AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಧಿಕ ರನ್, ಹೀನಾಯ ಸೋಲು: ಸೌತ್ ಆಫ್ರಿಕಾದಲ್ಲಿ ಟೀಮ್ ಇಂಡಿಯಾ ದರ್ಬಾರ್

India vs South africa: ಸೌತ್ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 4 ಪಂದ್ಯಗಳ ಟಿ20 ಸರಣಿಯನ್ನು ಭಾರತ ತಂಡ 3-1 ಅಂತರದಿಂದ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Nov 16, 2024 | 7:23 AM

Share
ಟಿ20 ಕ್ರಿಕೆಟ್​ನ ಬಲಿಷ್ಠ ಪಡೆ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲೇ ಮಕಾಡೆ ಮಲಗಿಸಿದೆ. ಅದು ಕೂಡ ಅತ್ಯಧಿಕ ರನ್ ಕಲೆಹಾಕಿ, ಅತ್ಯಂತ ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ.

ಟಿ20 ಕ್ರಿಕೆಟ್​ನ ಬಲಿಷ್ಠ ಪಡೆ ಸೌತ್ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲೇ ಮಕಾಡೆ ಮಲಗಿಸಿದೆ. ಅದು ಕೂಡ ಅತ್ಯಧಿಕ ರನ್ ಕಲೆಹಾಕಿ, ಅತ್ಯಂತ ಹೀನಾಯವಾಗಿ ಸೋಲಿಸುವ ಮೂಲಕ ಎಂಬುದು ವಿಶೇಷ.

1 / 8
ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭ ಒದಗಿಸಿದ್ದರು.

ಜೋಹಾನ್ಸ್​ಬರ್ಗ್​ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭ ಒದಗಿಸಿದ್ದರು.

2 / 8
ಮೊದಲ ವಿಕೆಟ್‌ಗೆ 73 ರನ್ ಗಳ ಜೊತೆಯಾಟವಾಡಿ ಅಭಿಷೇಕ್ ಶರ್ಮಾ (36) ಔಟಾದರು. ಆ ಬಳಿಕ ಶುರುವಾಗಿದ್ದೇ ಸ್ಯಾಮ್ಸನ್ - ತಿಲಕ್ ವರ್ಮಾ ಅಬ್ಬರ. ಈ ಜೋಡಿಯು 2ನೇ ವಿಕೆಟ್‌ಗೆ 210 ರನ್​ಗಳ ಜೊತೆಯಾಟವಾಡಿದರು.

ಮೊದಲ ವಿಕೆಟ್‌ಗೆ 73 ರನ್ ಗಳ ಜೊತೆಯಾಟವಾಡಿ ಅಭಿಷೇಕ್ ಶರ್ಮಾ (36) ಔಟಾದರು. ಆ ಬಳಿಕ ಶುರುವಾಗಿದ್ದೇ ಸ್ಯಾಮ್ಸನ್ - ತಿಲಕ್ ವರ್ಮಾ ಅಬ್ಬರ. ಈ ಜೋಡಿಯು 2ನೇ ವಿಕೆಟ್‌ಗೆ 210 ರನ್​ಗಳ ಜೊತೆಯಾಟವಾಡಿದರು.

3 / 8
ಇದರ ನಡುವೆ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ ಅಜೇಯ 106 ರನ್ ಬಾರಿಸಿದರೆ, ತಿಲಕ್ ವರ್ಮಾ 47 ಎಸೆತಗಳಲ್ಲಿ ಅಜೇಯ 120 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟದೊಂದಿಗೆ 283 ರನ್ ಕಲೆಹಾಕಿತು.

ಇದರ ನಡುವೆ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ ಅಜೇಯ 106 ರನ್ ಬಾರಿಸಿದರೆ, ತಿಲಕ್ ವರ್ಮಾ 47 ಎಸೆತಗಳಲ್ಲಿ ಅಜೇಯ 120 ರನ್ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 1 ವಿಕೆಟ್ ನಷ್ಟದೊಂದಿಗೆ 283 ರನ್ ಕಲೆಹಾಕಿತು.

