AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India New Jersey: ಟೀಮ್ ಇಂಡಿಯಾದ ಹೊಸ ಜೆರ್ಸಿ ಅನಾವರಣ

Team India New Jersey 2023: ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ.

TV9 Web
| Edited By: |

Updated on:Jun 01, 2023 | 10:48 PM

Share
ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಅಡಿಡಾಸ್ ಕಂಪೆನಿ ಅನಾವರಣಗೊಳಿಸಿದೆ. ಭಾರತದ ತಂಡದ ಹೊಸ ಕಿಟ್ ಪ್ರಾಯೋಜಕರಾಗಿರುವ ಅಡಿಡಾಸ್ ಕಂಪೆನಿಯು ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಿರುವುದು ವಿಶೇಷ.

ಟೀಮ್ ಇಂಡಿಯಾದ ಹೊಸ ಜೆರ್ಸಿಯನ್ನು ಅಡಿಡಾಸ್ ಕಂಪೆನಿ ಅನಾವರಣಗೊಳಿಸಿದೆ. ಭಾರತದ ತಂಡದ ಹೊಸ ಕಿಟ್ ಪ್ರಾಯೋಜಕರಾಗಿರುವ ಅಡಿಡಾಸ್ ಕಂಪೆನಿಯು ಟೆಸ್ಟ್, ಏಕದಿನ ಹಾಗೂ ಟಿ20 ಕ್ರಿಕೆಟ್​ಗೆ ವಿಭಿನ್ನ ಜೆರ್ಸಿಯನ್ನು ವಿನ್ಯಾಸಗೊಳಿಸಿರುವುದು ವಿಶೇಷ.

1 / 7
ಅದರಂತೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿಗಳನ್ನು ನೀಡಲಾಗಿದೆ.

ಅದರಂತೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ತಂಡದ ಜೆರ್ಸಿ ಮೇಲೆ ಇನ್ಮುಂದೆ ನೀಲಿ ಬಣ್ಣದಲ್ಲಿ ಇಂಡಿಯಾ ಎಂಬ ಬರಹ ಕಾಣಿಸಿಕೊಳ್ಳಲಿದೆ. ಅಲ್ಲದೆ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಪಟ್ಟಿಗಳನ್ನು ನೀಡಲಾಗಿದೆ.

2 / 7
ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ವಿತ್​ ಔಟ್ ಕಾಲರ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಜೆರ್ಸಿಯನ್ನು ಕಡು ನೀಲಿ ಬಣ್ಣದಲ್ಲಿ ವಿನ್ಯಾಸಗೊಳಿಸಿರುವುದು ವಿಶೇಷ.

3 / 7
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಭಾರತ ತಂಡವು ತಿಳಿ ನೀಲಿ ಜೆರ್ಸಿಯನ್ನು ಧರಿಸಲಿದೆ. ಈ ಜೆರ್ಸಿಯ ಭುಜ ಭಾಗದಲ್ಲಿ ಅಡಿಡಾಸ್ ಕಂಪೆನಿಯ ಲೋಗೋವನ್ನು ಪ್ರತಿನಿಧಿಸುವ ಬಿಳಿ ಪಟ್ಟಿಗಳನ್ನು ನೀಡಲಾಗಿದೆ.

4 / 7
ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಈ 3 ಬಣ್ಣದ ಜೆರ್ಸಿಗಳಲ್ಲಿ ಕಣಕ್ಕಿಳಿಯಲಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ತಂಡದ ಜೆರ್ಸಿ ವಿನ್ಯಾಸ ಮತ್ತೊಮ್ಮೆ ಬದಲಾಗಲಿದೆ.

ಅದರಂತೆ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಈ 3 ಬಣ್ಣದ ಜೆರ್ಸಿಗಳಲ್ಲಿ ಕಣಕ್ಕಿಳಿಯಲಿದೆ. ಇದಾಗ್ಯೂ ಏಕದಿನ ವಿಶ್ವಕಪ್​ಗೆ ಭಾರತ ತಂಡದ ಜೆರ್ಸಿ ವಿನ್ಯಾಸ ಮತ್ತೊಮ್ಮೆ ಬದಲಾಗಲಿದೆ.

5 / 7
ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

ಸದ್ಯ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಓವಲ್ ಮೈದಾನದಲ್ಲಿ ಬುಧವಾರದಿಂದ ಶುರುವಾಗಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಹೀಗಾಗಿ 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶ ಟೀಮ್ ಇಂಡಿಯಾ ಮುಂದಿದೆ.

6 / 7
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

7 / 7

Published On - 7:20 pm, Thu, 1 June 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