AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Women vs Pakistan Women: ಇಂದು ಟೀಮ್ ಇಂಡಿಯಾಗೆ ನಿರ್ಣಾಯಕ ಪಂದ್ಯ

India Women vs Pakistan Women: ಮಹಿಳಾ ಟಿ20 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ಹಾಗೂ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು.

TV9 Web
| Edited By: |

Updated on:Oct 06, 2024 | 8:48 AM

Share
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

1 / 6
ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ 	-2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ -2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

2 / 6
ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

3 / 6
ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

4 / 6
ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

5 / 6
ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

6 / 6

Published On - 8:43 am, Sun, 6 October 24

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