AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಭಾರತ-ವೆಸ್ಟ್ ಇಂಡೀಸ್ ನಾಲ್ಕನೇ ಟಿ20: ಹಾರ್ದಿಕ್ ಪಡೆಗೆ ಗೆದ್ದರಷ್ಟೇ ಉಳಿಗಾಲ

West Indies vs India 4th T20I: ಟೀಮ್ ಇಂಡಿಯಾ ಸರಣಿಯನ್ನು ಗೆಲ್ಲಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಅತ್ತ ವೆಸ್ಟ್ ಇಂಡೀಸ್ ಒಂದು ಪಂದ್ಯ ಗೆದ್ದರೆ ಐತಿಹಾಸಿಕ ಸಾಧನೆ ಮಾಡಲಿದೆ. ಹೀಗಾಗಿ ಫ್ಲೋರಿಡಾದಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

Vinay Bhat
|

Updated on: Aug 12, 2023 | 7:20 AM

ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ನಾಲ್ಕನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದೆ. ಇಂದು ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್​ನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿರುವ ಟೀಮ್ ಇಂಡಿಯಾ ಇದೀಗ ನಾಲ್ಕನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದೆ. ಇಂದು ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್​ನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

1 / 9
ಮಾಡು ಇಲ್ಲವೇ ಮಡಿ ಎಂಬಂತಾಗಿದ್ದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಬ್ಯಾಟಿಂಗ್- ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ಏಳು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಪಾಂಡ್ಯ ನೇತೃತ್ವದ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-2 ಅಂತರದ ಹಿನ್ನಡೆಯಲ್ಲಿದೆ.

ಮಾಡು ಇಲ್ಲವೇ ಮಡಿ ಎಂಬಂತಾಗಿದ್ದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಬ್ಯಾಟಿಂಗ್- ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ಏಳು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಪಾಂಡ್ಯ ನೇತೃತ್ವದ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-2 ಅಂತರದ ಹಿನ್ನಡೆಯಲ್ಲಿದೆ.

2 / 9
ಟೀಮ್ ಇಂಡಿಯಾ ಸರಣಿಯನ್ನು ಗೆಲ್ಲಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಅತ್ತ ವೆಸ್ಟ್ ಇಂಡೀಸ್ ಒಂದು ಪಂದ್ಯ ಗೆದ್ದರೆ ಐತಿಹಾಸಿಕ ಸಾಧನೆ ಮಾಡಲಿದೆ. ಫ್ಲೋರಿಡಾದಲ್ಲಿ ಮೇಜರ್ ಲೀಗ್ ಕ್ರಿಕೆಟ್ (MLC) ಸಮಯದಲ್ಲಿ, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಹೀಗಾಗಿ ಭಾರತ ತಂಡವನ್ನು ಹುರಿದುಂಬಿಸಲು ಪ್ರೇಕ್ಷಕರು ಬರುವ ನಿರೀಕ್ಷೆಯಿದೆ.

ಟೀಮ್ ಇಂಡಿಯಾ ಸರಣಿಯನ್ನು ಗೆಲ್ಲಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಅತ್ತ ವೆಸ್ಟ್ ಇಂಡೀಸ್ ಒಂದು ಪಂದ್ಯ ಗೆದ್ದರೆ ಐತಿಹಾಸಿಕ ಸಾಧನೆ ಮಾಡಲಿದೆ. ಫ್ಲೋರಿಡಾದಲ್ಲಿ ಮೇಜರ್ ಲೀಗ್ ಕ್ರಿಕೆಟ್ (MLC) ಸಮಯದಲ್ಲಿ, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಹೀಗಾಗಿ ಭಾರತ ತಂಡವನ್ನು ಹುರಿದುಂಬಿಸಲು ಪ್ರೇಕ್ಷಕರು ಬರುವ ನಿರೀಕ್ಷೆಯಿದೆ.

3 / 9
ಸತತ ಎರಡು ವೈಫಲ್ಯಗಳ ನಂತರ, ತಂಡದ ಹಿರಿಯ ಆಟಗಾರರಾದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಅವರು ಮೂರನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಕಾರಣರಾದರು. ಇದೇ ಲಯವನ್ನು ಇಂದುಕೂಡ ಮುಂದುವರೆಸಬೇಕಿದೆ.

ಸತತ ಎರಡು ವೈಫಲ್ಯಗಳ ನಂತರ, ತಂಡದ ಹಿರಿಯ ಆಟಗಾರರಾದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಅವರು ಮೂರನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಕಾರಣರಾದರು. ಇದೇ ಲಯವನ್ನು ಇಂದುಕೂಡ ಮುಂದುವರೆಸಬೇಕಿದೆ.

4 / 9
ಸೂರ್ಯಕುಮಾರ್ ಯಾದವ್ ಅವರು ಸ್ಫೋಟಕ ಬ್ಯಾಟಿಂಗ್ ಮೂಲಕ ಫಾರ್ಮ್​ಗೆ ಬಂದರೆ, ಚಹಲ್ ಮತ್ತು ಕುಲ್ದೀಪ್ ಸ್ಪಿನ್ ಜಾದು ಚೆನ್ನಾಗಿ ಕೆಲಸ ಮಾಡಿತು. ಹಾರ್ದಿಕ್ ಕೂಡ ಲಯ ಕಂಡುಕೊಂಡರು. ತಿಲಕ್ ವರ್ಮಾ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮೂರನೇ ಟಿ20 ಗೆ ತಂಡದಲ್ಲಿ ಬದಲಾವಣೆ ಅನುಮಾನ.

