ಏಕದಿನ ವಿಶ್ವಕಪ್​ಗೂ ಮುನ್ನ 11 ಆಟಗಾರರು ಗಾಯಾಳು

ODI World Cup 2023: ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಈ ಆಟಗಾರರು ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಹೀಗೆ ಗಾಯಗೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

| Updated By: ಝಾಹಿರ್ ಯೂಸುಫ್

Updated on: Sep 16, 2023 | 7:27 PM

ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಈ ಕ್ರಿಕೆಟ್ ಮಹಾಸಮರಕ್ಕೂ ಮುನ್ನ ಇದೀಗ ಕೆಲ ತಂಡಗಳಿಗೆ ಗಾಯದ ಸಮಸ್ಯೆ ಎದುರಾಗಿದೆ. ತಂಡದ ಪ್ರಮುಖ ಆಟಗಾರರು ಗಾಯಾಳುವಾಗಿದ್ದಾರೆ.

ಏಕದಿನ ವಿಶ್ವಕಪ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಈ ಕ್ರಿಕೆಟ್ ಮಹಾಸಮರಕ್ಕೂ ಮುನ್ನ ಇದೀಗ ಕೆಲ ತಂಡಗಳಿಗೆ ಗಾಯದ ಸಮಸ್ಯೆ ಎದುರಾಗಿದೆ. ತಂಡದ ಪ್ರಮುಖ ಆಟಗಾರರು ಗಾಯಾಳುವಾಗಿದ್ದಾರೆ.

1 / 13
ಸದ್ಯ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಈ ಆಟಗಾರರು ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಹೀಗೆ ಗಾಯಗೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಸದ್ಯ ಫಿಟ್​ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಈ ಆಟಗಾರರು ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಬಹುದು. ಹೀಗೆ ಗಾಯಗೊಂಡಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

2 / 13
1- ಟ್ರಾವಿಸ್ ಹೆಡ್: ಸೌತ್ ಆಫ್ರಿಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದ ವೇಳೆ ಅಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಗಾಯಗೊಂಡಿದ್ದಾರೆ. ಟ್ರಾವಿಸ್ ಅವರ ಎಡಗೈ ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

1- ಟ್ರಾವಿಸ್ ಹೆಡ್: ಸೌತ್ ಆಫ್ರಿಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದ ವೇಳೆ ಅಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಗಾಯಗೊಂಡಿದ್ದಾರೆ. ಟ್ರಾವಿಸ್ ಅವರ ಎಡಗೈ ಮುರಿತಕ್ಕೆ ಒಳಗಾಗಿದ್ದು, ಹೀಗಾಗಿ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

3 / 13
2- ಸ್ಟೀವ್ ಸ್ಮಿತ್: ಎಡಗೈ ಮಣಿಕಟ್ಟಿನ ಗಾಯದ ಕಾರಣ ಸ್ಟೀವ್ ಸ್ಮಿತ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿಲ್ಲ. ಇನ್ನು ಭಾರತದ ವಿರುದ್ಧ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ.

2- ಸ್ಟೀವ್ ಸ್ಮಿತ್: ಎಡಗೈ ಮಣಿಕಟ್ಟಿನ ಗಾಯದ ಕಾರಣ ಸ್ಟೀವ್ ಸ್ಮಿತ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದಿಲ್ಲ. ಇನ್ನು ಭಾರತದ ವಿರುದ್ಧ ಸರಣಿಯಲ್ಲಿ ಕಾಣಿಸಿಕೊಂಡರೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದ್ದಾರೆ.

4 / 13
3- ಮಿಚೆಲ್ ಸ್ಟಾರ್ಕ್: ಆ್ಯಶಸ್ ಸರಣಿಯ ಬಳಿಕ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್​ ಯಾವುದೇ ಪಂದ್ಯವಾಡಿಲ್ಲ. ಭುಜದ ಗಾಯ ಮತ್ತು ತೊಡೆಸಂದು ನೋವಿನ ಸಮಸ್ಯೆಯ ಕಾರಣ ಸ್ಟಾರ್ಕ್​ ಕೂಡ ಮೈದಾನದಿಂದ ಹೊರಗುಳಿದಿದ್ದಾರೆ.

