AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 2019 ರ ನಂತರ ಹೀಗೊಂದು ಬೇಡದ ದಾಖಲೆ ಬರೆದ ಟೀಂ ಇಂಡಿಯಾ

Team India's Double T20 Series Defeat: ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದಲ್ಲಿ ಸೋಲನುಭವಿಸಿದೆ. ಇದು ಸತತ ಎರಡನೇ ಟಿ20 ಸರಣಿ ಸೋಲಾಗಿದ್ದು, ಇದಕ್ಕೂ ಮುನ್ನ ಐರ್ಲೆಂಡ್ ವಿರುದ್ಧವೂ ಸರಣಿ ಕಳೆದುಕೊಂಡಿತ್ತು. ಈ ಸೋಲು 7 ವರ್ಷಗಳ ನಂತರ ತಂಡವು ಎರಡು ಸತತ ಟಿ20 ಸರಣಿಗಳನ್ನು ಕಳೆದುಕೊಂಡಿರುವ ದಾಖಲೆಯನ್ನು ಪುನರಾವರ್ತಿಸಿದೆ. 2019ರಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ ಇದೇ ಮೊದಲ ಬಾರಿಗೆ.

ಪೃಥ್ವಿಶಂಕರ
|

Updated on: Jul 10, 2026 | 7:56 AM

Share
ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 3-0 ಅಂತರದಿಂದ ಕಳೆದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇಲ್ಲದಿದ್ದರೆ, ಈ ಪಂದ್ಯದಲ್ಲೂ ಭಾರತ ಸೋಲುವ ಸಾಧ್ಯತೆಗಳಿತ್ತು. ಈ ಸರಣಿ ಸೋಲಿನೊಂದಿಗೆ ಭಾರತ ತಂಡ 7 ವರ್ಷಗಳ ಬಳಿಕ ಸತತ ಎರಡು ಟಿ20 ಸರಣಿಗಳನ್ನು ಸೋತ ಬೇಡದ ದಾಖಲೆಯನ್ನು ಬರೆದಿದೆ (PC-BCCI).

ಇಂಗ್ಲೆಂಡ್‌ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ 3-0 ಅಂತರದಿಂದ ಕಳೆದುಕೊಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇಲ್ಲದಿದ್ದರೆ, ಈ ಪಂದ್ಯದಲ್ಲೂ ಭಾರತ ಸೋಲುವ ಸಾಧ್ಯತೆಗಳಿತ್ತು. ಈ ಸರಣಿ ಸೋಲಿನೊಂದಿಗೆ ಭಾರತ ತಂಡ 7 ವರ್ಷಗಳ ಬಳಿಕ ಸತತ ಎರಡು ಟಿ20 ಸರಣಿಗಳನ್ನು ಸೋತ ಬೇಡದ ದಾಖಲೆಯನ್ನು ಬರೆದಿದೆ (PC-BCCI).

1 / 5
ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯನ್ನು ಸೋಲುವುದಕ್ಕೂ ಮುನ್ನ ಟೀಂ ಇಂಡಿಯಾ, ಐರ್ಲೆಂಡ್ ವಿರುದ್ಧವೂ ಸರಣಿಯನ್ನು ಕಳೆದುಕೊಂಡಿತ್ತು. ಈ ಸತತ ಎರಡು ಸರಣಿ ಸೋಲುಗಳೊಂದಿಗೆ ಟೀಂ ಇಂಡಿಯಾ 2019 ರ ಬಳಿಕ ಸತತ ಎರಡು ಟಿ20 ಸರಣಿಗಳನ್ನು ಸೋತ ಬೇಡದ ದಾಖಲೆಗೆ ಕೊರಳೊಡ್ಡಿದೆ (PC-BCCI).

ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯನ್ನು ಸೋಲುವುದಕ್ಕೂ ಮುನ್ನ ಟೀಂ ಇಂಡಿಯಾ, ಐರ್ಲೆಂಡ್ ವಿರುದ್ಧವೂ ಸರಣಿಯನ್ನು ಕಳೆದುಕೊಂಡಿತ್ತು. ಈ ಸತತ ಎರಡು ಸರಣಿ ಸೋಲುಗಳೊಂದಿಗೆ ಟೀಂ ಇಂಡಿಯಾ 2019 ರ ಬಳಿಕ ಸತತ ಎರಡು ಟಿ20 ಸರಣಿಗಳನ್ನು ಸೋತ ಬೇಡದ ದಾಖಲೆಗೆ ಕೊರಳೊಡ್ಡಿದೆ (PC-BCCI).

2 / 5
2019 ರಲ್ಲಿ ಮೂರು ಪಂದ್ಯಗಳ ಟಿ20 ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಆ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿತ್ತು. ಆ ಬಳಿಕ ತನ್ನ ತವರು ನೆಲದಲ್ಲೇ ಅಂದರೆ ಭಾರತದಲ್ಲೇ ಆತಿಥೇಯ ಟೀಂ ಇಂಡಿಯಾವನ್ನು ಆಸ್ಟ್ರೇಲಿಯಾ 2-0 ಅಂತರದಿಂದ ಮಣಿಸಿತ್ತು (PC-HT).

