AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳ ಪಟ್ಟಿ ಇಲ್ಲಿದೆ

ICC ODI Rankings: ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

TV9 Web
| Edited By: |

Updated on:Sep 20, 2023 | 8:30 PM

Share
ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.

1 / 8
ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

2 / 8
1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

3 / 8
2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

4 / 8
3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

5 / 8
4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

6 / 8
5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

7 / 8
6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಏಷ್ಯಾಕಪ್​ನಲ್ಲಿ ಒಟ್ಟು 10 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಹಾಗೂ 3ನೇ ವೇಗಿ​ ಎನಿಸಿಕೊಂಡಿದ್ದಾರೆ.

6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಏಷ್ಯಾಕಪ್​ನಲ್ಲಿ ಒಟ್ಟು 10 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಹಾಗೂ 3ನೇ ವೇಗಿ​ ಎನಿಸಿಕೊಂಡಿದ್ದಾರೆ.

8 / 8

Published On - 8:30 pm, Wed, 20 September 23

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