AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿ ಜೊತೆಗೆ ವಿಶ್ವಕಪ್ ಗೆದ್ದಿದ್ದ ಭಾರತದ ಸ್ಟಾರ್ ಬ್ಯಾಟರ್​ ಕ್ರಿಕೆಟ್​ಗೆ ವಿದಾಯ

Saurabh Tiwary: ಸೌರಭ್ ತಿವಾರಿ 2006 ರಲ್ಲಿ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದರು. ಇಲ್ಲಿಯವರೆಗೆ ಅವರು 115 ಪಂದ್ಯಗಳಲ್ಲಿ 22 ಶತಕಗಳನ್ನು ಒಳಗೊಂಡಂತೆ 8030 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು 116 ಲಿಸ್ಟ್-ಎ ಪಂದ್ಯಗಳಲ್ಲಿ 46.55 ಸರಾಸರಿಯಲ್ಲಿ 6 ಶತಕಗಳನ್ನು ಒಳಗೊಂಡಂತೆ 4050 ರನ್ ಗಳಿಸಿದ್ದಾರೆ.

ಪೃಥ್ವಿಶಂಕರ
|

Updated on: Feb 12, 2024 | 7:50 PM

Share
2008 ರಲ್ಲಿ ನಡೆದ ಅಂಡರ್ 19 ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ್ದ ತಂಡದ ಸ್ಟಾರ್ ಆಟಗಾರನೊಬ್ಬ ಇದೀಗ ವೃತ್ತಿಪರ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತಕ್ಕೆ ವಿಶ್ವಕಪ್‌ ಗೆಲ್ಲಿಸಿಕೊಟ್ಟಿದ ಸೌರಭ್ ತಿವಾರಿ ಕ್ರಿಕೆಟ್​ ಜೀವನಕ್ಕೆ ಇದೀಗ ನಿವೃತ್ತಿ ಘೋಷಿಸಿದ್ದಾರೆ.

2008 ರಲ್ಲಿ ನಡೆದ ಅಂಡರ್ 19 ವಿಶ್ವಕಪ್​ನಲ್ಲಿ ಟೀಂ ಇಂಡಿಯಾವನ್ನು ಚಾಂಪಿಯನ್ ಮಾಡಿದ್ದ ತಂಡದ ಸ್ಟಾರ್ ಆಟಗಾರನೊಬ್ಬ ಇದೀಗ ವೃತ್ತಿಪರ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತಕ್ಕೆ ವಿಶ್ವಕಪ್‌ ಗೆಲ್ಲಿಸಿಕೊಟ್ಟಿದ ಸೌರಭ್ ತಿವಾರಿ ಕ್ರಿಕೆಟ್​ ಜೀವನಕ್ಕೆ ಇದೀಗ ನಿವೃತ್ತಿ ಘೋಷಿಸಿದ್ದಾರೆ.

1 / 7
ಪ್ರಸ್ತುತ  ರಣಜಿ ಟ್ರೋಫಿ ಆಡುತ್ತಿರುವ 34 ವರ್ಷದ ಸೌರಭ್ ತಮ್ಮ ಕೊನೆಯ ಪಂದ್ಯವನ್ನು ಜಾರ್ಖಂಡ್ ಪರ ಆಡಲಿದ್ದು ಆ ನಂತರ ನಿವೃತ್ತಿ ಹೊಂದಲಿದ್ದಾರೆ. ತಮ್ಮ 11 ನೇ ವಯಸ್ಸಿನಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿದ ಸೌರಭ್ ಅವರು 2006-07 ರ ರಣಜಿ ಟ್ರೋಫಿ ಸೀಸನ್​ನಲ್ಲಿ ಪ್ರಥಮ ದರ್ಜೆ ಪಂದ್ಯಗಳಿಗೆ ಪಾದಾರ್ಪಣೆ ಮಾಡಿದರು.

ಪ್ರಸ್ತುತ ರಣಜಿ ಟ್ರೋಫಿ ಆಡುತ್ತಿರುವ 34 ವರ್ಷದ ಸೌರಭ್ ತಮ್ಮ ಕೊನೆಯ ಪಂದ್ಯವನ್ನು ಜಾರ್ಖಂಡ್ ಪರ ಆಡಲಿದ್ದು ಆ ನಂತರ ನಿವೃತ್ತಿ ಹೊಂದಲಿದ್ದಾರೆ. ತಮ್ಮ 11 ನೇ ವಯಸ್ಸಿನಲ್ಲಿ ಕ್ರಿಕೆಟ್ ಆಡಲು ಪ್ರಾರಂಭಿಸಿದ ಸೌರಭ್ ಅವರು 2006-07 ರ ರಣಜಿ ಟ್ರೋಫಿ ಸೀಸನ್​ನಲ್ಲಿ ಪ್ರಥಮ ದರ್ಜೆ ಪಂದ್ಯಗಳಿಗೆ ಪಾದಾರ್ಪಣೆ ಮಾಡಿದರು.

