AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Women vs Pakistan Women: ಇಂದು ಟೀಮ್ ಇಂಡಿಯಾಗೆ ನಿರ್ಣಾಯಕ ಪಂದ್ಯ

India Women vs Pakistan Women: ಮಹಿಳಾ ಟಿ20 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ಹಾಗೂ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು.

TV9 Web
| Edited By: |

Updated on:Oct 06, 2024 | 8:48 AM

Share
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

1 / 6
ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ 	-2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ -2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

2 / 6
ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

3 / 6
ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

4 / 6
ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

5 / 6
ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

6 / 6

Published On - 8:43 am, Sun, 6 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