- Kannada News Photo gallery Cricket photos India's Asia cup and World cup squad is set to be announced on August 21 says reports
ಆ. 21 ರಂದು ವಿಶ್ವಕಪ್ಗೆ ಭಾರತ ತಂಡ ಪ್ರಕಟ! ಏಷ್ಯಾಕಪ್ಗೆ 17 ಸದಸ್ಯರ ತಂಡ ಆಯ್ಕೆ: ವರದಿ
Team India: ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಸೋಮವಾರ (ಆಗಸ್ಟ್ 21) ನವದೆಹಲಿಯಲ್ಲಿ 2023 ರ ಏಷ್ಯಾಕಪ್ಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡವನ್ನು ಪ್ರಕಟಿಸಲು ಸಜ್ಜಾಗಿದೆ.
Updated on:Aug 20, 2023 | 8:54 AM

ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಸೋಮವಾರ (ಆಗಸ್ಟ್ 21) ನವದೆಹಲಿಯಲ್ಲಿ 2023 ರ ಏಷ್ಯಾಕಪ್ಗಾಗಿ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ತಂಡವನ್ನು ಪ್ರಕಟಿಸಲು ಸಜ್ಜಾಗಿದೆ.

ಸುದ್ದಿ ಸಂಸ್ಥೆ ಪ್ರೆಸ್ ಪಿಟಿಐ ವರದಿಯ ಪ್ರಕಾರ, ಸಭೆಯಲ್ಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಇಬ್ಬರೂ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. ಈ ಭಾರಿಯ ಏಷ್ಯಾಕಪ್ ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಭಾರತ ತನ್ನ ಆರಂಭಿಕ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಪಾಕಿಸ್ತಾನದ ವಿರುದ್ಧ ಕ್ಯಾಂಡಿಯಲ್ಲಿ ಆಡಲಿದೆ.

ಏಷ್ಯಾಕಪ್ಗೆ 17 ಸದಸ್ಯರ ತಂಡವನ್ನು ಆಯ್ಕೆ ಮಾಡಲು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅನುಮತಿ ನೀಡಿದೆ. ಇದರ ಪ್ರಕಾರ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಕೂಡ 17 ಸದಸ್ಯರ ತಂಡವನ್ನು ಆಯ್ಕೆ ಮಾಡಿವೆ. ಹೀಗಾಗಿ ಭಾರತವು ಅದೇ ರೀತಿ ಮಾಡುವ ಸಾಧ್ಯತೆಯಿದೆ.

ಏಕೆಂದರೆ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಈಗತಾನೇ ಚೇತರಿಸಿಕೊಂಡು ತಂಡಕ್ಕೆ ಮರಳಲು ಯತ್ನಿಸುತ್ತಿರುವ ಕಾರಣ ಟೀಂ ಇಂಡಿಯಾಕ್ಕೆ ಈ ಇಬ್ಬರ ಪ್ರದರ್ಶನದ ಬಗ್ಗೆ ಇನ್ನು ಸ್ಪಷ್ಟತೆ ಸಿಕ್ಕಿಲ್ಲ. ಹೀಗಾಗಿ ಏಷ್ಯಾಕಪ್ನಲ್ಲಿ 17 ಸದಸ್ಯರನ್ನು ಆಯ್ಕೆ ಮಾಡಿ, ಎಲ್ಲರನ್ನೂ ಪರೀಕ್ಷಿಸಲು ಬಿಸಿಸಿಐ ಮುಂದಾಗಿದೆ. ಆ ಬಳಿಕ ವಿಶ್ವಕಪ್ಗೆ ತಂಡವನ್ನು ಪ್ರಕಟಿಸುವ ಸಾಧ್ಯತೆಗಳಿವೆ.

ಇದಲ್ಲದೆ ಅಗರ್ಕರ್ ನೇತೃತ್ವದ ಆಯ್ಕೆ ಮಂಡಳಿಯೂ 2023 ರ ವಿಶ್ವಕಪ್ಗಾಗಿ 15 ಸದಸ್ಯರ ತಾತ್ಕಾಲಿಕ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ಹೇಳಿದೆ. ವಾಸ್ತವವಾಗಿ ವಿಶ್ವಕಪ್ಗಾಗಿ ತಂಡವನ್ನು ಪ್ರಕಟಿಸಲು ಸೆಪ್ಟೆಂಬರ್ 5ರವರೆಗೆ ಗಡುವು ನೀಡಿದ್ದು, ತಂಡದಲ್ಲಿ ಬದಲಾವಣೆ ಮಾಡಲು ಸೆಪ್ಟೆಂಬರ್ 27 ರವರೆಗೆ ಅವಕಾಶ ನೀಡಲಾಗಿದೆ.

ಇನ್ನು ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್ ಬಗ್ಗೆಯೂ ಪಾಸಿಟಿವ್ ವರದಿಗಳು ಕೇಳಿಬರುತ್ತಿವೆ. EspnCricinfo ವರದಿ ಪ್ರಕಾರ, ಅಯ್ಯರ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಯ ಅಭ್ಯಾಸ ಪಂದ್ಯದಲ್ಲಿ 38 ಓವರ್ಗಳಿಗೆ ಬ್ಯಾಟಿಂಗ್ ಮಾಡಿದ್ದು, ಸಂಪೂರ್ಣ 50 ಓವರ್ಗಳಿಗೆ ಫೀಲ್ಡಿಂಗ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಇವರಲ್ಲದೆ ವೆಸ್ಟ್ ಇಂಡೀಸ್ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ತಿಲಕ್ ವರ್ಮಾ ಏಷ್ಯಾಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಪಿಟಿಐ ವರದಿ ಹೇಳಿದೆ. ಆದರೆ, ರಾಹುಲ್ ಮತ್ತು ಅಯ್ಯರ್ ಇಬ್ಬರೂ ಫಿಟ್ ಆಗಿದ್ದರೆ ತಿಲಕ್ ಅಂತಿಮ 15ರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ.

ಇನ್ನು 50 ಓವರ್ಗಳ ಮಾದರಿಯಲ್ಲಿ ಕಳಪೆ ದಾಖಲೆ ಹೊಂದಿರುವ ಸೂರ್ಯಕುಮಾರ್ ಯಾದವ್ ಅವರನ್ನು ಏಷ್ಯಾಕಪ್ ಹಾಗೂ ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಹಾಗೆಯೇ ರಾಹುಲ್ ಮತ್ತು ಅಯ್ಯರ್ ಇಬ್ಬರೂ ತಂಡಕ್ಕೆ ಮರಳಿದರೆ ಸಂಜು ಸ್ಯಾಮ್ಸನ್ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ ಎಂದು ವರದಿಯಾಗಿದೆ.
Published On - 8:54 am, Sun, 20 August 23




