AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕರುಣ್ ಮೇಲೆ ಕರುಣೆ… ಕನ್ನಡಿಗನಿಗೆ ಕೊನೆಯ ಚಾನ್ಸ್..!

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಗುರುವಾರದಿಂದ (ಜುಲೈ 31) ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳಲಿದೆ.

ಝಾಹಿರ್ ಯೂಸುಫ್
|

Updated on:Jul 31, 2025 | 8:56 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಇಂದಿನಿಂದ (ಜುಲೈ 31) ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಳ್ಳಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಹೆಚ್ಚುವರಿ ಬ್ಯಾಟರ್​ರೊಬ್ಬರನ್ನು ಕಣಕ್ಕಿಳಿಸಲಿದ್ದಾರೆ ಎಂದು ವರದಿಯಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಇಂದಿನಿಂದ (ಜುಲೈ 31) ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಳ್ಳಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಹೆಚ್ಚುವರಿ ಬ್ಯಾಟರ್​ರೊಬ್ಬರನ್ನು ಕಣಕ್ಕಿಳಿಸಲಿದ್ದಾರೆ ಎಂದು ವರದಿಯಾಗಿದೆ.

1 / 5
ಪ್ರಸ್ತುತ ಮಾಹಿತಿ ಪ್ರಕಾರ, ಕರುಣ್ ನಾಯರ್​ಗೆ ಇಂದು ಕೊನೆಯ ಅವಕಾಶ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಾರ್ದೂಲ್ ಠಾಕೂರ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಿದ್ದು, ಅವರ ಬದಲಿಗೆ ಕರುಣ್​ ಅವರನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತಿಸಿದೆ.

ಪ್ರಸ್ತುತ ಮಾಹಿತಿ ಪ್ರಕಾರ, ಕರುಣ್ ನಾಯರ್​ಗೆ ಇಂದು ಕೊನೆಯ ಅವಕಾಶ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಶಾರ್ದೂಲ್ ಠಾಕೂರ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಿದ್ದು, ಅವರ ಬದಲಿಗೆ ಕರುಣ್​ ಅವರನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತಿಸಿದೆ.

2 / 5
ಕರುಣ್ ನಾಯರ್ ಮೊದಲ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 6 ಇನಿಂಗ್ಸ್​ಗಳಲ್ಲಿ 249 ಎಸೆತಗಳನ್ನು ಎದುರಿಸಿದ್ದ ಅವರು ಒಟ್ಟು 131 ರನ್​ ಮಾತ್ರ ಕಲೆಹಾಕಿದ್ದರು. ಅಂದರೆ ಕೇವಲ 21.83 ಸರಾಸರಿಯಲ್ಲಿ ರನ್​ಗಳಿಸಿದ್ದರಿಂದ ಕರುಣ್ ನಾಯರ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಕೈ ಬಿಡಲಾಗಿತ್ತು. ಇದೀಗ ಕೆನ್ನಿಂಗ್ಟನ್ ಓವಲ್​ನಲ್ಲಿ ಕನ್ನಡಿಗನಿಗೆ ಮತ್ತೊಮ್ಮೆ ಚಾನ್ಸ್ ನೀಡಲಿದ್ದಾರೆ ಎಂದು ಎಕ್ಸ್​ಪ್ರೆಸ್ ಸ್ಪೋರ್ಟ್ಸ್ ವರದಿ ಮಾಡಿದೆ.

ಕರುಣ್ ನಾಯರ್ ಮೊದಲ ಮೂರು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಈ ವೇಳೆ 6 ಇನಿಂಗ್ಸ್​ಗಳಲ್ಲಿ 249 ಎಸೆತಗಳನ್ನು ಎದುರಿಸಿದ್ದ ಅವರು ಒಟ್ಟು 131 ರನ್​ ಮಾತ್ರ ಕಲೆಹಾಕಿದ್ದರು. ಅಂದರೆ ಕೇವಲ 21.83 ಸರಾಸರಿಯಲ್ಲಿ ರನ್​ಗಳಿಸಿದ್ದರಿಂದ ಕರುಣ್ ನಾಯರ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಿಂದ ಕೈ ಬಿಡಲಾಗಿತ್ತು. ಇದೀಗ ಕೆನ್ನಿಂಗ್ಟನ್ ಓವಲ್​ನಲ್ಲಿ ಕನ್ನಡಿಗನಿಗೆ ಮತ್ತೊಮ್ಮೆ ಚಾನ್ಸ್ ನೀಡಲಿದ್ದಾರೆ ಎಂದು ಎಕ್ಸ್​ಪ್ರೆಸ್ ಸ್ಪೋರ್ಟ್ಸ್ ವರದಿ ಮಾಡಿದೆ.