3- ಮಿಚೆಲ್ ಸ್ಟಾರ್ಕ್: ಆ್ಯಶಸ್ ಸರಣಿಯ ಬಳಿಕ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್​ ಯಾವುದೇ ಪಂದ್ಯವಾಡಿಲ್ಲ. ಭುಜದ ಗಾಯ ಮತ್ತು ತೊಡೆಸಂದು ನೋವಿನ ಸಮಸ್ಯೆಯ ಕಾರಣ ಸ್ಟಾರ್ಕ್​ ಕೂಡ ಮೈದಾನದಿಂದ ಹೊರಗುಳಿದಿದ್ದಾರೆ.

5 / 13
4- ಟಿಮ್ ಸೌಥಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಟಿಮ್ ಸೌಥಿ ಅವರ ಬಲಗೈ ಹೆಬ್ಬೆರಳಿನಲ್ಲಿ ಮೂಳೆ ಮುರಿತವಾಗಿದೆ. ಹೀಗಾಗಿ ಸೌಥಿ ಕೂಡ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

4- ಟಿಮ್ ಸೌಥಿ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಮತ್ತು ಅಂತಿಮ ಏಕದಿನ ಅಂತಾರಾಷ್ಟ್ರೀಯ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಟಿಮ್ ಸೌಥಿ ಅವರ ಬಲಗೈ ಹೆಬ್ಬೆರಳಿನಲ್ಲಿ ಮೂಳೆ ಮುರಿತವಾಗಿದೆ. ಹೀಗಾಗಿ ಸೌಥಿ ಕೂಡ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

6 / 13
5- ಮಹೀಶ್ ತೀಕ್ಷಣ: ಶ್ರೀಲಂಕಾದ ಸ್ಪಿನ್ನರ್ ಮಹೀಶ್ ತೀಕ್ಷಣ ಮಂಡಿರಜ್ಜು ಸಮಸ್ಯೆಯ ಕಾರಣ ಏಷ್ಯಾಕಪ್ ಫೈನಲ್​ನಿಂದ ಹೊರಗುಳಿದಿದ್ದಾರೆ. ಇನ್ನೆರಡು ವಾರಗಳಲ್ಲಿ ಸಂಪೂರ್ಣ ಚೇತರಿಸಿಕೊಂಡರೆ ಮಾತ್ರ ತೀಕ್ಷಣ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5- ಮಹೀಶ್ ತೀಕ್ಷಣ: ಶ್ರೀಲಂಕಾದ ಸ್ಪಿನ್ನರ್ ಮಹೀಶ್ ತೀಕ್ಷಣ ಮಂಡಿರಜ್ಜು ಸಮಸ್ಯೆಯ ಕಾರಣ ಏಷ್ಯಾಕಪ್ ಫೈನಲ್​ನಿಂದ ಹೊರಗುಳಿದಿದ್ದಾರೆ. ಇನ್ನೆರಡು ವಾರಗಳಲ್ಲಿ ಸಂಪೂರ್ಣ ಚೇತರಿಸಿಕೊಂಡರೆ ಮಾತ್ರ ತೀಕ್ಷಣ ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

7 / 13
6- ದುಷ್ಮಂತ ಚಮೀರ: ಶ್ರೀಲಂಕಾ ವೇಗಿ ದುಷ್ಮಂತ ಚಮೀರಾ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಭುಜದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ನಿಂದ ಹೊರಗುಳಿದಿದ್ದರು. ಇನ್ನು ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಅವರು ಲಂಕಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

6- ದುಷ್ಮಂತ ಚಮೀರ: ಶ್ರೀಲಂಕಾ ವೇಗಿ ದುಷ್ಮಂತ ಚಮೀರಾ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಭುಜದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ನಿಂದ ಹೊರಗುಳಿದಿದ್ದರು. ಇನ್ನು ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಂಡರೆ ಮಾತ್ರ ಅವರು ಲಂಕಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

8 / 13
7- ವನಿಂದು ಹಸರಂಗ: ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿದಿರುವ ಶ್ರೀಲಂಕಾ ಆಲ್​ರೌಂಡರ್ ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಅಂದರೆ ಅಕ್ಟೋಬರ್ 5 ರೊಳಗೆ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರು ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

