AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Women vs Pakistan Women: ಇಂದು ಟೀಮ್ ಇಂಡಿಯಾಗೆ ನಿರ್ಣಾಯಕ ಪಂದ್ಯ

India Women vs Pakistan Women: ಮಹಿಳಾ ಟಿ20 ವಿಶ್ವಕಪ್​ನ 7ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 3.30 ರಿಂದ ಶುರುವಾಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ಹಾಗೂ ಡಿಸ್ನಿ ಹಾಟ್ ಸ್ಟಾರ್ ಆ್ಯಪ್​ನಲ್ಲಿ ಲೈವ್ ವೀಕ್ಷಿಸಬಹುದು.

TV9 Web
| Edited By: |

Updated on:Oct 06, 2024 | 8:48 AM

Share
ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಅ.6) ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಭಾರತ ತಂಡವು ಮೊದಲ ಮ್ಯಾಚ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ 58 ರನ್​ಗಳ ಹೀನಾಯ ಸೋಲನುಭವಿಸಿದೆ.

1 / 6
ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ 	-2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

ಈ ಸೋಲಿನೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ -2.900 ನೆಟ್​ ರನ್ ರೇಟ್​ನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಲ್ಲಿ ಉಳಿಯಬಹುದು.

2 / 6
ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

ಅತ್ತ ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡಕ್ಕೆ ಸೋಲುಣಿಸಿರುವ ಪಾಕಿಸ್ತಾನ್ 2 ಅಂಕಗಳೊಂದಿಗೆ +1.550 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೇಲೇರಬೇಕಾದ ಅನಿವಾರ್ಯತೆ ಇದೆ.

3 / 6
ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

ಒಂದು ವೇಳೆ ಭಾರತ ತಂಡವು ಪಾಕಿಸ್ತಾನ್ ವಿರುದ್ಧ ಕೂಡ ಸೋತರೆ ಸೆಮಿಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಬಹುದು. ಅತ್ತ ಎರಡು ತಂಡಗಳು 6 ಅಂಕಗಳನ್ನು ಕಲೆಹಾಕಿದರೆ ಟೀಮ್ ಇಂಡಿಯಾ ಸೆಮಿಫೈನಲ್​ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಇಂದಿನ ಪಂದ್ಯವು ಭಾರತದ ಪಾಲಿಗೆ ನಿರ್ಣಾಯಕ.

4 / 6
ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

ಇನ್ನು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿ ಉಳಿದೆರಡು ಪಂದ್ಯಗಳಲ್ಲೂ ಜಯಭೇರಿ ಬಾರಿಸಿದರೆ ಒಟ್ಟು 6 ಅಂಕಗಳೊಂದಿಗೆ ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಬಹುದು. ಹಾಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಅಮೋಘ ಗೆಲುವು ದಾಖಲಿಸುವ ಮೂಲಕ ಸೆಮಿಫೈನಲ್ ರೇಸ್​ನಲ್ಲಿ ಉಳಿಯಬಹುದು.

5 / 6
ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

ಅಂದಹಾಗೆ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಪಾಕಿಸ್ತಾನ್ ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

6 / 6

Published On - 8:43 am, Sun, 6 October 24

Follow Us
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