ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದಾರೆ. ಮಂಗಳವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಂದ ಶಮಿ ದೇಶದ 2ನೇ ಅತ್ಯುನ್ನತ ಕ್ರೀಡಾ ಪ್ರಶಸ್ತಿ ಪಡೆದರು. ಆದಾಗ್ಯೂ, ಧೋನಿ ಸೇರಿದಂತೆ ಕೆಲ ಆಟಗಾರರಿಗೆ ಅರ್ಜುನ ಪ್ರಶಸ್ತಿ ದೊರೆತಿಲ್ಲ. ಆ ಆಟಗಾರರು ಯಾರೆಲ್ಲಾ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ...
ಕೃಷ್ಣಮಾಚಾರಿ ಶ್ರೀಕಾಂತ್: ಟೀಮ್ ಇಂಡಿಯಾದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಪರ ಭಾರತದ ಪರ 2,062 ಟೆಸ್ಟ್ ರನ್ ಮತ್ತು 4,091 ಏಕದಿನ ರನ್ಸ್ ಕಲೆಹಾಕಿದ್ದಾರೆ. ಅಲ್ಲದೆ 1983 ರ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಇದಾಗ್ಯೂ ಅವರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿಲ್ಲ.
ಸುರೇಶ್ ರೈನಾ: ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲಿ ಶತಕಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ಹಾಗೆಯೇ 2011 ರಲ್ಲಿ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ರೈನಾ ಕೊಡುಗೆ ನೀಡಿದ್ದರು. ಅಷ್ಟೇ ಅಲ್ಲದೆ ಯಾವುದೇ ವಿವಾದವಿಲ್ಲದೇ ಕ್ರಿಕೆಟ್ ಕೆರಿಯರ್ ಮುಗಿಸಿದ್ದ ರೈನಾ ಕೂಡ ಅರ್ಜುನ ಪ್ರಶಸ್ತಿ ಗೌರವಕ್ಕೆ ಪಾತ್ರವಾಗಿಲ್ಲ.
ಆಶಿಶ್ ನೆಹ್ರಾ: ಟೀಮ್ ಇಂಡಿಯಾ ಪರ 18 ವರ್ಷಗಳ ಕಾಲ ಆಡಿದ್ದ ಎಡಗೈ ವೇಗಿ ಆಶಿಶ್ ನೆಹ್ರಾ 235 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇದಾಗ್ಯೂ ಅವರು ಅರ್ಜುನ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.
ಮಹೇಂದ್ರ ಸಿಂಗ್ ಧೋನಿ: ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ, ಕ್ರಿಕೆಟ್ ದಂತಕಥೆ ಮಹೇಂದ್ರ ಸಿಂಗ್ ಧೋನಿ ಅರ್ಜುನ ಪ್ರಶಸ್ತಿ ಪಡೆದಿಲ್ಲ. ಇದಾಗ್ಯೂ ದೇಶದ ಅತ್ಯುನ್ನತ ಕ್ರೀಡಾ ಗೌರವ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ ಗೌರವಕ್ಕೆ ಧೋನಿ ಪಾತ್ರರಾಗಿದ್ದಾರೆ.