AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI Test: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ನಲ್ಲಿ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ ಭಾರತದ ಈ 4 ಆಟಗಾರರು

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ಅಂತೆಯೆ ವಿಂಡೀಸ್ ವಿರುದ್ಧದ ಟೆಸ್ಟ್ ಸಂದರ್ಭ ಭಾರತದ ಈ 4 ಆಟಗಾರರು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

Vinay Bhat
|

Updated on: Jun 25, 2023 | 10:08 AM

Share
ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಕೆರಿಬಿಯನ್ನರ ನಾಡಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಇದು ಜುಲೈ 12ಕ್ಕೆ ಆರಂಭವಾಗಲಿದ್ದು, ಮೊದಲ ಟೆಸ್ಟ್ ಡೊಮಿನಿಕಾದಲ್ಲಿ ನಡೆದರೆ, ದ್ವಿತೀಯ ಟೆಸ್ಟ್ ಜುಲೈ 20 ರಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಆಯೋಜಿಸಲಾಗಿದೆ.

ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಕೆರಿಬಿಯನ್ನರ ನಾಡಲ್ಲಿ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಇದು ಜುಲೈ 12ಕ್ಕೆ ಆರಂಭವಾಗಲಿದ್ದು, ಮೊದಲ ಟೆಸ್ಟ್ ಡೊಮಿನಿಕಾದಲ್ಲಿ ನಡೆದರೆ, ದ್ವಿತೀಯ ಟೆಸ್ಟ್ ಜುಲೈ 20 ರಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಆಯೋಜಿಸಲಾಗಿದೆ.

1 / 7
ಈ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟ ಕೂಡ ಮಾಡಿದೆ. ಇದರಲ್ಲಿ ಕೆಲ ಅಚ್ಚರಿಯ ಬೆಳವಣಿಗೆಗಳು ನಡೆದಿದ್ದು, ಚೇತೇಶ್ವರ್ ಪೂಜಾರ, ಉಮೇಶ್ ಯಾದವ್​ರಂತಹ ಹಿರಿಯ ಆಟಗಾರರನ್ನು ಕೈಬಿಡಲಾಗಿದೆ.

ಈ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟ ಕೂಡ ಮಾಡಿದೆ. ಇದರಲ್ಲಿ ಕೆಲ ಅಚ್ಚರಿಯ ಬೆಳವಣಿಗೆಗಳು ನಡೆದಿದ್ದು, ಚೇತೇಶ್ವರ್ ಪೂಜಾರ, ಉಮೇಶ್ ಯಾದವ್​ರಂತಹ ಹಿರಿಯ ಆಟಗಾರರನ್ನು ಕೈಬಿಡಲಾಗಿದೆ.

2 / 7
ಇವರ ಬದಲು ಕೆಲ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ನವ್​ದೀಪ್ ಸೈನಿ ಅನೇಕ ಸಮಯದ ಬಳಿಕ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅಂತೆಯೆ ವಿಂಡೀಸ್ ವಿರುದ್ಧದ ಟೆಸ್ಟ್ ಸಂದರ್ಭ ಭಾರತದ ಈ 4 ಆಟಗಾರರು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

ಇವರ ಬದಲು ಕೆಲ ಯುವ ಆಟಗಾರರಿಗೆ ಅವಕಾಶ ನೀಡಲಾಗಿದೆ. ನವ್​ದೀಪ್ ಸೈನಿ ಅನೇಕ ಸಮಯದ ಬಳಿಕ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಅಂತೆಯೆ ವಿಂಡೀಸ್ ವಿರುದ್ಧದ ಟೆಸ್ಟ್ ಸಂದರ್ಭ ಭಾರತದ ಈ 4 ಆಟಗಾರರು ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

3 / 7
ಯಶಸ್ವಿ ಜೈಸ್ವಾಲ್: 21 ವರ್ಷ ಪ್ರಯಾದ ಯಶಸ್ವಿ ಜೈಸ್ವಾಲ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಪ್ರಥಮ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಅವಕಾಶ ಹೊಂದಿದ್ದಾರೆ. ಇವರು ಈ ಬಾರಿಯ ಐಪಿಎಲ್​ನಲ್ಲಿ ಆಡಿದ 14 ಪಂದ್ಯಗಳಲ್ಲಿ 625 ರನ್ ಸಿಡಿಸಿದ್ದರು. ಒಂದು ಶತಕ ಕೂಡ ಬಂದಿದೆ.

ಯಶಸ್ವಿ ಜೈಸ್ವಾಲ್: 21 ವರ್ಷ ಪ್ರಯಾದ ಯಶಸ್ವಿ ಜೈಸ್ವಾಲ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಪ್ರಥಮ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಅವಕಾಶ ಹೊಂದಿದ್ದಾರೆ. ಇವರು ಈ ಬಾರಿಯ ಐಪಿಎಲ್​ನಲ್ಲಿ ಆಡಿದ 14 ಪಂದ್ಯಗಳಲ್ಲಿ 625 ರನ್ ಸಿಡಿಸಿದ್ದರು. ಒಂದು ಶತಕ ಕೂಡ ಬಂದಿದೆ.

