AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

Historic June 17: ಜೂನ್ 17 ಭಾರತೀಯ ಕ್ರಿಕೆಟ್‌ಗೆ ಅವಿಸ್ಮರಣೀಯ ದಿನವಾಗಿತ್ತು. ಒಂದೇ ದಿನ ಮೂರು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡಗಳು ಅದ್ಭುತ ಗೆಲುವು ಸಾಧಿಸಿದವು. ಪುರುಷರ ಏಕದಿನ, ಭಾರತ ಎ ಮತ್ತು ಮಹಿಳಾ ಟಿ20 ತಂಡಗಳು ಭಾರಿ ಅಂತರದಿಂದ ಜಯಭೇರಿ ಬಾರಿಸಿ, ಅಭಿಮಾನಿಗಳಿಗೆ ರಸದೌತಣ ನೀಡಿದವು. ಈ ಪಂದ್ಯಗಳಲ್ಲಿ ಭಾರತದ ಪ್ರಾಬಲ್ಯ ಎದ್ದು ಕಾಣುತ್ತಿತ್ತು, ಇದು ಮುಂದಿನ ಸರಣಿಗಳಿಗೆ ಶುಭ ಸೂಚನೆ.

ಪೃಥ್ವಿಶಂಕರ
|

Updated on: Jun 18, 2026 | 5:28 PM

Share
ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X).

ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X).

1 / 5
ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ತ್ರಿಕೋನ ಸರಣಿಯ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ 319 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಎ ತಂಡ 218 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ಎ ತಂಡ 101 ರನ್​ಗಳ ಬೃಹತ್ ಜಯ ದಾಖಲಿಸಿ ನೇರವಾಗಿ ಫೈನಲ್​ಗೇರಿತು (PC- BCCI X).

ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ ತಂಡಗಳ ನಡುವೆ ತ್ರಿಕೋನ ಸರಣಿಯ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ 319 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಎ ತಂಡ 218 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ಎ ತಂಡ 101 ರನ್​ಗಳ ಬೃಹತ್ ಜಯ ದಾಖಲಿಸಿ ನೇರವಾಗಿ ಫೈನಲ್​ಗೇರಿತು (PC- BCCI X).

2 / 5
ಮಧ್ಯಾಹ್ನ 1:30ಕ್ಕೆ ಆರಂಭವಾದ ದಿನದ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವನ್ನು ಆಡಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಬರೋಬ್ಬರಿ 402 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡ 232 ರನ್​ಗಳಿಗೆ ಆಲೌಟ್ ಆಯಿತು. ಹೀಗಾಗಿ ಟೀಂ ಇಂಡಿಯಾ 170 ರನ್​ಗಳ ಜಯ ದಾಖಲಿಸಿ, ಸರಣಿಯನ್ನು ತನ್ನದಾಗಿಸಿಕೊಂಡಿತು (PC- BCCI X).

ಮಧ್ಯಾಹ್ನ 1:30ಕ್ಕೆ ಆರಂಭವಾದ ದಿನದ ಎರಡನೇ ಪಂದ್ಯದಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯವನ್ನು ಆಡಿದವು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಬರೋಬ್ಬರಿ 402 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡ 232 ರನ್​ಗಳಿಗೆ ಆಲೌಟ್ ಆಯಿತು. ಹೀಗಾಗಿ ಟೀಂ ಇಂಡಿಯಾ 170 ರನ್​ಗಳ ಜಯ ದಾಖಲಿಸಿ, ಸರಣಿಯನ್ನು ತನ್ನದಾಗಿಸಿಕೊಂಡಿತು (PC- BCCI X).

3 / 5
ಇನ್ನು ಸಂಜೆ 7 ಗಂಟೆಗೆ ಭಾರತ ಹಾಗೂ ನೆದರ್ಲ್ಯಾಂಡ್ಸ್ ಮಹಿಳಾ ತಂಡಗಳ ನಡುವೆ ಟಿ20 ವಿಶ್ವಕಪ್ ಪಂದ್ಯ ನಡೆಯಿತು. ಈ ಪಂದ್ಯದಲ್ಲೂ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ವನಿತಾ ಪಡೆ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ ಕೇವಲ 114 ರನ್​ಗಳಿಗೆ ಆಲೌಟ್ ಆಗುವ ಮೂಲಕ 95 ರನ್​ಗಳ ಹೀನಾಯ ಸೋಲುಕಂಡಿತು. ಇತ್ತ ಭಾರತ ತಂಡ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ದಾಖಲೆ ಬರೆಯಿತು (PC- BCCI X).

ಇನ್ನು ಸಂಜೆ 7 ಗಂಟೆಗೆ ಭಾರತ ಹಾಗೂ ನೆದರ್ಲ್ಯಾಂಡ್ಸ್ ಮಹಿಳಾ ತಂಡಗಳ ನಡುವೆ ಟಿ20 ವಿಶ್ವಕಪ್ ಪಂದ್ಯ ನಡೆಯಿತು. ಈ ಪಂದ್ಯದಲ್ಲೂ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ವನಿತಾ ಪಡೆ 209 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡ ಕೇವಲ 114 ರನ್​ಗಳಿಗೆ ಆಲೌಟ್ ಆಗುವ ಮೂಲಕ 95 ರನ್​ಗಳ ಹೀನಾಯ ಸೋಲುಕಂಡಿತು. ಇತ್ತ ಭಾರತ ತಂಡ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿದೊಡ್ಡ ಗೆಲುವು ದಾಖಲಿಸಿದ ದಾಖಲೆ ಬರೆಯಿತು (PC- BCCI X).

4 / 5
ಇದೀಗ ಈ ಮೂರು ತಂಡಗಳು ಮತ್ತೆ ಶನಿವಾರ ಮತ್ತು ಭಾನುವಾರದಂದು ಕಣಕ್ಕಿಳಿಯಲಿವೆ. ಶನಿವಾರದಂದು ಭಾರತ ಹಾಗೂ ಅಫ್ಘಾನಿಸ್ತಾನದ ನಡುವೆ ಏಕದಿನ ಸರಣಿಯ ಕೊನೆಯ ಪಂದ್ಯ ನಡೆದರೆ, ಭಾನುವಾರದಂದು ಭಾರತ ಎ ತಂಡ ತ್ರಿಕೋನ ಸರಣಿಯ ಫೈನಲ್ ಪಂದ್ಯವನ್ನು ಆಡಲಿದೆ. ಇತ್ತ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ (PC- BCCI X).

ಇದೀಗ ಈ ಮೂರು ತಂಡಗಳು ಮತ್ತೆ ಶನಿವಾರ ಮತ್ತು ಭಾನುವಾರದಂದು ಕಣಕ್ಕಿಳಿಯಲಿವೆ. ಶನಿವಾರದಂದು ಭಾರತ ಹಾಗೂ ಅಫ್ಘಾನಿಸ್ತಾನದ ನಡುವೆ ಏಕದಿನ ಸರಣಿಯ ಕೊನೆಯ ಪಂದ್ಯ ನಡೆದರೆ, ಭಾನುವಾರದಂದು ಭಾರತ ಎ ತಂಡ ತ್ರಿಕೋನ ಸರಣಿಯ ಫೈನಲ್ ಪಂದ್ಯವನ್ನು ಆಡಲಿದೆ. ಇತ್ತ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ವನಿತಾ ಪಡೆ, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ (PC- BCCI X).

5 / 5
Follow Us
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