ಸೂರ್ಯಕುಮಾರ್ ಯಾದವ್ ಅವರು ಸ್ಫೋಟಕ ಬ್ಯಾಟಿಂಗ್ ಮೂಲಕ ಫಾರ್ಮ್​ಗೆ ಬಂದರೆ, ಚಹಲ್ ಮತ್ತು ಕುಲ್ದೀಪ್ ಸ್ಪಿನ್ ಜಾದು ಚೆನ್ನಾಗಿ ಕೆಲಸ ಮಾಡಿತು. ಹಾರ್ದಿಕ್ ಕೂಡ ಲಯ ಕಂಡುಕೊಂಡರು. ತಿಲಕ್ ವರ್ಮಾ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮೂರನೇ ಟಿ20 ಗೆ ತಂಡದಲ್ಲಿ ಬದಲಾವಣೆ ಅನುಮಾನ.

5 / 9
ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಪಾತ್ರವನ್ನು ಮುಂದುವರಿಸುವ ನಿರೀಕ್ಷೆಯಿದೆ. ಏಕೆಂದರೆ ಭಾರತವು ಯಶಸ್ವಿ ಜೈಸ್ವಾಲ್‌ಗೆ ಮತ್ತೊಂದು ಅವಕಾಶ ನೀಡಬೇಕಿದೆ. ಟಿ20ಗಳಲ್ಲಿ ಸತತ ಮೂರು ವೈಫಲ್ಯ ಅನುಭವಿಸಿರುವ ಗಿಲ್ ಮೇಲೆ ಹೆಚ್ಚಿನ ಒತ್ತಡವಿದೆ. ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಮೂರು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿರಲಿದ್ದಾರೆ.

ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಪಾತ್ರವನ್ನು ಮುಂದುವರಿಸುವ ನಿರೀಕ್ಷೆಯಿದೆ. ಏಕೆಂದರೆ ಭಾರತವು ಯಶಸ್ವಿ ಜೈಸ್ವಾಲ್‌ಗೆ ಮತ್ತೊಂದು ಅವಕಾಶ ನೀಡಬೇಕಿದೆ. ಟಿ20ಗಳಲ್ಲಿ ಸತತ ಮೂರು ವೈಫಲ್ಯ ಅನುಭವಿಸಿರುವ ಗಿಲ್ ಮೇಲೆ ಹೆಚ್ಚಿನ ಒತ್ತಡವಿದೆ. ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಮೂರು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿರಲಿದ್ದಾರೆ.

6 / 9
ಇತ್ತ ವಿಂಡೀಸ್ ಕಳೆದ ಪಂದ್ಯ ಸೋತಿದ್ದರೂ ಬಲಿಷ್ಠವಾಗಿದೆ. ನಾಯಕ ರೋವ್ಮನ್ ಪೊವೆಲ್, ಬ್ರಾಂಡನ್ ಕಿಂಗ್ ಮತ್ತು ಅನುಭವಿ ನಿಕೋಲಸ್ ಪೂರನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಖೈಲ್ ಮೇಯರ್ಸ್, ಚಾರ್ಲೆಸ್ ಮತ್ತು ಹೆಟ್ಮೇರ್ ಅಬ್ಬರಿಸಿದರೆ ದೊಡ್ಡ ಮೊತ್ತ ಕಲೆಹಾಕುವುದು ಖಚಿತ. ಬೌಲಿಂಗ್​ನಲ್ಲಿ ಒಬೆಡ್ ಮೆಕಾಯ್, ರೊಮಾರಿಯೋ ಶೆಫೆರನ್ ಮತ್ತು ಜೇಸನ್ ಹೋಲ್ಡರ್ ಮಾರಕವಾಗಿದ್ದಾರೆ.

ಇತ್ತ ವಿಂಡೀಸ್ ಕಳೆದ ಪಂದ್ಯ ಸೋತಿದ್ದರೂ ಬಲಿಷ್ಠವಾಗಿದೆ. ನಾಯಕ ರೋವ್ಮನ್ ಪೊವೆಲ್, ಬ್ರಾಂಡನ್ ಕಿಂಗ್ ಮತ್ತು ಅನುಭವಿ ನಿಕೋಲಸ್ ಪೂರನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಖೈಲ್ ಮೇಯರ್ಸ್, ಚಾರ್ಲೆಸ್ ಮತ್ತು ಹೆಟ್ಮೇರ್ ಅಬ್ಬರಿಸಿದರೆ ದೊಡ್ಡ ಮೊತ್ತ ಕಲೆಹಾಕುವುದು ಖಚಿತ. ಬೌಲಿಂಗ್​ನಲ್ಲಿ ಒಬೆಡ್ ಮೆಕಾಯ್, ರೊಮಾರಿಯೋ ಶೆಫೆರನ್ ಮತ್ತು ಜೇಸನ್ ಹೋಲ್ಡರ್ ಮಾರಕವಾಗಿದ್ದಾರೆ.

7 / 9
ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಶಾಯ್ ಹೋಪ್, ಬ್ರಾಂಡನ್ ಕಿಂಗ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಶಾಯ್ ಹೋಪ್, ಬ್ರಾಂಡನ್ ಕಿಂಗ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

8 / 9
ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

9 / 9
Follow us
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್