4 / 7
ರುತುರಾಜ್ ಗಾಯಕ್ವಾಡ್: ಇಲ್ಲಿಯವರೆಗೆ ಟೀಮ್ ಇಂಡಿಯಾ ಪರ ಒಂದು ODI ಮತ್ತು 9 T20I ಪಂದ್ಯಗಳನ್ನು ಆಡಿರುವ ರುತುರಾಜ್ ಗಾಯಕ್ವಾಡ್ ಅವರು ತಮ್ಮ ಮೊದಲ ಟೆಸ್ಟ್ ಆಡಲು ಸಜ್ಜಾಗಿದ್ದಾರೆ. ಇವರು ಪೂಜಾರ ಸ್ಥಾನ ತುಂಬಲಿದ್ದಾರೆ ಎನ್ನಲಾಗಿದೆ. 26 ವರ್ಷದ ಬಲಗೈ ಬ್ಯಾಟರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 42.19 ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ.

ರುತುರಾಜ್ ಗಾಯಕ್ವಾಡ್: ಇಲ್ಲಿಯವರೆಗೆ ಟೀಮ್ ಇಂಡಿಯಾ ಪರ ಒಂದು ODI ಮತ್ತು 9 T20I ಪಂದ್ಯಗಳನ್ನು ಆಡಿರುವ ರುತುರಾಜ್ ಗಾಯಕ್ವಾಡ್ ಅವರು ತಮ್ಮ ಮೊದಲ ಟೆಸ್ಟ್ ಆಡಲು ಸಜ್ಜಾಗಿದ್ದಾರೆ. ಇವರು ಪೂಜಾರ ಸ್ಥಾನ ತುಂಬಲಿದ್ದಾರೆ ಎನ್ನಲಾಗಿದೆ. 26 ವರ್ಷದ ಬಲಗೈ ಬ್ಯಾಟರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 42.19 ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ.

5 / 7
ಇಶಾನ್ ಕಿಶನ್: ಇಶಾನ್ ಕಿಶನ್ 2023 ರ ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023 ಫೈನಲ್‌ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ. ಆದರೀಗ ಕೆಎಸ್ ಭರತ್ ನಿರೀಕ್ಷೆಗೆ ತಕ್ಕಂತೆ ಆಡುತ್ತಿಲ್ಲ. ಹೀಗಾಗಿ ಇಶಾನ್ ಮೊದಲ ಟೆಸ್ಟ್​ನಲ್ಲಿ ಆಡುವ ಸಾಧ್ಯತೆ ಇದೆ.

ಇಶಾನ್ ಕಿಶನ್: ಇಶಾನ್ ಕಿಶನ್ 2023 ರ ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023 ಫೈನಲ್‌ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಟೆಸ್ಟ್‌ಗೆ ಪದಾರ್ಪಣೆ ಮಾಡುವ ಅವಕಾಶ ಸಿಗಲಿಲ್ಲ. ಆದರೀಗ ಕೆಎಸ್ ಭರತ್ ನಿರೀಕ್ಷೆಗೆ ತಕ್ಕಂತೆ ಆಡುತ್ತಿಲ್ಲ. ಹೀಗಾಗಿ ಇಶಾನ್ ಮೊದಲ ಟೆಸ್ಟ್​ನಲ್ಲಿ ಆಡುವ ಸಾಧ್ಯತೆ ಇದೆ.

6 / 7
ಮುಕೇಶ್ ಕುಮಾರ್: ಮುಖೇಶ್ ಕುಮಾರ್ ಕೂಡ ಟೀಮ್ ಇಂಡಿಯಾ ಪರ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲು ಕಾಯುತ್ತಿದ್ದಾರೆ. ಅವರು ಈ ಮೊದಲು ODI ಮತ್ತು T20I ತಂಡದ ಭಾಗವಾಗಿದ್ದರು. ಆದರೆ ಪ್ಲೇಯಿಂಗ್ XI ನಲ್ಲಿ ಕಾಣಿಸಿಕೊಳ್ಳುವ ಅವಕಾಶವನ್ನು ಪಡೆದುಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪರ ಮಾರಕ ದಾಳಿ ಸಂಘಟಿಸಲು ಸಜ್ಜಾಗುತ್ತಿದ್ದಾರೆ.

ಮುಕೇಶ್ ಕುಮಾರ್: ಮುಖೇಶ್ ಕುಮಾರ್ ಕೂಡ ಟೀಮ್ ಇಂಡಿಯಾ ಪರ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡಲು ಕಾಯುತ್ತಿದ್ದಾರೆ. ಅವರು ಈ ಮೊದಲು ODI ಮತ್ತು T20I ತಂಡದ ಭಾಗವಾಗಿದ್ದರು. ಆದರೆ ಪ್ಲೇಯಿಂಗ್ XI ನಲ್ಲಿ ಕಾಣಿಸಿಕೊಳ್ಳುವ ಅವಕಾಶವನ್ನು ಪಡೆದುಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಪರ ಮಾರಕ ದಾಳಿ ಸಂಘಟಿಸಲು ಸಜ್ಜಾಗುತ್ತಿದ್ದಾರೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