AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: 2ನೇ ಟೆಸ್ಟ್​ನಲ್ಲೂ ಮಿಂಚಿದ ದೇವದತ್ ಪಡಿಕ್ಕಲ್

Devdutt Padikkal half-century: ಕೊಲಂಬೊದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ 2ನೇ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಅಮೋಘ ಫಾರ್ಮ್ ಮುಂದುವರಿಸಿ ಅರ್ಧಶತಕ ಗಳಿಸಿದ್ದಾರೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡುತ್ತಿರುವ ಭಾರತ ತಂಡಕ್ಕೆ ಪ್ರಮುಖ ಕೊಡುಗೆ ನೀಡಿದ ಪಡಿಕ್ಕಲ್, ನಾಯಕ ಶುಭ್ಮನ್ ಗಿಲ್ ಜೊತೆಗೂಡಿ ಶತಕದ ಜೊತೆಯಾಟವಾಡಿದ್ದಾರೆ. ಇವರ ಆಟದಿಂದ ಟೀಂ ಇಂಡಿಯಾ ಉತ್ತಮ ಸ್ಥಿತಿಯಲ್ಲಿದೆ.

ಪೃಥ್ವಿಶಂಕರ
|

Updated on: Aug 23, 2026 | 2:45 PM

Share
ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ತಂಡಕ್ಕೆ ಉತ್ತಮ ಆರಂಭ ಲಭಿಸಿದ್ದು, ಸತತ ಎರಡನೇ ಪಂದ್ಯದಲ್ಲೂ ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದಾರೆ(PC-PTI).

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ತಂಡಕ್ಕೆ ಉತ್ತಮ ಆರಂಭ ಲಭಿಸಿದ್ದು, ಸತತ ಎರಡನೇ ಪಂದ್ಯದಲ್ಲೂ ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದಾರೆ(PC-PTI).

1 / 5
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಶತಕದ ಇನ್ನಿಂಗ್ಸ್ ಕಟ್ಟಿದ್ದ ಪಡಿಕ್ಕಲ್, ಇದೀಗ ಕೊಲಂಬೊದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಪಡಿಕ್ಕಲ್ ಅವರ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 150 ರನ್​ಗಳ ಗಡಿ ಕೂಡ ದಾಟಿದೆ(PC-PTI).

ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಶತಕದ ಇನ್ನಿಂಗ್ಸ್ ಕಟ್ಟಿದ್ದ ಪಡಿಕ್ಕಲ್, ಇದೀಗ ಕೊಲಂಬೊದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಪಡಿಕ್ಕಲ್ ಅವರ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 150 ರನ್​ಗಳ ಗಡಿ ಕೂಡ ದಾಟಿದೆ(PC-PTI).

2 / 5
ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತಕ್ಕೆ ಸಾಧಾರಣ ಆರಂಭ ಲಭಿಸಿತು. ಮೊದಲ ವಿಕೆಟ್​ಗೆ ರಾಹುಲ್ ಮತ್ತು ಜೈಸ್ವಾಲ್ 37 ರನ್​ಗಳ ಜೊತೆಯಾಟ ನೀಡಿದರು. 18 ರನ್​ ಬಾರಿಸಿ ರಾಹುಲ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ಪಡಿಕ್ಕಲ್ ಮೊದಲ ಟೆಸ್ಟ್​ನಲ್ಲಿ ಎಲ್ಲಿಗೆ ನಿಲ್ಲಿಸಿದ್ದರೋ ಅಲ್ಲಿಂದಲೇ ತಮ್ಮ ಆಟವನ್ನು ಮುಂದುವರೆಸಿದರು(PC-PTI).

ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತಕ್ಕೆ ಸಾಧಾರಣ ಆರಂಭ ಲಭಿಸಿತು. ಮೊದಲ ವಿಕೆಟ್​ಗೆ ರಾಹುಲ್ ಮತ್ತು ಜೈಸ್ವಾಲ್ 37 ರನ್​ಗಳ ಜೊತೆಯಾಟ ನೀಡಿದರು. 18 ರನ್​ ಬಾರಿಸಿ ರಾಹುಲ್ ಔಟಾದ ಬಳಿಕ ಬ್ಯಾಟಿಂಗ್​ಗೆ ಬಂದ ಪಡಿಕ್ಕಲ್ ಮೊದಲ ಟೆಸ್ಟ್​ನಲ್ಲಿ ಎಲ್ಲಿಗೆ ನಿಲ್ಲಿಸಿದ್ದರೋ ಅಲ್ಲಿಂದಲೇ ತಮ್ಮ ಆಟವನ್ನು ಮುಂದುವರೆಸಿದರು(PC-PTI).

