AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ

ICC ODI Rankings: ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

TV9 Web
| Updated By: ಝಾಹಿರ್ ಯೂಸುಫ್

Updated on:Jan 29, 2023 | 11:48 PM

ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.

ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.

1 / 8
ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

2 / 8
1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

3 / 8
2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

4 / 8
3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

5 / 8
4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

6 / 8
5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

7 / 8
6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 6ನೇ ಭಾರತೀಯ ಎನಿಸಿಕೊಂಡಿದ್ದಾರೆ.

6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 6ನೇ ಭಾರತೀಯ ಎನಿಸಿಕೊಂಡಿದ್ದಾರೆ.

8 / 8

Published On - 10:57 pm, Fri, 27 January 23

Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