2 / 7
ಅಂದಿನಿಂದ ಸೌರಭ್ ಜಾರ್ಖಂಡ್ ತಂಡದ ಪರ ರಣಜಿ ಟ್ರೋಫಿ ಆಡುತ್ತಿದ್ದರು. ಆದರೆ ಪ್ರಸ್ತಕ ಸೀಸನ್​ನಲ್ಲಿ ಜಾರ್ಖಂಡ್ ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಈ ತಂಡ ಇದುವರೆಗೆ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಈ ಕಾರಣದಿಂದ ತಂಡ ಕ್ವಾರ್ಟರ್ ಫೈನಲ್‌ ರೇಸ್‌ನಿಂದ ಹೊರಗುಳಿದಿದೆ.

ಅಂದಿನಿಂದ ಸೌರಭ್ ಜಾರ್ಖಂಡ್ ತಂಡದ ಪರ ರಣಜಿ ಟ್ರೋಫಿ ಆಡುತ್ತಿದ್ದರು. ಆದರೆ ಪ್ರಸ್ತಕ ಸೀಸನ್​ನಲ್ಲಿ ಜಾರ್ಖಂಡ್ ತಂಡ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಈ ತಂಡ ಇದುವರೆಗೆ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. ಈ ಕಾರಣದಿಂದ ತಂಡ ಕ್ವಾರ್ಟರ್ ಫೈನಲ್‌ ರೇಸ್‌ನಿಂದ ಹೊರಗುಳಿದಿದೆ.

3 / 7
EPSNcricinfo ವರದಿಯ ಪ್ರಕಾರ, ತಮ್ಮ ನಿವೃತ್ತಿಯ ಬಗ್ಗೆ ಮನದಾಳ ಹಂಚಿಕೊಂಡಿರುವ ಸೌರಭ್ ತಿವಾರಿ, ಈ ಪ್ರಯಾಣಕ್ಕೆ ವಿದಾಯ ಹೇಳುವುದು ಸ್ವಲ್ಪ ಕಷ್ಟ. ಆದರೆ ಇದಕ್ಕೆ ಇದು ಸರಿಯಾದ ಸಮಯ ಎಂದು ನನಗೆ ಖಾತ್ರಿಯಿದೆ. ಪ್ರಸ್ತುತ ನಾನು ರಾಷ್ಟ್ರೀಯ ತಂಡ ಮತ್ತು ಐಪಿಎಲ್‌ನಲ್ಲಿ ಆಡುತ್ತಿಲ್ಲ. ಹೀಗಾಗಿ ರಾಜ್ಯ ಯುವ ಆಟಗಾರನಿಗೆ ಅವಕಾಶ ನೀಡುವ ಸಲುವಾಗಿ ಕ್ರಿಕೆಟ್​ನಿಂದ ದೂರ ಸರಿಯುತ್ತಿದ್ದೇನೆ ಎಂದಿದ್ದಾರೆ.

EPSNcricinfo ವರದಿಯ ಪ್ರಕಾರ, ತಮ್ಮ ನಿವೃತ್ತಿಯ ಬಗ್ಗೆ ಮನದಾಳ ಹಂಚಿಕೊಂಡಿರುವ ಸೌರಭ್ ತಿವಾರಿ, ಈ ಪ್ರಯಾಣಕ್ಕೆ ವಿದಾಯ ಹೇಳುವುದು ಸ್ವಲ್ಪ ಕಷ್ಟ. ಆದರೆ ಇದಕ್ಕೆ ಇದು ಸರಿಯಾದ ಸಮಯ ಎಂದು ನನಗೆ ಖಾತ್ರಿಯಿದೆ. ಪ್ರಸ್ತುತ ನಾನು ರಾಷ್ಟ್ರೀಯ ತಂಡ ಮತ್ತು ಐಪಿಎಲ್‌ನಲ್ಲಿ ಆಡುತ್ತಿಲ್ಲ. ಹೀಗಾಗಿ ರಾಜ್ಯ ಯುವ ಆಟಗಾರನಿಗೆ ಅವಕಾಶ ನೀಡುವ ಸಲುವಾಗಿ ಕ್ರಿಕೆಟ್​ನಿಂದ ದೂರ ಸರಿಯುತ್ತಿದ್ದೇನೆ ಎಂದಿದ್ದಾರೆ.

