AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs south africa: ಟೀಮ್ ಇಂಡಿಯಾದಲ್ಲಿ ದ್ರಾವಿಡ್ ಇರುವುದೇ ದಕ್ಷಿಣ ಆಫ್ರಿಕಾದ ದೊಡ್ಡ ಚಿಂತೆ

India vs south africa: ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 20, 2021 | 6:31 PM

Share
ಭಾರತ-ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

ಭಾರತ-ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

1 / 6
ಹರಿಣರ ನಾಡಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಗೆದ್ದಿರುವುದು ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ. ಇನ್ನು ಕಳೆದ ಬಾರಿ 2018 ರಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ 1-2 ಅಂತರದಿಂದ ಸರಣಿ ಸೋತಿತ್ತು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಆಡಲು ಸಜ್ಜಾಗಿದೆ.

ಹರಿಣರ ನಾಡಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಗೆದ್ದಿರುವುದು ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ. ಇನ್ನು ಕಳೆದ ಬಾರಿ 2018 ರಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ 1-2 ಅಂತರದಿಂದ ಸರಣಿ ಸೋತಿತ್ತು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಆಡಲು ಸಜ್ಜಾಗಿದೆ.

2 / 6
ಆದರೆ ಈ ಬಾರಿ ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಆಡುತ್ತಿರುವುದು ದಕ್ಷಿಣ ಆಫ್ರಿಕಾ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಪಾರುಪತ್ಯ ಮೆರೆದಿದ್ದ ದಕ್ಷಿಣ ಆಫ್ರಿಕಾಗೆ ಮೊದಲ ಸೋಲು ತೋರಿಸಿದ್ದೇ ರಾಹುಲ್ ದ್ರಾವಿಡ್.

ಆದರೆ ಈ ಬಾರಿ ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಆಡುತ್ತಿರುವುದು ದಕ್ಷಿಣ ಆಫ್ರಿಕಾ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಪಾರುಪತ್ಯ ಮೆರೆದಿದ್ದ ದಕ್ಷಿಣ ಆಫ್ರಿಕಾಗೆ ಮೊದಲ ಸೋಲು ತೋರಿಸಿದ್ದೇ ರಾಹುಲ್ ದ್ರಾವಿಡ್.

3 / 6
ಹೌದು, ಡಿಸೆಂಬರ್ 2006 ರಲ್ಲಿ ನಡೆದ ಸೆಂಚುರಿಯನ್​ನಲ್ಲಿನ ಟೆಸ್ಟ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 123 ರನ್‌ಗಳಿಂದ ಸೋಲಿಸಿತು. ಇದು ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡದ ಮೊದಲ ಟೆಸ್ಟ್ ಗೆಲುವು ಎಂಬುದು ವಿಶೇಷ. ಆ ಸಮಯದಲ್ಲಿ ಭಾರತ ಟೆಸ್ಟ್ ತಂಡದ ನಾಯಕ ರಾಹುಲ್ ದ್ರಾವಿಡ್. ಇದೀಗ ಅವರೇ ಟೀಮ್ ಇಂಡಿಯಾದ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಈ ಹಿಂದಿಗಿಂತ ಈ ಬಾರಿ ಭಾರತ ತಂಡದ ಬಲಿಷ್ಠವಾಗಿ ಕಾಣಿಸಿಕೊಳ್ಳುತ್ತಿದೆ.

ಹೌದು, ಡಿಸೆಂಬರ್ 2006 ರಲ್ಲಿ ನಡೆದ ಸೆಂಚುರಿಯನ್​ನಲ್ಲಿನ ಟೆಸ್ಟ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 123 ರನ್‌ಗಳಿಂದ ಸೋಲಿಸಿತು. ಇದು ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡದ ಮೊದಲ ಟೆಸ್ಟ್ ಗೆಲುವು ಎಂಬುದು ವಿಶೇಷ. ಆ ಸಮಯದಲ್ಲಿ ಭಾರತ ಟೆಸ್ಟ್ ತಂಡದ ನಾಯಕ ರಾಹುಲ್ ದ್ರಾವಿಡ್. ಇದೀಗ ಅವರೇ ಟೀಮ್ ಇಂಡಿಯಾದ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಈ ಹಿಂದಿಗಿಂತ ಈ ಬಾರಿ ಭಾರತ ತಂಡದ ಬಲಿಷ್ಠವಾಗಿ ಕಾಣಿಸಿಕೊಳ್ಳುತ್ತಿದೆ.

4 / 6
ಏಕೆಂದರೆ 15 ವರ್ಷಗಳ ಹಿಂದೆ ರಣತಂತ್ರ ಹೆಣೆದಿದ್ದ ಅದೇ ರಾಹುಲ್ ದ್ರಾವಿಡ್ ಇದೀಗ ಇಡೀ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಕೂಡ ಮೂಡಿಸಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಅಂಡರ್-19 ಮತ್ತು ಭಾರತ-ಎ ತಂಡಗಳಲ್ಲಿ ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಆಟಗಾರರೇ ಈಗ ಟೀಮ್ ಇಂಡಿಯಾದಲ್ಲಿದೆ. ಹೀಗಾಗಿ ಆಟಗಾರರು ಹಾಗೂ ಕೋಚ್ ನಡುವೆ ಈ ಹಿಂದಿಗಿಂತಲೂ ಉತ್ತಮ ಹೊಂದಾಣಿಕೆ ಕಂಡು ಬರುತ್ತಿದೆ.

ಏಕೆಂದರೆ 15 ವರ್ಷಗಳ ಹಿಂದೆ ರಣತಂತ್ರ ಹೆಣೆದಿದ್ದ ಅದೇ ರಾಹುಲ್ ದ್ರಾವಿಡ್ ಇದೀಗ ಇಡೀ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಕೂಡ ಮೂಡಿಸಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಅಂಡರ್-19 ಮತ್ತು ಭಾರತ-ಎ ತಂಡಗಳಲ್ಲಿ ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಆಟಗಾರರೇ ಈಗ ಟೀಮ್ ಇಂಡಿಯಾದಲ್ಲಿದೆ. ಹೀಗಾಗಿ ಆಟಗಾರರು ಹಾಗೂ ಕೋಚ್ ನಡುವೆ ಈ ಹಿಂದಿಗಿಂತಲೂ ಉತ್ತಮ ಹೊಂದಾಣಿಕೆ ಕಂಡು ಬರುತ್ತಿದೆ.

5 / 6
ಹೀಗಾಗಿ ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ. ಹೀಗಾಗಿ ಮೊದಲ ಪಂದ್ಯವೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಹೀಗಾಗಿ ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ. ಹೀಗಾಗಿ ಮೊದಲ ಪಂದ್ಯವೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!