AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಂ ಇಂಡಿಯಾ ಘಾತುಕ ವೇಗಿ

Varun Aaron Retires: ಭಾರತೀಯ ವೇಗದ ಬೌಲರ್ ವರುಣ್ ಆರಾನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವರುಣ್, 9 ಏಕದಿನ ಮತ್ತು 9 ಟೆಸ್ಟ್ ಪಂದ್ಯಗಳಲ್ಲಿ 29 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್‌ನಲ್ಲಿಯೂ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೂ, ಆಗಾಗ್ಗೆ ಗಾಯದಿಂದ ಬಳಲುತ್ತಿದ್ದ ಅವರ ಅಂತರಾಷ್ಟ್ರೀಯ ಕ್ರಿಕೆಟ್​ ಜೀವನ ಬಹಳ ದಿನಗಳವರೆಗೆ ನಡೆಯಲಿಲ್ಲ.

ಪೃಥ್ವಿಶಂಕರ
|

Updated on: Jan 10, 2025 | 3:24 PM

Share
ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾದಲ್ಲಿ ಆಟಗಾರರ ನಿವೃತ್ತಿಯ ಪರ್ವ ಆರಂಭವಾಗಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಅನುಭವಿ ಸ್ಪಿನ್ನರ್ ಆರ್​. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅವರ ಬಳಿಕ ಮತ್ತೊಬ್ಬ ವೇಗಿ ರಿಷಿ ಧವನ್ ಕೂಡ  ಸೀಮಿತ ಓವರ್​ಗಳ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಮತ್ತೊಬ್ಬ ವೇಗದ ಬೌಲರ್ ವರುಣ್ ಆರೋನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾದಲ್ಲಿ ಆಟಗಾರರ ನಿವೃತ್ತಿಯ ಪರ್ವ ಆರಂಭವಾಗಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಅನುಭವಿ ಸ್ಪಿನ್ನರ್ ಆರ್​. ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅವರ ಬಳಿಕ ಮತ್ತೊಬ್ಬ ವೇಗಿ ರಿಷಿ ಧವನ್ ಕೂಡ ಸೀಮಿತ ಓವರ್​ಗಳ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಮತ್ತೊಬ್ಬ ವೇಗದ ಬೌಲರ್ ವರುಣ್ ಆರೋನ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.

1 / 6
2011 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ವರುಣ್, ಭಾರತದ ಪರ 9 ಏಕದಿನ ಮತ್ತು ಅಷ್ಟೇ ಸಂಖ್ಯೆಯ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಒಟ್ಟು 29 ವಿಕೆಟ್​ಗಳನ್ನು ಪಡೆದಿದ್ದಾರೆ. ತನ್ನ ವೇಗದ ಬೌಲಿಂಗ್ ಮೂಲಕವೇ ಸಂಚಲನ ಮೂಡಿಸಿದ್ದ ವರುಣ್ ಅವರು ಆಗಾಗ್ಗೆ ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಗುಳಿಯುತ್ತಿದ್ದರು.

2011 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ವರುಣ್, ಭಾರತದ ಪರ 9 ಏಕದಿನ ಮತ್ತು ಅಷ್ಟೇ ಸಂಖ್ಯೆಯ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು ಒಟ್ಟು 29 ವಿಕೆಟ್​ಗಳನ್ನು ಪಡೆದಿದ್ದಾರೆ. ತನ್ನ ವೇಗದ ಬೌಲಿಂಗ್ ಮೂಲಕವೇ ಸಂಚಲನ ಮೂಡಿಸಿದ್ದ ವರುಣ್ ಅವರು ಆಗಾಗ್ಗೆ ಗಾಯಕ್ಕೆ ತುತ್ತಾಗಿ ತಂಡದಿಂದ ಹೊರಗುಳಿಯುತ್ತಿದ್ದರು.