3 / 5
ಎರಡನೇ ವಿಕೆಟ್​ಗೆ ಜೈಸ್ವಾಲ್ ಜೊತೆಗೆ 29 ರನ್​ಗಳ ಜೊತೆಯಾಟ ಕಟ್ಟಿದ ಪಡಿಕ್ಕಲ್, ನಂತರ ಬಂದ ನಾಯಕ ಶುಭ್​ಮನ್ ಗಿಲ್ ಜೊತೆಗೆ ಅಜೇಯ ಶತಕದ ಜೊತೆಯಾಟವನ್ನಾಡಿದ್ದಾರೆ. ಇವರಿಬ್ಬರ ಜೊತೆಯಾಟದಿಂದಾಗಿ ಟೀಂ ಇಂಡಿಯಾ ದ್ವಿಶತಕದ ಸನಿಹಕ್ಕೆ ಬಂದಿದೆ(PC-PTI).

ಎರಡನೇ ವಿಕೆಟ್​ಗೆ ಜೈಸ್ವಾಲ್ ಜೊತೆಗೆ 29 ರನ್​ಗಳ ಜೊತೆಯಾಟ ಕಟ್ಟಿದ ಪಡಿಕ್ಕಲ್, ನಂತರ ಬಂದ ನಾಯಕ ಶುಭ್​ಮನ್ ಗಿಲ್ ಜೊತೆಗೆ ಅಜೇಯ ಶತಕದ ಜೊತೆಯಾಟವನ್ನಾಡಿದ್ದಾರೆ. ಇವರಿಬ್ಬರ ಜೊತೆಯಾಟದಿಂದಾಗಿ ಟೀಂ ಇಂಡಿಯಾ ದ್ವಿಶತಕದ ಸನಿಹಕ್ಕೆ ಬಂದಿದೆ(PC-PTI).

4 / 5
ಈ ಸುದ್ದಿ ಬರೆಯುವ ಹೊತ್ತಿಗೆ ದೇವದತ್ ಪಡಿಕ್ಕಲ್ 117 ಎಸೆತಗಳಲ್ಲಿ 63 ರನ್​ ಬಾರಿಸಿ ಆಡುತ್ತಿದ್ದರೆ, ಇತ್ತ ನಾಯಕ ಗಿಲ್ 108 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿ ವಿಕೆಟ್ ಒಪ್ಪಿಸಿದರು. ಪಡಿಕ್ಕಲ್ ಮೊದಲ ಟೆಸ್ಟ್​ನಲ್ಲೂ ಕ್ರಮವಾಗಿ 167 ಮತ್ತು 44 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಪಡಿಕ್ಕಲ್ ಅವರ ಈ ಪ್ರದರ್ಶನ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು(PC-PTI).

ಈ ಸುದ್ದಿ ಬರೆಯುವ ಹೊತ್ತಿಗೆ ದೇವದತ್ ಪಡಿಕ್ಕಲ್ 117 ಎಸೆತಗಳಲ್ಲಿ 63 ರನ್​ ಬಾರಿಸಿ ಆಡುತ್ತಿದ್ದರೆ, ಇತ್ತ ನಾಯಕ ಗಿಲ್ 108 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿ ವಿಕೆಟ್ ಒಪ್ಪಿಸಿದರು. ಪಡಿಕ್ಕಲ್ ಮೊದಲ ಟೆಸ್ಟ್​ನಲ್ಲೂ ಕ್ರಮವಾಗಿ 167 ಮತ್ತು 44 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಪಡಿಕ್ಕಲ್ ಅವರ ಈ ಪ್ರದರ್ಶನ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿತ್ತು(PC-PTI).

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು