AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs south africa: ಟೀಮ್ ಇಂಡಿಯಾದಲ್ಲಿ ದ್ರಾವಿಡ್ ಇರುವುದೇ ದಕ್ಷಿಣ ಆಫ್ರಿಕಾದ ದೊಡ್ಡ ಚಿಂತೆ

India vs south africa: ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ.

TV9 Web
| Edited By: |

Updated on: Dec 20, 2021 | 6:31 PM

Share
ಭಾರತ-ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

ಭಾರತ-ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಡಿಸೆಂಬರ್ 26 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

1 / 6
ಹರಿಣರ ನಾಡಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಗೆದ್ದಿರುವುದು ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ. ಇನ್ನು ಕಳೆದ ಬಾರಿ 2018 ರಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ 1-2 ಅಂತರದಿಂದ ಸರಣಿ ಸೋತಿತ್ತು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಆಡಲು ಸಜ್ಜಾಗಿದೆ.

ಹರಿಣರ ನಾಡಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಗೆದ್ದಿರುವುದು ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ. ಇನ್ನು ಕಳೆದ ಬಾರಿ 2018 ರಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ 1-2 ಅಂತರದಿಂದ ಸರಣಿ ಸೋತಿತ್ತು. ಇದೀಗ ಮತ್ತೊಮ್ಮೆ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಸರಣಿ ಆಡಲು ಸಜ್ಜಾಗಿದೆ.

2 / 6
ಆದರೆ ಈ ಬಾರಿ ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಆಡುತ್ತಿರುವುದು ದಕ್ಷಿಣ ಆಫ್ರಿಕಾ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಪಾರುಪತ್ಯ ಮೆರೆದಿದ್ದ ದಕ್ಷಿಣ ಆಫ್ರಿಕಾಗೆ ಮೊದಲ ಸೋಲು ತೋರಿಸಿದ್ದೇ ರಾಹುಲ್ ದ್ರಾವಿಡ್.

ಆದರೆ ಈ ಬಾರಿ ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಟೆಸ್ಟ್ ಆಡುತ್ತಿರುವುದು ದಕ್ಷಿಣ ಆಫ್ರಿಕಾ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ಟೆಸ್ಟ್​ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿರುದ್ದ ಪಾರುಪತ್ಯ ಮೆರೆದಿದ್ದ ದಕ್ಷಿಣ ಆಫ್ರಿಕಾಗೆ ಮೊದಲ ಸೋಲು ತೋರಿಸಿದ್ದೇ ರಾಹುಲ್ ದ್ರಾವಿಡ್.

3 / 6
ಹೌದು, ಡಿಸೆಂಬರ್ 2006 ರಲ್ಲಿ ನಡೆದ ಸೆಂಚುರಿಯನ್​ನಲ್ಲಿನ ಟೆಸ್ಟ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 123 ರನ್‌ಗಳಿಂದ ಸೋಲಿಸಿತು. ಇದು ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡದ ಮೊದಲ ಟೆಸ್ಟ್ ಗೆಲುವು ಎಂಬುದು ವಿಶೇಷ. ಆ ಸಮಯದಲ್ಲಿ ಭಾರತ ಟೆಸ್ಟ್ ತಂಡದ ನಾಯಕ ರಾಹುಲ್ ದ್ರಾವಿಡ್. ಇದೀಗ ಅವರೇ ಟೀಮ್ ಇಂಡಿಯಾದ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಈ ಹಿಂದಿಗಿಂತ ಈ ಬಾರಿ ಭಾರತ ತಂಡದ ಬಲಿಷ್ಠವಾಗಿ ಕಾಣಿಸಿಕೊಳ್ಳುತ್ತಿದೆ.