2 / 6
2010-11ರಲ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದಿದ್ದ ವರುಣ್, ಗಂಟೆಗೆ 153 ಕಿಲೋಮೀಟರ್ ವೇಗದಲ್ಲಿ ಚೆಂಡನ್ನು ಎಸೆಯುವ ಮೂಲಕ ಸಂಚಲನ ಮೂಡಿಸಿದ್ದರು. ಹೀಗಾಗಿ ಬೇಗನೇ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರಾದರೂ ತಂಡದಲ್ಲಿ ಖಾಯಂ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

2010-11ರಲ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಮೊದಲ ಬಾರಿಗೆ ಎಲ್ಲರ ಗಮನ ಸೆಳೆದಿದ್ದ ವರುಣ್, ಗಂಟೆಗೆ 153 ಕಿಲೋಮೀಟರ್ ವೇಗದಲ್ಲಿ ಚೆಂಡನ್ನು ಎಸೆಯುವ ಮೂಲಕ ಸಂಚಲನ ಮೂಡಿಸಿದ್ದರು. ಹೀಗಾಗಿ ಬೇಗನೇ ಅಂತರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರಾದರೂ ತಂಡದಲ್ಲಿ ಖಾಯಂ ಸ್ಥಾನ ಪಡೆಯಲು ಸಾಧ್ಯವಾಗಲಿಲ್ಲ.

3 / 6
ಟೀಂ ಇಂಡಿಯಾ ಪರ ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿರುವ ವರುಣ್ ಒಟ್ಟು 11 ವಿಕೆಟ್ ಕಬಳಿಸಿದ್ದರೆ, ಇತ್ತ ಟೆಸ್ಟ್ ಕ್ರಿಕೆಟ್​ನಲ್ಲಿಯೂ 9 ಪಂದ್ಯಗಳನ್ನಾಡಿರುವ ಅವರ ಖಾತೆಯಲ್ಲಿ ಒಟ್ಟು 18 ವಿಕೆಟ್​ಗಳು ಸೇರಿವೆ. ಆದಾಗ್ಯೂ, ದೇಶೀಯ ಕ್ರಿಕೆಟ್‌ನಲ್ಲಿ ವರುಣ್ ಜಾರ್ಖಂಡ್‌ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ.

ಟೀಂ ಇಂಡಿಯಾ ಪರ ಒಟ್ಟು 9 ಏಕದಿನ ಪಂದ್ಯಗಳನ್ನು ಆಡಿರುವ ವರುಣ್ ಒಟ್ಟು 11 ವಿಕೆಟ್ ಕಬಳಿಸಿದ್ದರೆ, ಇತ್ತ ಟೆಸ್ಟ್ ಕ್ರಿಕೆಟ್​ನಲ್ಲಿಯೂ 9 ಪಂದ್ಯಗಳನ್ನಾಡಿರುವ ಅವರ ಖಾತೆಯಲ್ಲಿ ಒಟ್ಟು 18 ವಿಕೆಟ್​ಗಳು ಸೇರಿವೆ. ಆದಾಗ್ಯೂ, ದೇಶೀಯ ಕ್ರಿಕೆಟ್‌ನಲ್ಲಿ ವರುಣ್ ಜಾರ್ಖಂಡ್‌ ಪರ ಉತ್ತಮ ಪ್ರದರ್ಶನ ನೀಡಿದ್ದಾರೆ.

