India Women vs Pakistan Women: ಇಂದು ಟೀಮ್ ಇಂಡಿಯಾಗೆ ನಿರ್ಣಾಯಕ ಪಂದ್ಯ

India Women vs Pakistan Women: ಮಹಿಳಾ ಟಿ20 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ಹಾಗೂ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು.

| Updated By: ಝಾಹಿರ್ ಯೂಸುಫ್

Updated on:Oct 06, 2024 | 8:48 AM

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

1 / 6
ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ 	-2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ -2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

2 / 6
ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

3 / 6
ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

4 / 6
ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

5 / 6
ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

6 / 6

Published On - 8:43 am, Sun, 6 October 24

Follow us
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...