4 / 8
ಈ 283 ರನ್​ಗಳೊಂದಿಗೆ ಸೌತ್ ಆಫ್ರಿಕಾದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007ರ ಟಿ20 ವಿಶ್ವಕಪ್​ನಲ್ಲಿ ಜೋಹಾನ್ಸ್​ಬರ್ಗ್​ನಲ್ಲಿ ಶ್ರೀಲಂಕಾ ತಂಡವು ಕೀನ್ಯಾ ವಿರುದ್ಧ 260 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 283 ರನ್ ಸಿಡಿಸಿ ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

ಈ 283 ರನ್​ಗಳೊಂದಿಗೆ ಸೌತ್ ಆಫ್ರಿಕಾದಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007ರ ಟಿ20 ವಿಶ್ವಕಪ್​ನಲ್ಲಿ ಜೋಹಾನ್ಸ್​ಬರ್ಗ್​ನಲ್ಲಿ ಶ್ರೀಲಂಕಾ ತಂಡವು ಕೀನ್ಯಾ ವಿರುದ್ಧ 260 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 283 ರನ್ ಸಿಡಿಸಿ ಟೀಮ್ ಇಂಡಿಯಾ ಸೌತ್ ಆಫ್ರಿಕಾದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

5 / 8
ಇನ್ನು ಟೀಮ್ ಇಂಡಿಯಾ ನೀಡಿದ 283 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 18.2 ಓವರ್​ಗಳಲ್ಲಿ 148 ರನ್​ಗಳಿಗೆ ಆಲೌಟ್ ಆದರು. ಈ ಮೂಲಕ ಭಾರತ ತಂಡವು 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಇನ್ನು ಟೀಮ್ ಇಂಡಿಯಾ ನೀಡಿದ 283 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 18.2 ಓವರ್​ಗಳಲ್ಲಿ 148 ರನ್​ಗಳಿಗೆ ಆಲೌಟ್ ಆದರು. ಈ ಮೂಲಕ ಭಾರತ ತಂಡವು 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

6 / 8
ವಿಶೇಷ ಎಂದರೆ ಇದು ಸೌತ್ ಆಫ್ರಿಕಾದಲ್ಲಿ ಸೌತ್ ಆಫ್ರಿಕಾ ತಂಡದ ಅತ್ಯಂತ ಹೀನಾಯ ಸೋಲು. ಇದಕ್ಕೂ ಮುನ್ನ 2023 ರಲ್ಲಿ ಡರ್ಬನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 111 ರನ್​ಗಳಿಗೆ ಪರಾಜಯಗೊಂಡಿದ್ದು ಅತ್ಯಂತ ಹೀನಾಯ ಸೋಲಾಗಿತ್ತು. ಇದೀಗ ಭಾರತದ ವಿರುದ್ಧ 135 ರನ್​ಗಳಿಂದ ಸೋಲುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ವಿಶೇಷ ಎಂದರೆ ಇದು ಸೌತ್ ಆಫ್ರಿಕಾದಲ್ಲಿ ಸೌತ್ ಆಫ್ರಿಕಾ ತಂಡದ ಅತ್ಯಂತ ಹೀನಾಯ ಸೋಲು. ಇದಕ್ಕೂ ಮುನ್ನ 2023 ರಲ್ಲಿ ಡರ್ಬನ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ 111 ರನ್​ಗಳಿಗೆ ಪರಾಜಯಗೊಂಡಿದ್ದು ಅತ್ಯಂತ ಹೀನಾಯ ಸೋಲಾಗಿತ್ತು. ಇದೀಗ ಭಾರತದ ವಿರುದ್ಧ 135 ರನ್​ಗಳಿಂದ ಸೋಲುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ.

7 / 8
ಅಂದರೆ ಜೋಹಾರ್ನ್ಸ್​ಬರ್ಗ್​ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದ ಮೂಲಕ ಸೌತ್ ಆಫ್ರಿಕಾ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ತಂಡವೆಂಬ ದಾಖಲೆಯನ್ನು ಟೀಮ್ ಇಂಡಿಯಾ ಬರೆದಿದೆ. ಅದರ ಜೊತೆಗೆ ತವರಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಅತ್ಯಂತ ಹೀನಾಯವಾಗಿ ಸೋಲಿಸಿದ ಹಿರಿಮೆ ಕೂಡ ಭಾರತ ತಂಡದ ಪಾಲಾಗಿದೆ.

ಅಂದರೆ ಜೋಹಾರ್ನ್ಸ್​ಬರ್ಗ್​ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದ ಮೂಲಕ ಸೌತ್ ಆಫ್ರಿಕಾ ವಿರುದ್ಧ ಅತ್ಯಧಿಕ ರನ್ ಕಲೆಹಾಕಿದ ತಂಡವೆಂಬ ದಾಖಲೆಯನ್ನು ಟೀಮ್ ಇಂಡಿಯಾ ಬರೆದಿದೆ. ಅದರ ಜೊತೆಗೆ ತವರಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಅತ್ಯಂತ ಹೀನಾಯವಾಗಿ ಸೋಲಿಸಿದ ಹಿರಿಮೆ ಕೂಡ ಭಾರತ ತಂಡದ ಪಾಲಾಗಿದೆ.

8 / 8
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್