ಹೌದು, ಡಿಸೆಂಬರ್ 2006 ರಲ್ಲಿ ನಡೆದ ಸೆಂಚುರಿಯನ್​ನಲ್ಲಿನ ಟೆಸ್ಟ್ ಪಂದ್ಯದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 123 ರನ್‌ಗಳಿಂದ ಸೋಲಿಸಿತು. ಇದು ದಕ್ಷಿಣ ಆಫ್ರಿಕಾದಲ್ಲಿ ಭಾರತ ಕ್ರಿಕೆಟ್ ತಂಡದ ಮೊದಲ ಟೆಸ್ಟ್ ಗೆಲುವು ಎಂಬುದು ವಿಶೇಷ. ಆ ಸಮಯದಲ್ಲಿ ಭಾರತ ಟೆಸ್ಟ್ ತಂಡದ ನಾಯಕ ರಾಹುಲ್ ದ್ರಾವಿಡ್. ಇದೀಗ ಅವರೇ ಟೀಮ್ ಇಂಡಿಯಾದ ಕೋಚ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿಯೇ ಈ ಹಿಂದಿಗಿಂತ ಈ ಬಾರಿ ಭಾರತ ತಂಡದ ಬಲಿಷ್ಠವಾಗಿ ಕಾಣಿಸಿಕೊಳ್ಳುತ್ತಿದೆ.

4 / 6
ಏಕೆಂದರೆ 15 ವರ್ಷಗಳ ಹಿಂದೆ ರಣತಂತ್ರ ಹೆಣೆದಿದ್ದ ಅದೇ ರಾಹುಲ್ ದ್ರಾವಿಡ್ ಇದೀಗ ಇಡೀ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಕೂಡ ಮೂಡಿಸಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಅಂಡರ್-19 ಮತ್ತು ಭಾರತ-ಎ ತಂಡಗಳಲ್ಲಿ ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಆಟಗಾರರೇ ಈಗ ಟೀಮ್ ಇಂಡಿಯಾದಲ್ಲಿದೆ. ಹೀಗಾಗಿ ಆಟಗಾರರು ಹಾಗೂ ಕೋಚ್ ನಡುವೆ ಈ ಹಿಂದಿಗಿಂತಲೂ ಉತ್ತಮ ಹೊಂದಾಣಿಕೆ ಕಂಡು ಬರುತ್ತಿದೆ.

ಏಕೆಂದರೆ 15 ವರ್ಷಗಳ ಹಿಂದೆ ರಣತಂತ್ರ ಹೆಣೆದಿದ್ದ ಅದೇ ರಾಹುಲ್ ದ್ರಾವಿಡ್ ಇದೀಗ ಇಡೀ ತಂಡದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೆ ಈ ಬಾರಿ ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಕೂಡ ಮೂಡಿಸಿದ್ದಾರೆ. ಏಕೆಂದರೆ ಟೀಮ್ ಇಂಡಿಯಾ ಅಂಡರ್-19 ಮತ್ತು ಭಾರತ-ಎ ತಂಡಗಳಲ್ಲಿ ರಾಹುಲ್ ದ್ರಾವಿಡ್ ಅವರ ಗರಡಿಯಲ್ಲಿ ಪಳಗಿದ ಆಟಗಾರರೇ ಈಗ ಟೀಮ್ ಇಂಡಿಯಾದಲ್ಲಿದೆ. ಹೀಗಾಗಿ ಆಟಗಾರರು ಹಾಗೂ ಕೋಚ್ ನಡುವೆ ಈ ಹಿಂದಿಗಿಂತಲೂ ಉತ್ತಮ ಹೊಂದಾಣಿಕೆ ಕಂಡು ಬರುತ್ತಿದೆ.

5 / 6
ಹೀಗಾಗಿ ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ. ಹೀಗಾಗಿ ಮೊದಲ ಪಂದ್ಯವೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಹೀಗಾಗಿ ಈ ಬಾರಿ ಟೀಮ್ ಇಂಡಿಯಾ ಹೊಸ ಇತಿಹಾಸ ಬರೆಯಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ 15 ವರ್ಷಗಳ ಹಿಂದೆ ರಾಹುಲ್ ದ್ರಾವಿಡ್ ಮೊಟ್ಟ ಮೊದಲ ಗೆಲುವು ತಂದುಕೊಟ್ಟ ಸೆಂಚುರಿಯನ್ ಮೈದಾನದ ಮೂಲಕವೇ ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿಯನ್ನು ಆರಂಭಿಸುತ್ತಿದೆ. ಹೀಗಾಗಿ ಮೊದಲ ಪಂದ್ಯವೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

6 / 6
TV9 Web
TV9 Web

TV9 Kannada

Read More
Follow Us
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