AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಡ್ ಬಾಲ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾದ ಸ್ಟಾರ್ ಬೌಲರ್..!

Varun Aaron Retirement: ಪ್ರಸ್ತುತ ಭಾರತ ತಂಡದಿಂದ ಹೊರಗುಳಿದಿರುವ ವರುಣ್ ಆರೋನ್ ರೆಡ್ ಬಾಲ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪ್ರಸ್ತುತ ರಣಜಿ ಟ್ರೋಫಿ ಆಡುತ್ತಿರುವ ಅವರು ತಮ್ಮ ವೃತ್ತಿಜೀವನದ ಕೊನೆಯ ಪಂದ್ಯವನ್ನು ರಾಜಸ್ಥಾನ ವಿರುದ್ಧ ಆಡಲಿದ್ದಾರೆ. 2008ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಆ್ಯರೋನ್ 65 ಪಂದ್ಯಗಳಲ್ಲಿ 168 ವಿಕೆಟ್‌ಗಳನ್ನು ಪಡೆದಿದ್ದರು.

ಪೃಥ್ವಿಶಂಕರ
|

Updated on: Feb 17, 2024 | 2:52 PM

Share
ಒಂದು ಸಮಯದಲ್ಲಿ ಟೀಂ ಇಂಡಿಯಾದ ಭರವಸೆಯ ಬೌಲರ್ ಎಂದು ಗುರುತಿಸಿಕೊಂಡಿದ್ದ ವೇಗಿ ವರುಣ್ ಆರೋನ್ ತಂಡದಿಂದ ಹೊರಬಿದ್ದು ವರ್ಷಗಳೇ ಕಳೆದಿವೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ಪರ ಆಡುತ್ತಿರುವ ವರುಣ್ ಇದೀಗ ನಿವೃತ್ತಿಯ ನಿರ್ಧಾರಕ್ಕೆ ಬಂದಿದ್ದಾರೆ.

ಒಂದು ಸಮಯದಲ್ಲಿ ಟೀಂ ಇಂಡಿಯಾದ ಭರವಸೆಯ ಬೌಲರ್ ಎಂದು ಗುರುತಿಸಿಕೊಂಡಿದ್ದ ವೇಗಿ ವರುಣ್ ಆರೋನ್ ತಂಡದಿಂದ ಹೊರಬಿದ್ದು ವರ್ಷಗಳೇ ಕಳೆದಿವೆ. ಪ್ರಸ್ತುತ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ಪರ ಆಡುತ್ತಿರುವ ವರುಣ್ ಇದೀಗ ನಿವೃತ್ತಿಯ ನಿರ್ಧಾರಕ್ಕೆ ಬಂದಿದ್ದಾರೆ.

1 / 7
ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ಪರ ಆಡುತ್ತಿರುವ ಸ್ಟಾರ್ ವೇಗದ ಬೌಲರ್ ವರುಣ್ ಆರೋನ್, ರಾಜಸ್ಥಾನ ವಿರುದ್ಧ ನಡೆಯುತ್ತಿರುವ ಪಂದ್ಯದ ನಂತರ ರೆಡ್ ಬಾಲ್ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ಪರ ಆಡುತ್ತಿರುವ ಸ್ಟಾರ್ ವೇಗದ ಬೌಲರ್ ವರುಣ್ ಆರೋನ್, ರಾಜಸ್ಥಾನ ವಿರುದ್ಧ ನಡೆಯುತ್ತಿರುವ ಪಂದ್ಯದ ನಂತರ ರೆಡ್ ಬಾಲ್ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ.

2 / 7
2008 ರಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ತಮ್ಮ ಪ್ರಯಾಣ ಆರಂಭಿಸಿದ್ದ ವರುಣ್ ಆರೋನ್,  ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಲೀಗ್ ಪಂದ್ಯದ ಮೂಲಕ ಜಾರ್ಖಂಡ್‌ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.

2008 ರಲ್ಲಿ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ತಮ್ಮ ಪ್ರಯಾಣ ಆರಂಭಿಸಿದ್ದ ವರುಣ್ ಆರೋನ್, ಜಮ್ಮು ಮತ್ತು ಕಾಶ್ಮೀರ ವಿರುದ್ಧದ ರಣಜಿ ಟ್ರೋಫಿ ಲೀಗ್ ಪಂದ್ಯದ ಮೂಲಕ ಜಾರ್ಖಂಡ್‌ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.

3 / 7
ಅಂದಿನಿಂದ ದೇಶೀ ಕ್ರಿಕೆಟ್, ಟೀಂ ಇಂಡಿಯಾ ಹಾಗೂ ಐಪಿಎಲ್​ನಲ್ಲಿ ವರುಣ್ ಆರೋನ್ ಆಡಿದ್ದರು. ಇನ್ನು ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿರುವ ಅವರು, ನಾನು 2008 ರಿಂದ ರೆಡ್ ಬಾಲ್ ಕ್ರಿಕೆಟ್ ಆಡುತ್ತಿದ್ದೇನೆ. ನಾನು ವೇಗವಾಗಿ ಬೌಲರ್ ಆಗಿರುವ ಕಾರಣ ನಾನು ಅನೇಕ ಗಾಯಗಳಿಂದ ಬಳಲುತ್ತಿದ್ದೇನೆ.

ಅಂದಿನಿಂದ ದೇಶೀ ಕ್ರಿಕೆಟ್, ಟೀಂ ಇಂಡಿಯಾ ಹಾಗೂ ಐಪಿಎಲ್​ನಲ್ಲಿ ವರುಣ್ ಆರೋನ್ ಆಡಿದ್ದರು. ಇನ್ನು ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿರುವ ಅವರು, ನಾನು 2008 ರಿಂದ ರೆಡ್ ಬಾಲ್ ಕ್ರಿಕೆಟ್ ಆಡುತ್ತಿದ್ದೇನೆ. ನಾನು ವೇಗವಾಗಿ ಬೌಲರ್ ಆಗಿರುವ ಕಾರಣ ನಾನು ಅನೇಕ ಗಾಯಗಳಿಂದ ಬಳಲುತ್ತಿದ್ದೇನೆ.