2019 ರಲ್ಲಿ ಮೂರು ಪಂದ್ಯಗಳ ಟಿ20 ಸರಣಿಗಾಗಿ ನ್ಯೂಜಿಲೆಂಡ್ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಆ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿತ್ತು. ಆ ಬಳಿಕ ತನ್ನ ತವರು ನೆಲದಲ್ಲೇ ಅಂದರೆ ಭಾರತದಲ್ಲೇ ಆತಿಥೇಯ ಟೀಂ ಇಂಡಿಯಾವನ್ನು ಆಸ್ಟ್ರೇಲಿಯಾ 2-0 ಅಂತರದಿಂದ ಮಣಿಸಿತ್ತು (PC-HT).

3 / 5
ಇದೀಗ 2026 ರಲ್ಲಿ 7 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದೆ. ಮೊಟ್ಟ ಮೊದಲ ಬಾರಿಗೆ ಐರ್ಲೆಂಡ್ ವಿರುದ್ಧ ಸೋಲುವುದರ ಜೊತೆಗೆ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಸೋತು ಟಿ20 ಸರಣಿಯನ್ನು ಕಳೆದುಕೊಂಡಿತ್ತು. ಯಾವುದೇ ಮಾದರಿಯಲ್ಲಿ ಭಾರತದ ವಿರುದ್ಧ ಐರ್ಲೆಂಡ್ ಸರಣಿ ಗೆದ್ದಿದ್ದು ಇದೇ ಮೊದಲು. ಈ ಸೋಲಿನ ಆಘಾತದೊಂದಿಗೆ ಇಂಗ್ಲೆಂಡ್​ಗೆ ಬಂದಿದ್ದ ಟೀಂ ಇಂಡಿಯಾ ಇಲ್ಲೂ ಅದೇ ಸೋಲಿನ ದವಡೆಗೆ ಸಿಲುಕಿದೆ (PC-BCCI).

ಇದೀಗ 2026 ರಲ್ಲಿ 7 ವರ್ಷಗಳ ಹಿಂದಿನ ಇತಿಹಾಸ ಮರುಕಳಿಸಿದೆ. ಮೊಟ್ಟ ಮೊದಲ ಬಾರಿಗೆ ಐರ್ಲೆಂಡ್ ವಿರುದ್ಧ ಸೋಲುವುದರ ಜೊತೆಗೆ ಟೀಂ ಇಂಡಿಯಾ ಸತತ ಎರಡು ಪಂದ್ಯಗಳನ್ನು ಸೋತು ಟಿ20 ಸರಣಿಯನ್ನು ಕಳೆದುಕೊಂಡಿತ್ತು. ಯಾವುದೇ ಮಾದರಿಯಲ್ಲಿ ಭಾರತದ ವಿರುದ್ಧ ಐರ್ಲೆಂಡ್ ಸರಣಿ ಗೆದ್ದಿದ್ದು ಇದೇ ಮೊದಲು. ಈ ಸೋಲಿನ ಆಘಾತದೊಂದಿಗೆ ಇಂಗ್ಲೆಂಡ್​ಗೆ ಬಂದಿದ್ದ ಟೀಂ ಇಂಡಿಯಾ ಇಲ್ಲೂ ಅದೇ ಸೋಲಿನ ದವಡೆಗೆ ಸಿಲುಕಿದೆ (PC-BCCI).

4 / 5
ಇನ್ನು 4ನೇ ಟಿ20 ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 158 ರನ್​ಗಳ ಸಾಧಾರಣ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಕೇವಲ 1 ವಿಕೆಟ್ ಕಳೆದುಕೊಂಡು 14ನೇ ಓವರ್​ನಲ್ಲೇ ಗೆಲುವಿನ ದಡ ಮುಟ್ಟಿತು (PC-BCCI).

ಇನ್ನು 4ನೇ ಟಿ20 ಪಂದ್ಯದ ವಿಚಾರಕ್ಕೆ ಬರುವುದಾದರೆ.. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 158 ರನ್​ಗಳ ಸಾಧಾರಣ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಕೇವಲ 1 ವಿಕೆಟ್ ಕಳೆದುಕೊಂಡು 14ನೇ ಓವರ್​ನಲ್ಲೇ ಗೆಲುವಿನ ದಡ ಮುಟ್ಟಿತು (PC-BCCI).

5 / 5
Follow Us
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಚೆನ್ನಮ್ಮ ಸಮಾಧಿ ಮುಂದೆಯೇ ಕುಳಿತು ದೇವೇಗೌಡರ ಕಣ್ಣೀರು
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಎನ್‌ಜಿಒ ನೆರವಿನಿಂದ ತಂದೆ-ಮಗಳ ಭಾವನಾತ್ಮಕ ಪುನರ್ಮಿಲನ
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ಕರ್ನಾಟಕ ಬಂದ್​ ಕರೆಗೆ ಕನ್ನಡ ಸಂಘಟನೆಗಳ ನಿರ್ಧಾರ: ನಾಳೆಯೇ ಡೇಟ್ ಫಿಕ್ಸ್
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್