AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಇದು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು, ಯಾಕೆಂದರೆ…

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಆಂಗ್ಲರು ಭರ್ಜರಿ ಜಯ ಸಾಧಿಸಿದ್ದಾರೆ. ಇನ್ನು ಐದು ಪಂದ್ಯಗಳ ಈ ಸರಣಿಯ 2ನೇ ಮ್ಯಾಚ್​ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಲ್ಲಿದೆ ಟೀಮ್ ಇಂಡಿಯಾ.

TV9 Web
| Edited By: |

Updated on: Jan 29, 2024 | 8:04 AM

Share
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ 246 ರನ್​ಗಳಿಗೆ ಆಲೌಟ್ ಮಾಡಿತು. ಇದಾದ ಬಳಿಕ ಬ್ಯಾಟ್ ಬೀಸಿದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 436 ರನ್ ಕಲೆಹಾಕಿತು.

ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ 246 ರನ್​ಗಳಿಗೆ ಆಲೌಟ್ ಮಾಡಿತು. ಇದಾದ ಬಳಿಕ ಬ್ಯಾಟ್ ಬೀಸಿದ ಭಾರತ ತಂಡ ಮೊದಲ ಇನಿಂಗ್ಸ್​ನಲ್ಲಿ 436 ರನ್ ಕಲೆಹಾಕಿತು.

1 / 6
ಇನ್ನು 190 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 420 ರನ್ ಕಲೆಹಾಕಿ ಟೀಮ್ ಇಂಡಿಯಾ 231 ರನ್​ಗಳ ಸುಲಭ ಗುರಿ ನೀಡಿದ್ದರು. ಆದರೆ ಈ ಗುರಿಯನ್ನು ಬೆನ್ನತ್ತವಲ್ಲಿ ವಿಫಲರಾಗಿರುವ ಭಾರತೀಯರು 28 ರನ್​ಗಳಿಂದ ಸೋಲೊಪ್ಪಿಕೊಂಡಿದ್ದಾರೆ. ಆದರೆ ಇದು ಟೀಮ್ ಇಂಡಿಯಾ ಪಾಲಿಗೆ ಅಂತಿಂಥ ಸೋಲಲ್ಲ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

ಇನ್ನು 190 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ 420 ರನ್ ಕಲೆಹಾಕಿ ಟೀಮ್ ಇಂಡಿಯಾ 231 ರನ್​ಗಳ ಸುಲಭ ಗುರಿ ನೀಡಿದ್ದರು. ಆದರೆ ಈ ಗುರಿಯನ್ನು ಬೆನ್ನತ್ತವಲ್ಲಿ ವಿಫಲರಾಗಿರುವ ಭಾರತೀಯರು 28 ರನ್​ಗಳಿಂದ ಸೋಲೊಪ್ಪಿಕೊಂಡಿದ್ದಾರೆ. ಆದರೆ ಇದು ಟೀಮ್ ಇಂಡಿಯಾ ಪಾಲಿಗೆ ಅಂತಿಂಥ ಸೋಲಲ್ಲ ಎಂಬುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ.

2 / 6
ಅಂದರೆ ಭಾರತ ತಂಡವು ತವರಿನಲ್ಲಿ ಇದುವರೆಗೆ 284 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 105 ಪಂದ್ಯಗಳಲ್ಲಿ ಮೊದಲ ಇನಿಂಗ್ಸ್​ನಲ್ಲಿ 100+ ರನ್​ಗಳ ಮುನ್ನಡೆ ಸಾಧಿಸಿತ್ತು. ಈ ಪಂದ್ಯಗಳಲ್ಲಿ 70 ರಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, 35 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತು. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಯಾವುದೇ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲಿನ ರುಚಿ ನೋಡಿರಲಿಲ್ಲ.

