ನಾಲ್ಕನೇ ಟಿ20 ಪಂದ್ಯದಲ್ಲಿ ರಿಷಭ್ ಪಂತ್ ಮತ್ತೆ ಫಾರ್ಮ್​ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

ಪಂತ್ ಅವರು ಶಾಟ್ ಆಯ್ಕೆಯ ಬಗ್ಗೆ ರಾಹುಲ್ ದ್ರಾವಿಡ್ ಅವರೊಂದಿಗೆ ಚರ್ಚಿಸಿದ್ದರು. ಅಷ್ಟೇ ಅಲ್ಲದೆ ದ್ರಾವಿಡ್ ಅವರ ಸಲಹೆಯಂತೆ ತುಂಬಾ ಹೊತ್ತು ಬ್ಯಾಟಿಂಗ್ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ರಾಹುಲ್ ದ್ರಾವಿಡ್ ಪಂತ್ ಅವರ ತಪ್ಪುಗಳನ್ನು ತಿದ್ದುವ ಪ್ರಯತ್ನವನ್ನು ಮಾಡಿದ್ದರು. ಹೀಗಾಗಿ ನಾಲ್ಕನೇ ಟಿ20 ಪಂದ್ಯದಲ್ಲಿ ರಿಷಭ್ ಪಂತ್ ಮತ್ತೆ ಫಾರ್ಮ್​ಗೆ ಮರಳುವ ವಿಶ್ವಾಸದಲ್ಲಿದ್ದಾರೆ.

4 / 5
ಪಂತ್ ಹೊರತಾಗಿ ಶ್ರೇಯಸ್ ಅಯ್ಯರ್ ಕೂಡ ನೆಟ್ಸ್ ನಲ್ಲಿ ಹೆಚ್ಚುವರಿ ಅಭ್ಯಾಸ ನಡೆಸಿದರು. ಈ ಸರಣಿಯಲ್ಲಿ ಶ್ರೇಯಸ್ ಅಯ್ಯರ್ 3 ಪಂದ್ಯಗಳಲ್ಲಿ 30 ಸರಾಸರಿಯಲ್ಲಿ 90 ರನ್ ಗಳಿಸಿದ್ದಾರೆ. ಅಯ್ಯರ್ ಅವರ ಬ್ಯಾಟಿಂಗ್‌ನಲ್ಲಿ ಕಂಡುಬರುವ ಸಮಸ್ಯೆ ಎಂದರೆ ವೇಗದ ಬ್ಯಾಟಿಂಗ್​ಗೆ ಒಗ್ಗಿಕೊಳ್ಳದಿರುವುದು. ಹೀಗಾಗಿ ರಾಹುಲ್ ನೇತೃತ್ವದಲ್ಲಿ ಅಯ್ಯರ್ ಕೂಡ ಬಿರುಸಿನ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದರು.

ಪಂತ್ ಹೊರತಾಗಿ ಶ್ರೇಯಸ್ ಅಯ್ಯರ್ ಕೂಡ ನೆಟ್ಸ್ ನಲ್ಲಿ ಹೆಚ್ಚುವರಿ ಅಭ್ಯಾಸ ನಡೆಸಿದರು. ಈ ಸರಣಿಯಲ್ಲಿ ಶ್ರೇಯಸ್ ಅಯ್ಯರ್ 3 ಪಂದ್ಯಗಳಲ್ಲಿ 30 ಸರಾಸರಿಯಲ್ಲಿ 90 ರನ್ ಗಳಿಸಿದ್ದಾರೆ. ಅಯ್ಯರ್ ಅವರ ಬ್ಯಾಟಿಂಗ್‌ನಲ್ಲಿ ಕಂಡುಬರುವ ಸಮಸ್ಯೆ ಎಂದರೆ ವೇಗದ ಬ್ಯಾಟಿಂಗ್​ಗೆ ಒಗ್ಗಿಕೊಳ್ಳದಿರುವುದು. ಹೀಗಾಗಿ ರಾಹುಲ್ ನೇತೃತ್ವದಲ್ಲಿ ಅಯ್ಯರ್ ಕೂಡ ಬಿರುಸಿನ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದರು.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!