3 / 5
ಇತ್ತ ಕರುಣ್ ನಾಯರ್ ಅವರು ಮತ್ತೊಮ್ಮೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ, ಕುಲ್ದೀಪ್ ಯಾದವ್​ಗೆ ಅವಕಾಶ ಸಿಗುವುದು ಡೌಟ್. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಕುಲ್ದೀಪ್ ಐದನೇ ಟೆಸ್ಟ್​ನಲ್ಲಿ ಶಾರ್ದೂಲ್ ಠಾಕೂರ್ ಬದಲಿಗೆ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಕುಲ್ದೀಪ್ ಯಾದವ್ ಬದಲಿಗೆ ಹೆಚ್ಚುವರಿ ಬ್ಯಾಟರ್​ನನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಕರುಣ್ ನಾಯರ್ ಅವರು ಮತ್ತೊಮ್ಮೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ, ಕುಲ್ದೀಪ್ ಯಾದವ್​ಗೆ ಅವಕಾಶ ಸಿಗುವುದು ಡೌಟ್. ಏಕೆಂದರೆ ಕಳೆದ ನಾಲ್ಕು ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಕುಲ್ದೀಪ್ ಐದನೇ ಟೆಸ್ಟ್​ನಲ್ಲಿ ಶಾರ್ದೂಲ್ ಠಾಕೂರ್ ಬದಲಿಗೆ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಕುಲ್ದೀಪ್ ಯಾದವ್ ಬದಲಿಗೆ ಹೆಚ್ಚುವರಿ ಬ್ಯಾಟರ್​ನನ್ನು ಕಣಕ್ಕಿಳಿಸುವ ಸಾಧ್ಯತೆ ಹೆಚ್ಚಿದೆ.

4 / 5
ಇನ್ನು ಜಸ್​ಪ್ರೀತ್ ಬುಮ್ರಾ ಬದಲಿಗೆ ಆಕಾಶ್ ದೀಪ್ ಕಣಕ್ಕಿಳಿಯುವುದು ಖಚಿತ. ಹಾಗೆಯೇ ರಿಷಭ್ ಪಂತ್ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೇಲ್ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಅನ್ಶುಲ್ ಕಂಬೋಜ್ ಬದಲಿಗೆ ಯಾರು ಆಡಲಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಇಲ್ಲಿ ಅರ್ಷದೀಪ್ ಸಿಂಗ್ ಹಾಗೂ ಪ್ರಸಿದ್ಧ್ ಕೃಷ್ಣ ನಡುವೆ ಪೈಪೋಟಿಯಿದ್ದು, ಇವರಲ್ಲಿ ಒಬ್ಬರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇನ್ನು ಜಸ್​ಪ್ರೀತ್ ಬುಮ್ರಾ ಬದಲಿಗೆ ಆಕಾಶ್ ದೀಪ್ ಕಣಕ್ಕಿಳಿಯುವುದು ಖಚಿತ. ಹಾಗೆಯೇ ರಿಷಭ್ ಪಂತ್ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೇಲ್ ಕಾಣಿಸಿಕೊಳ್ಳಲಿದ್ದಾರೆ. ಇದಾಗ್ಯೂ ಅನ್ಶುಲ್ ಕಂಬೋಜ್ ಬದಲಿಗೆ ಯಾರು ಆಡಲಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಹೊರಬಿದ್ದಿಲ್ಲ. ಇಲ್ಲಿ ಅರ್ಷದೀಪ್ ಸಿಂಗ್ ಹಾಗೂ ಪ್ರಸಿದ್ಧ್ ಕೃಷ್ಣ ನಡುವೆ ಪೈಪೋಟಿಯಿದ್ದು, ಇವರಲ್ಲಿ ಒಬ್ಬರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

5 / 5

Published On - 8:55 am, Thu, 31 July 25

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?