AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಚೆಪಾಕ್ ಮತ್ತು ಆಸ್ಟ್ರೇಲಿಯಾ: ಟೀಮ್ ಇಂಡಿಯಾಗೆ ಚಿಂತೆ ಶುರು..!

ODI World Cup 2023: ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು.

TV9 Web
| Edited By: |

Updated on: Jun 28, 2023 | 10:58 PM

Share
ODI World Cup 2023: ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಶುರುವಾಗಲಿದೆ. ಆದರೆ ಭಾರತ ತಂಡವು ತನ್ನ ಅಭಿಯಾನ ಆರಂಭಿಸಲಿರುವುದು ಅಕ್ಟೋಬರ್ 8 ರಂದು. ಇಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 5 ರಿಂದ ಶುರುವಾಗಲಿದೆ. ಆದರೆ ಭಾರತ ತಂಡವು ತನ್ನ ಅಭಿಯಾನ ಆರಂಭಿಸಲಿರುವುದು ಅಕ್ಟೋಬರ್ 8 ರಂದು. ಇಲ್ಲಿ ಟೀಮ್ ಇಂಡಿಯಾದ ಮೊದಲ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ.

1 / 7
ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ನಾಕೌಟ್ ಹಂತದಲ್ಲಿ ಎದುರು ಬದುರಾಗುವ ಉಭಯ ತಂಡಗಳು ಈ ಬಾರಿ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯುತ್ತಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು.

ಸಾಮಾನ್ಯವಾಗಿ ಐಸಿಸಿ ಟೂರ್ನಿಗಳಲ್ಲಿ ನಾಕೌಟ್ ಹಂತದಲ್ಲಿ ಎದುರು ಬದುರಾಗುವ ಉಭಯ ತಂಡಗಳು ಈ ಬಾರಿ ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿದೆ. ವಿಶೇಷ ಎಂದರೆ ಈ ಪಂದ್ಯ ನಡೆಯುತ್ತಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು.

2 / 7
ಅಂದರೆ ಚೆಪಾಕ್ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯಾ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದೇ ವೇಳೆ ಆಸ್ಟ್ರೇಲಿಯಾ ತಂಡ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು 2 ಬಾರಿ ಸೋಲಿಸಿದೆ. ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.

ಅಂದರೆ ಚೆಪಾಕ್ ಮೈದಾನದಲ್ಲಿ ಭಾರತ-ಆಸ್ಟ್ರೇಲಿಯಾ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಇದೇ ವೇಳೆ ಆಸ್ಟ್ರೇಲಿಯಾ ತಂಡ ಇದೇ ಮೈದಾನದಲ್ಲಿ ಟೀಮ್ ಇಂಡಿಯಾವನ್ನು 2 ಬಾರಿ ಸೋಲಿಸಿದೆ. ಅಂದರೆ ಚೆಪಾಕ್ ಸ್ಟೇಡಿಯಂನಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎನ್ನಬಹುದು.

3 / 7
ಇನ್ನು ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 146 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 82 ಬಾರಿ ಸೋಲುಣಿಸಿದೆ. ಅದೇ ಭಾರತ ತಂಡ ಗೆದ್ದಿರುವುದು ಕೇವಲ 54 ಬಾರಿ ಮಾತ್ರ. ಇನ್ನು 10 ಪಂದ್ಯಗಳು ನಿರ್ದಿಷ್ಟ ಕಾರಣಗಳಿಂದಾಗಿ ರದ್ದಾಗಿತ್ತು.

ಇನ್ನು ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಒಟ್ಟು 146 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾಗೆ 82 ಬಾರಿ ಸೋಲುಣಿಸಿದೆ. ಅದೇ ಭಾರತ ತಂಡ ಗೆದ್ದಿರುವುದು ಕೇವಲ 54 ಬಾರಿ ಮಾತ್ರ. ಇನ್ನು 10 ಪಂದ್ಯಗಳು ನಿರ್ದಿಷ್ಟ ಕಾರಣಗಳಿಂದಾಗಿ ರದ್ದಾಗಿತ್ತು.

4 / 7
ಅಂದರೆ ಚೆಪಾಕ್​ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಮೇಲೆ ಆಸ್ಟ್ರೇಲಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.

ಅಂದರೆ ಚೆಪಾಕ್​ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಮೇಲೆ ಆಸ್ಟ್ರೇಲಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ.

5 / 7
ಹಾಗೆಯೇ ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಇದರಲ್ಲಿ ಒಂದು ಪಂದ್ಯ ಗೆದ್ದಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

ಹಾಗೆಯೇ ಈ ವರ್ಷ ಭಾರತದಲ್ಲೇ ನಡೆದ 3 ಪಂದ್ಯಗಳ ಏಕದಿನ ಸರಣಿಯನ್ನು ಆಸ್ಟ್ರೇಲಿಯಾ ತಂಡ 2-1 ಅಂತರದಿಂದ ಗೆದ್ದುಕೊಂಡಿತ್ತು. ಇದರಲ್ಲಿ ಒಂದು ಪಂದ್ಯ ಗೆದ್ದಿರುವುದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಎಂಬುದು ಇಲ್ಲಿ ಉಲ್ಲೇಖಾರ್ಹ.

6 / 7
ಈ ಎಲ್ಲಾ ಕಾರಣಗಳಿಂದಾಗಿ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾ ತಂಡದಿಂದ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

ಈ ಎಲ್ಲಾ ಕಾರಣಗಳಿಂದಾಗಿ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾ ತಂಡದಿಂದ ಕಠಿಣ ಸವಾಲು ಎದುರಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

7 / 7
Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?