4 / 7
ಸೌರಭ್ ತಿವಾರಿ 2006 ರಲ್ಲಿ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದರು. ಇಲ್ಲಿಯವರೆಗೆ ಅವರು 115 ಪಂದ್ಯಗಳಲ್ಲಿ 22 ಶತಕಗಳನ್ನು ಒಳಗೊಂಡಂತೆ 8030 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು 116 ಲಿಸ್ಟ್-ಎ ಪಂದ್ಯಗಳಲ್ಲಿ 46.55 ಸರಾಸರಿಯಲ್ಲಿ 6 ಶತಕಗಳನ್ನು ಒಳಗೊಂಡಂತೆ 4050 ರನ್ ಗಳಿಸಿದ್ದಾರೆ.

ಸೌರಭ್ ತಿವಾರಿ 2006 ರಲ್ಲಿ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದರು. ಇಲ್ಲಿಯವರೆಗೆ ಅವರು 115 ಪಂದ್ಯಗಳಲ್ಲಿ 22 ಶತಕಗಳನ್ನು ಒಳಗೊಂಡಂತೆ 8030 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು 116 ಲಿಸ್ಟ್-ಎ ಪಂದ್ಯಗಳಲ್ಲಿ 46.55 ಸರಾಸರಿಯಲ್ಲಿ 6 ಶತಕಗಳನ್ನು ಒಳಗೊಂಡಂತೆ 4050 ರನ್ ಗಳಿಸಿದ್ದಾರೆ.

5 / 7
ಇದಲ್ಲದೆ ಟೀಂ ಇಂಡಿಯಾದಲ್ಲು ಕಾಣಿಸಿಕೊಂಡಿರುವ ಸೌರಭ್, ರಾಷ್ಟ್ರೀಯ ತಂಡದ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ 49 ರನ್ ಕಲೆಹಾಕಿದ್ದರು.

ಇದಲ್ಲದೆ ಟೀಂ ಇಂಡಿಯಾದಲ್ಲು ಕಾಣಿಸಿಕೊಂಡಿರುವ ಸೌರಭ್, ರಾಷ್ಟ್ರೀಯ ತಂಡದ ಪರ ಮೂರು ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ 49 ರನ್ ಕಲೆಹಾಕಿದ್ದರು.

6 / 7
ಸೌರಭ್ ತಿವಾರಿ ಐಪಿಎಲ್​ನಲ್ಲೂ ತಮ್ಮ ಅದೃಷ್ಟ ಪರೀಕ್ಷಿಸಿದ್ದು, ಅವರು ಮುಂಬೈ ಇಂಡಿಯನ್ಸ್, ಆರ್‌ಸಿಬಿ, ಡೆಲ್ಲಿ ಡೇರ್‌ಡೆವಿಲ್ಸ್ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್‌ ತಂಡದ ಪರ ಐಪಿಎಲ್‌ನಲ್ಲಿ ಆಡಿದ್ದಾರೆ. ಒಟ್ಟು 93 ಐಪಿಎಲ್ ಪಂದ್ಯಗಳನ್ನಾಡಿರುವ ತಿವಾರಿ 28.73 ಸರಾಸರಿಯಲ್ಲಿ 8 ಅರ್ಧಶತಕಗಳನ್ನು ಒಳಗೊಂಡಂತೆ 1494 ರನ್ ಕಲೆಹಾಕಿದ್ದಾರೆ.

ಸೌರಭ್ ತಿವಾರಿ ಐಪಿಎಲ್​ನಲ್ಲೂ ತಮ್ಮ ಅದೃಷ್ಟ ಪರೀಕ್ಷಿಸಿದ್ದು, ಅವರು ಮುಂಬೈ ಇಂಡಿಯನ್ಸ್, ಆರ್‌ಸಿಬಿ, ಡೆಲ್ಲಿ ಡೇರ್‌ಡೆವಿಲ್ಸ್ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್‌ ತಂಡದ ಪರ ಐಪಿಎಲ್‌ನಲ್ಲಿ ಆಡಿದ್ದಾರೆ. ಒಟ್ಟು 93 ಐಪಿಎಲ್ ಪಂದ್ಯಗಳನ್ನಾಡಿರುವ ತಿವಾರಿ 28.73 ಸರಾಸರಿಯಲ್ಲಿ 8 ಅರ್ಧಶತಕಗಳನ್ನು ಒಳಗೊಂಡಂತೆ 1494 ರನ್ ಕಲೆಹಾಕಿದ್ದಾರೆ.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