4 / 6
ವರುಣ್ ಒಟ್ಟು 66 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಒಟ್ಟು 173 ವಿಕೆಟ್ಗಳನ್ನು ಪಡೆದಿದ್ದಾರೆ. ಹಾಗೆಯೇ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ವರುಣ್ 87 ಪಂದ್ಯಗಳಲ್ಲಿ 141 ವಿಕೆಟ್ ಪಡೆದಿದ್ದಾರೆ. ಟಿ-20 ಕ್ರಿಕೆಟ್‌ನಲ್ಲಿಯೂ ಕಮಾಲ್ ಮಾಡಿರುವ ಅವರು ಆಡಿರುವ 95 ಪಂದ್ಯಗಳಲ್ಲಿ ಒಟ್ಟು 93 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ವರುಣ್ ಒಟ್ಟು 66 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಒಟ್ಟು 173 ವಿಕೆಟ್ಗಳನ್ನು ಪಡೆದಿದ್ದಾರೆ. ಹಾಗೆಯೇ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ವರುಣ್ 87 ಪಂದ್ಯಗಳಲ್ಲಿ 141 ವಿಕೆಟ್ ಪಡೆದಿದ್ದಾರೆ. ಟಿ-20 ಕ್ರಿಕೆಟ್‌ನಲ್ಲಿಯೂ ಕಮಾಲ್ ಮಾಡಿರುವ ಅವರು ಆಡಿರುವ 95 ಪಂದ್ಯಗಳಲ್ಲಿ ಒಟ್ಟು 93 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

5 / 6
ವರುಣ್ ಆರೋನ್ ಐಪಿಎಲ್‌ನಲ್ಲಿ ಹಲವು ತಂಡಗಳ ಪರ ಆಡಿದ್ದಾರೆ. 2011 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಪಾದಾರ್ಪಣೆ ಮಾಡಿದ ಅವರು ಈ ಲೀಗ್​ನಲ್ಲಿ ಒಟ್ಟು 52 ಪಂದ್ಯಗಳನ್ನಾಡಿದ್ದು 44 ವಿಕೆಟ್ ಕಬಳಿಸಿದ್ದಾರೆ. ಆದರೆ, 2022ರ ನಂತರ ವರುಣ್‌ಗೆ ಐಪಿಎಲ್‌ನಲ್ಲಿ ತನ್ನ ಛಾಪು ಮೂಡಿಸುವ ಅವಕಾಶ ಸಿಗಲಿಲ್ಲ. ಈ ಲೀಗ್‌ನಲ್ಲಿ ಅವರು ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಸೇರಿದಂತೆ ಹಲವು ದೊಡ್ಡ ತಂಡಗಳಿಗೆ ಆಡಿದ್ದಾರೆ.

ವರುಣ್ ಆರೋನ್ ಐಪಿಎಲ್‌ನಲ್ಲಿ ಹಲವು ತಂಡಗಳ ಪರ ಆಡಿದ್ದಾರೆ. 2011 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಪಾದಾರ್ಪಣೆ ಮಾಡಿದ ಅವರು ಈ ಲೀಗ್​ನಲ್ಲಿ ಒಟ್ಟು 52 ಪಂದ್ಯಗಳನ್ನಾಡಿದ್ದು 44 ವಿಕೆಟ್ ಕಬಳಿಸಿದ್ದಾರೆ. ಆದರೆ, 2022ರ ನಂತರ ವರುಣ್‌ಗೆ ಐಪಿಎಲ್‌ನಲ್ಲಿ ತನ್ನ ಛಾಪು ಮೂಡಿಸುವ ಅವಕಾಶ ಸಿಗಲಿಲ್ಲ. ಈ ಲೀಗ್‌ನಲ್ಲಿ ಅವರು ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಸೇರಿದಂತೆ ಹಲವು ದೊಡ್ಡ ತಂಡಗಳಿಗೆ ಆಡಿದ್ದಾರೆ.

6 / 6
TV9 Network ನ್ಯೂಸ್ ಡೈರೆಕ್ಟರ್​​ಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್‌
TV9 Network ನ್ಯೂಸ್ ಡೈರೆಕ್ಟರ್​​ಗೆ ವಾಯ್ಸ್ ಆಪ್ ದ ಪೀಪಲ್ ಅವಾರ್ಡ್‌
ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ಕೆಂಪೇಗೌಡ ಏರ್ಪೋಟ್​​ನಲ್ಲೇ ಲಾಂಗ್ ಹಿಡಿದು ಅಟ್ಟಾಡಿಸಿದ ವಿಡಿಯೋ ಸೆರೆ
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!