AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NED: ನೆದರ್​ಲೆಂಡ್ಸ್ ವಿರುದ್ಧದ ಪಂದ್ಯಕ್ಕೆ ಭಾರತ ಸಜ್ಜು: ರೋಹಿತ್ ಪಡೆಯ ಅಭ್ಯಾಸ ಹೇಗಿದೆ ನೋಡಿ

India vs Netherlands, T20 World Cup: ಇಂದು ಸಿಡ್ನಿಯ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ (India vs Netherlands) ವಿರುದ್ಧ ತನ್ನ ದ್ವಿತೀಯ ಪಂದ್ಯವನ್ನು ಆಡಲಿದೆ.

TV9 Web
| Edited By: |

Updated on:Oct 27, 2022 | 10:08 AM

Share
ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಶುಭಾರಂಭ ಮಾಡಿದ ಭಾರತ ಕ್ರಿಕೆಟ್ ತಂಡ ಇದೀಗ ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಇಂದು ಸಿಡ್ನಿಯ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ (India vs Netherlands) ವಿರುದ್ಧ ತನ್ನ ದ್ವಿತೀಯ ಪಂದ್ಯವನ್ನು ಆಡಲಿದೆ.

ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ರೋಚಕ ಗೆಲುವು ಸಾಧಿಸಿ ಶುಭಾರಂಭ ಮಾಡಿದ ಭಾರತ ಕ್ರಿಕೆಟ್ ತಂಡ ಇದೀಗ ಮತ್ತೊಂದು ಕದನಕ್ಕೆ ಸಜ್ಜಾಗಿದೆ. ಇಂದು ಸಿಡ್ನಿಯ ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಟೀಮ್ ಇಂಡಿಯಾ ನೆದರ್​ಲೆಂಡ್ಸ್ (India vs Netherlands) ವಿರುದ್ಧ ತನ್ನ ದ್ವಿತೀಯ ಪಂದ್ಯವನ್ನು ಆಡಲಿದೆ.

1 / 8
ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ರೋಹಿತ್ (Rohit Sharma) ಪಡೆ ಈ ಮ್ಯಾಚ್ ಅನ್ನೂ ಜಯಿಸುವ ಯೋಜನೆಯಲ್ಲಿದೆ. ಅತ್ತ ನೆದರ್​ಲೆಂಡ್ಸ್ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವಿನ ಅಂಚಿನಲ್ಲಿ ಎಡವಿತ್ತು. ಸೋತ ಪರಿಣಾಮ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

ಮೊದಲ ಪಂದ್ಯವನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ರೋಹಿತ್ (Rohit Sharma) ಪಡೆ ಈ ಮ್ಯಾಚ್ ಅನ್ನೂ ಜಯಿಸುವ ಯೋಜನೆಯಲ್ಲಿದೆ. ಅತ್ತ ನೆದರ್​ಲೆಂಡ್ಸ್ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೆಲುವಿನ ಅಂಚಿನಲ್ಲಿ ಎಡವಿತ್ತು. ಸೋತ ಪರಿಣಾಮ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಭಾರತ ದ್ವಿತೀಯ ಸ್ಥಾನಕ್ಕೆ ಕುಸಿದಿದೆ.

2 / 8
ನೆದರ್​ಲೆಂಡ್ಸ್ ಭಾರತಕ್ಕೆ ಹೋಲಿಸಿದರೆ ದುರ್ಬಲ ಎಂದು ಹೇಳಬಹುದು. ಆದರೆ, ಬಾಂಗ್ಲಾದೇಶದ ವಿರುದ್ಧ ಅವರು ಯಾವ ರೀತಿ ಆಡಿದರು ಎನ್ನುವುದನ್ನು ಗಮನಿಸ ಬೇಕಿದೆ. ಯಾವುದೇ ತಂಡವನ್ನು ಹಗುರವಾಗಿ ಪರಿಣಿಸಲು ಸಾಧ್ಯವಿಲ್ಲದ ಕಾರಣ, ಭಾರತವು ಇನ್ನೂ ಜಾಗರೂಕತೆಯಿಂದ ಕೂಡಿರಬೇಕು.

ನೆದರ್​ಲೆಂಡ್ಸ್ ಭಾರತಕ್ಕೆ ಹೋಲಿಸಿದರೆ ದುರ್ಬಲ ಎಂದು ಹೇಳಬಹುದು. ಆದರೆ, ಬಾಂಗ್ಲಾದೇಶದ ವಿರುದ್ಧ ಅವರು ಯಾವ ರೀತಿ ಆಡಿದರು ಎನ್ನುವುದನ್ನು ಗಮನಿಸ ಬೇಕಿದೆ. ಯಾವುದೇ ತಂಡವನ್ನು ಹಗುರವಾಗಿ ಪರಿಣಿಸಲು ಸಾಧ್ಯವಿಲ್ಲದ ಕಾರಣ, ಭಾರತವು ಇನ್ನೂ ಜಾಗರೂಕತೆಯಿಂದ ಕೂಡಿರಬೇಕು.

3 / 8
ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಣೆ ಕಾಣಬೇಕಿದೆ. ಓಪನರ್​ಗಳಾದ ಕೆಎಲ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಸೂರ್ಯಕುಮಾರ್ ಯಾದವ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ.

ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಣೆ ಕಾಣಬೇಕಿದೆ. ಓಪನರ್​ಗಳಾದ ಕೆಎಲ್ ರಾಹುಲ್ ಹಾಗೂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಉತ್ತಮ ಆರಂಭ ಒದಗಿಸಬೇಕಿದೆ. ಸೂರ್ಯಕುಮಾರ್ ಯಾದವ್ ಕೂಡ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ.

4 / 8
ಕೊಹ್ಲಿ ಹಾರ್ದಿಕ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಕೊಡುಗೆ ತಂಡಕ್ಕೆ ಇನ್ನೂ ಬೇಕಾಗಿದೆ.

ಕೊಹ್ಲಿ ಹಾರ್ದಿಕ್ ಉತ್ತಮ ಫಾರ್ಮ್​ನಲ್ಲಿದ್ದಾರೆ. ದಿನೇಶ್ ಕಾರ್ತಿಕ್ ಕೊಡುಗೆ ತಂಡಕ್ಕೆ ಇನ್ನೂ ಬೇಕಾಗಿದೆ.

5 / 8
ಯುಜ್ವೇಂದ್ರ ಚಹಲ್, ಹರ್ಷಲ್ ಪಟೇಲ್, ರಿಷಭ್ ಪಂತ್, ದೀಪಕ್ ಹೂಡ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ.

ಯುಜ್ವೇಂದ್ರ ಚಹಲ್, ಹರ್ಷಲ್ ಪಟೇಲ್, ರಿಷಭ್ ಪಂತ್, ದೀಪಕ್ ಹೂಡ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಅನುಮಾನ.

6 / 8
ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ. 12 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯದ ನೇರ ಪ್ರಸಾರವಾಗಲಿದೆ.

ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯ ಮಧ್ಯಾಹ್ನ 12:30ಕ್ಕೆ ಆರಂಭವಾಗಲಿದೆ. 12 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿಧ ಚಾನೆಲ್‌ಗಳಲ್ಲಿ ಭಾರತ ಮತ್ತು ನೆದರ್ಲೆಂಡ್ಸ್ ನಡುವಿನ ಪಂದ್ಯದ ನೇರ ಪ್ರಸಾರವಾಗಲಿದೆ.

7 / 8
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್/ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್/ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

8 / 8

Published On - 10:07 am, Thu, 27 October 22

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