7- ವನಿಂದು ಹಸರಂಗ: ಗಾಯದ ಕಾರಣ ಏಷ್ಯಾಕಪ್​ನಿಂದ ಹೊರಗುಳಿದಿರುವ ಶ್ರೀಲಂಕಾ ಆಲ್​ರೌಂಡರ್ ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ. ಅಂದರೆ ಅಕ್ಟೋಬರ್ 5 ರೊಳಗೆ ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ಅವರು ಏಕದಿನ ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

9 / 13
8- ನಸೀಮ್ ಶಾ: ಏಷ್ಯಾಕಪ್ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿರುವ ಪಾಕಿಸ್ತಾನ್ ವೇಗಿ ನಸೀಮ್ ಶಾ ಏಕದಿನ ವಿಶ್ವಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

8- ನಸೀಮ್ ಶಾ: ಏಷ್ಯಾಕಪ್ ಪಂದ್ಯದ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿರುವ ಪಾಕಿಸ್ತಾನ್ ವೇಗಿ ನಸೀಮ್ ಶಾ ಏಕದಿನ ವಿಶ್ವಕಪ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

10 / 13
9- ಹ್ಯಾರಿಸ್ ರೌಫ್: ಪಾಕ್ ತಂಡದ ವೇಗಿ ಹ್ಯಾರಿಸ್ ರೌಫ್ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಾಗ್ಯೂ ಅವರು ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದೆ ಪಾಕಿಸ್ತಾನ್ ತಂಡ.

9- ಹ್ಯಾರಿಸ್ ರೌಫ್: ಪಾಕ್ ತಂಡದ ವೇಗಿ ಹ್ಯಾರಿಸ್ ರೌಫ್ ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದಾಗ್ಯೂ ಅವರು ಏಕದಿನ ವಿಶ್ವಕಪ್​ಗೂ ಮುನ್ನ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದೆ ಪಾಕಿಸ್ತಾನ್ ತಂಡ.

11 / 13
10- ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಅರ್ಧದಲ್ಲೇ ಹೊರಗುಳಿದಿದ್ದರು. ಇನ್ನು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

10- ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ವೇಗಿ ಅನ್ರಿಕ್ ನೋಕಿಯ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಅರ್ಧದಲ್ಲೇ ಹೊರಗುಳಿದಿದ್ದರು. ಇನ್ನು ಸಂಪೂರ್ಣ ಫಿಟ್​ನೆಸ್ ಸಾಧಿಸಿದರೆ ಮಾತ್ರ ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

12 / 13
11- ಅಕ್ಷರ್ ಪಟೇಲ್: ಟೀಮ್ ಇಂಡಿಯಾ ಆಲ್​ರೌಂಡರ್ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಇತ್ತ ಅಕ್ಷರ್ ಗಾಯಗೊಳ್ಳುತ್ತಿದ್ದಂತೆ ವಾಷಿಂಗ್ಟನ್ ಸುಂದರ್ ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ. ಅಂದರೆ ಅಕ್ಷರ್ ಪಟೇಲ್ ವಿಶ್ವಕಪ್​​ಗೂ ಮುನ್ನ ಫಿಟ್​ನೆಸ್ ಸಾಧಿಸಲು ವಿಫಲರಾದರೆ ಟೀಮ್ ಇಂಡಿಯಾದಿಂದ ಹೊರಬೀಳುವುದು ಖಚಿತ ಎನ್ನಬಹುದು.

11- ಅಕ್ಷರ್ ಪಟೇಲ್: ಟೀಮ್ ಇಂಡಿಯಾ ಆಲ್​ರೌಂಡರ್ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದಾರೆ. ಇತ್ತ ಅಕ್ಷರ್ ಗಾಯಗೊಳ್ಳುತ್ತಿದ್ದಂತೆ ವಾಷಿಂಗ್ಟನ್ ಸುಂದರ್ ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ. ಅಂದರೆ ಅಕ್ಷರ್ ಪಟೇಲ್ ವಿಶ್ವಕಪ್​​ಗೂ ಮುನ್ನ ಫಿಟ್​ನೆಸ್ ಸಾಧಿಸಲು ವಿಫಲರಾದರೆ ಟೀಮ್ ಇಂಡಿಯಾದಿಂದ ಹೊರಬೀಳುವುದು ಖಚಿತ ಎನ್ನಬಹುದು.

13 / 13
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್