ಅಂದರೆ ಭಾರತ ತಂಡವು ತವರಿನಲ್ಲಿ ಇದುವರೆಗೆ 284 ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ 105 ಪಂದ್ಯಗಳಲ್ಲಿ ಮೊದಲ ಇನಿಂಗ್ಸ್​ನಲ್ಲಿ 100+ ರನ್​ಗಳ ಮುನ್ನಡೆ ಸಾಧಿಸಿತ್ತು. ಈ ಪಂದ್ಯಗಳಲ್ಲಿ 70 ರಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, 35 ಪಂದ್ಯಗಳನ್ನು ಡ್ರಾ ಮಾಡಿಕೊಂಡಿತು. ಅಂದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಯಾವುದೇ ಪಂದ್ಯದಲ್ಲೂ ಟೀಮ್ ಇಂಡಿಯಾ ಸೋಲಿನ ರುಚಿ ನೋಡಿರಲಿಲ್ಲ.

3 / 6
ಆದರೆ ಈ ಬಾರಿ ಭಾರತ ತಂಡವನ್ನು ಮಕಾಡೆ ಮಲಗಿಸುವಲ್ಲಿ ಬೆನ್ ಸ್ಟೋಕ್ಸ್​ ಪಡೆ ಯಶಸ್ವಿಯಾಗಿದೆ. ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾವನ್ನು 28 ರನ್​ಗಳಿಂದ ಸೋಲಿಸಿ ಇಂಗ್ಲೆಂಡ್ ತಂಡ ಹೊಸ ಇತಿಹಾಸ ಬರೆದಿದೆ.

ಆದರೆ ಈ ಬಾರಿ ಭಾರತ ತಂಡವನ್ನು ಮಕಾಡೆ ಮಲಗಿಸುವಲ್ಲಿ ಬೆನ್ ಸ್ಟೋಕ್ಸ್​ ಪಡೆ ಯಶಸ್ವಿಯಾಗಿದೆ. ಮೊದಲ ಇನಿಂಗ್ಸ್​ನಲ್ಲಿ 190 ರನ್​ಗಳ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾವನ್ನು 28 ರನ್​ಗಳಿಂದ ಸೋಲಿಸಿ ಇಂಗ್ಲೆಂಡ್ ತಂಡ ಹೊಸ ಇತಿಹಾಸ ಬರೆದಿದೆ.

4 / 6
ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಹೈದರಾಬಾದ್​ ರಾಜೀವ್ ಗಾಂಧಿ ಮೈದಾನದಲ್ಲಿ ಟೀಮ್ ಇಂಡಿಯಾ ಸೋತಿದೆ. ಹಾಗೆಯೇ 12 ವರ್ಷಗಳ ಬಳಿಕ ಭಾರತ ತಂಡವು ತವರಿನಲ್ಲಿ ಸತತ ಮೂರು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವಲ್ಲಿ ವಿಫಲವಾಗಿದೆ.

ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಹೈದರಾಬಾದ್​ ರಾಜೀವ್ ಗಾಂಧಿ ಮೈದಾನದಲ್ಲಿ ಟೀಮ್ ಇಂಡಿಯಾ ಸೋತಿದೆ. ಹಾಗೆಯೇ 12 ವರ್ಷಗಳ ಬಳಿಕ ಭಾರತ ತಂಡವು ತವರಿನಲ್ಲಿ ಸತತ ಮೂರು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವಲ್ಲಿ ವಿಫಲವಾಗಿದೆ.

5 / 6
ಈ ಎಲ್ಲಾ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಈ ಪರಾಜಯವನ್ನು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು ಒಂದು ಪರಿಗಣಿಸಲಾಗಿದೆ.

ಈ ಎಲ್ಲಾ ಕಾರಣಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಈ ಪರಾಜಯವನ್ನು ಟೀಮ್ ಇಂಡಿಯಾ ಪಾಲಿನ ಅತ್ಯಂತ ಹೀನಾಯ ಸೋಲು ಒಂದು ಪರಿಗಣಿಸಲಾಗಿದೆ.

6 / 6
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?