4 / 7
ಪ್ರಸ್ತುತ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ವೇಗವಾಗಿ ಬೌಲಿಂಗ್ ಮಾಡಲು ನನ್ನ ದೇಹವು ನನಗೆ ಬೆಂಬಲ ನೀಡುತ್ತಿಲ್ಲ. ಆದ್ದರಿಂದ ನಾನು ಈ ಮಾದರಿಯನ್ನು ತ್ಯಜಿಸಲು ನಿರ್ಧರಿಸಿದೆ. ನನ್ನ ಕುಟುಂಬ ಮತ್ತು ಜೆಮ್‌ಶೆಡ್‌ಪುರದ ಜನರ ಮುಂದೆ ಇದು ನನ್ನ ಕೊನೆಯ ಪಂದ್ಯವಾಗಿರಬಹುದು ಎಂದಿದ್ದಾರೆ.

ಪ್ರಸ್ತುತ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ವೇಗವಾಗಿ ಬೌಲಿಂಗ್ ಮಾಡಲು ನನ್ನ ದೇಹವು ನನಗೆ ಬೆಂಬಲ ನೀಡುತ್ತಿಲ್ಲ. ಆದ್ದರಿಂದ ನಾನು ಈ ಮಾದರಿಯನ್ನು ತ್ಯಜಿಸಲು ನಿರ್ಧರಿಸಿದೆ. ನನ್ನ ಕುಟುಂಬ ಮತ್ತು ಜೆಮ್‌ಶೆಡ್‌ಪುರದ ಜನರ ಮುಂದೆ ಇದು ನನ್ನ ಕೊನೆಯ ಪಂದ್ಯವಾಗಿರಬಹುದು ಎಂದಿದ್ದಾರೆ.

5 / 7
ಆರಂಭದಲ್ಲಿ ತನ್ನ ಘಾತುಕ ವೇಗದಿಂದಲೇ ಹೆಸರುವಾಸಿಯಾಗಿದ್ದ ವರುಣ್ ಆರೋನ್ ಶೀಘ್ರದಲ್ಲೇ ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದರು. 2011 ರಲ್ಲಿ ಭಾರತದ ಪರ ಚೊಚ್ಚಲ ಏಕದಿನ ಪಂದ್ಯವನ್ನಾಡಿದ ವರುಣ್​, ಗಾಯದ ಸಮಸ್ಯೆಯಿಂದ ಹೆಚ್ಚು ಕಾಲ ಟೀಂ ಇಂಡಿಯಾದಲ್ಲಿ ಉಳಿಯಲು ಸಾಧ್ಯವಾಗಲಿಲ್ಲ.

ಆರಂಭದಲ್ಲಿ ತನ್ನ ಘಾತುಕ ವೇಗದಿಂದಲೇ ಹೆಸರುವಾಸಿಯಾಗಿದ್ದ ವರುಣ್ ಆರೋನ್ ಶೀಘ್ರದಲ್ಲೇ ಭಾರತ ತಂಡಕ್ಕೆ ಪದಾರ್ಪಣೆ ಮಾಡುವ ಅವಕಾಶವನ್ನು ಪಡೆದರು. 2011 ರಲ್ಲಿ ಭಾರತದ ಪರ ಚೊಚ್ಚಲ ಏಕದಿನ ಪಂದ್ಯವನ್ನಾಡಿದ ವರುಣ್​, ಗಾಯದ ಸಮಸ್ಯೆಯಿಂದ ಹೆಚ್ಚು ಕಾಲ ಟೀಂ ಇಂಡಿಯಾದಲ್ಲಿ ಉಳಿಯಲು ಸಾಧ್ಯವಾಗಲಿಲ್ಲ.

6 / 7
ಟೀಂ ಇಂಡಿಯಾ ಪರ 9 ಟೆಸ್ಟ್ ಪಂದ್ಯಗಳನ್ನಾಡಿರುವ ವರುಣ್ 18 ವಿಕೆಟ್ ಹಾಗೂ 9 ಏಕದಿನ ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ. 2015 ರಲ್ಲಿ ಭಾರತದ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದ ವರುಣ್, 65 ಪ್ರಥಮ ದರ್ಜೆ ಪಂದ್ಯಗಳಲ್ಲಿ 33.74 ಸರಾಸರಿಯಲ್ಲಿ 168 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೇ 84 ಲಿಸ್ಟ್ ಎ ಪಂದ್ಯಗಳಲ್ಲಿ 138 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾ ಪರ 9 ಟೆಸ್ಟ್ ಪಂದ್ಯಗಳನ್ನಾಡಿರುವ ವರುಣ್ 18 ವಿಕೆಟ್ ಹಾಗೂ 9 ಏಕದಿನ ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ. 2015 ರಲ್ಲಿ ಭಾರತದ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದ ವರುಣ್, 65 ಪ್ರಥಮ ದರ್ಜೆ ಪಂದ್ಯಗಳಲ್ಲಿ 33.74 ಸರಾಸರಿಯಲ್ಲಿ 168 ವಿಕೆಟ್‌ಗಳನ್ನು ಪಡೆದಿದ್ದಾರೆ. ಇದಲ್ಲದೇ 84 ಲಿಸ್ಟ್ ಎ ಪಂದ್ಯಗಳಲ್ಲಿ 138 ವಿಕೆಟ್ ಪಡೆದಿದ್ದಾರೆ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!