Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಗೆ 6 ಪ್ರಮುಖ ವೇಗಿಗಳು ಅಲಭ್ಯ

Champions Trophy 2025: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಶುರುವಾಗಲಿದೆ. ಈ ಟೂರ್ನಿಗೆ ಮೂರು ತಂಡಗಳ ಆರು ಪ್ರಮುಖ ವೇಗಿಗಳು ಅಲಭ್ಯರಾಗಿದ್ದಾರೆ. ಇನ್ನು ಪಾಕಿಸ್ತಾನ್ ತಂಡದ ವೇಗದ ಬೌಲರ್ ಹ್ಯಾರಿಸ್ ರೌಫ್ ಕೂಡ ಗಾಯಗೊಂಡಿದ್ದು, ಟೂರ್ನಿ ಆರಂಭಕ್ಕೂ ಮುನ್ನ ಗುಣಮುಖರಾಗದಿದ್ದರೆ ಅವರು ಸಹ ಹೊರಗುಳಿಯಬಹುದು.

ಝಾಹಿರ್ ಯೂಸುಫ್
|

Updated on:Feb 12, 2025 | 2:35 PM

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹಲವು ಆಟಗಾರರು ಹೊರಗುಳಿದಿದ್ದಾರೆ. ಹೀಗೆ ಹಿಂದೆ ಸರಿದ ಆಟಗಾರರಲ್ಲಿ ವೇಗಿಗಳೇ ಪ್ರಮುಖರು. ಅದರಲ್ಲೂ ಬಹುತೇಕ ತಂಡಗಳ ಪ್ರಮುಖ ಬೌಲರ್​ಗಳು ಗಾಯಗೊಂಡಿದ್ದು, ಹೀಗಾಗಿ ಈ ಬಾರಿಯ ಟೂರ್ನಿಯಲ್ಲಿ ವೇಗಾಸ್ತ್ರಗಳನ್ನು ಎದುರು ನೋಡುವಂತಿಲ್ಲ. ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಪ್ರಮುಖ ವೇಗಿಗಳು ಯಾರೆಂದು ನೋಡುವುದಾದರೆ...

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹಲವು ಆಟಗಾರರು ಹೊರಗುಳಿದಿದ್ದಾರೆ. ಹೀಗೆ ಹಿಂದೆ ಸರಿದ ಆಟಗಾರರಲ್ಲಿ ವೇಗಿಗಳೇ ಪ್ರಮುಖರು. ಅದರಲ್ಲೂ ಬಹುತೇಕ ತಂಡಗಳ ಪ್ರಮುಖ ಬೌಲರ್​ಗಳು ಗಾಯಗೊಂಡಿದ್ದು, ಹೀಗಾಗಿ ಈ ಬಾರಿಯ ಟೂರ್ನಿಯಲ್ಲಿ ವೇಗಾಸ್ತ್ರಗಳನ್ನು ಎದುರು ನೋಡುವಂತಿಲ್ಲ. ಅದರಂತೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಪ್ರಮುಖ ವೇಗಿಗಳು ಯಾರೆಂದು ನೋಡುವುದಾದರೆ...

1 / 7
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿಲ್ಲ. ಪಾದದ ನೋವಿನ ಕಾರಣ ಅವರು ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

2 / 7
ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಜೆರಾಲ್ಡ್ ಕೋಟ್ಝಿ: ಸೌತ್ ಆಫ್ರಿಕಾ ತಂಡದ ಬಲಗೈ ವೇಗದ ಬೌಲರ್ ಜೆರಾಲ್ಡ್ ಕೋಟ್ಝಿ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ತೊಡೆಸಂದು ಬಿಗಿತದ ಸಮಸ್ಯೆಯಿಂದ ಬಳಲುತ್ತಿರುವ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

3 / 7
ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

4 / 7
ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಅನ್ರಿಕ್ ನೋಕಿಯ: ಸೌತ್ ಆಫ್ರಿಕಾ ತಂಡದ ವೇಗದ ಬೌಲರ್ ಅನ್ರಿಕ್ ನೋಕಿಯ ಕೂಡ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ. ಬೆನ್ನು ನೋವಿನ ಕಾರಣ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

5 / 7
ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಮುಂಬರುವ ಐಸಿಸಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಮುಂಬರುವ ಐಸಿಸಿ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

6 / 7
ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅಲಭ್ಯತೆಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ.

ಜಸ್​ಪ್ರೀತ್ ಬುಮ್ರಾ: ಬೆನ್ನು ನೋವಿನ ಸಮಸ್ಯೆಯ ಕಾರಣ ಜಸ್​ಪ್ರೀತ್ ಬುಮ್ರಾ ಸಹ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಬುಮ್ರಾ ಅವರ ಅಲಭ್ಯತೆಯು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ.

7 / 7

Published On - 2:32 pm, Wed, 12 February 25

Follow us
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಚಿವ ಸತೀಶ್ ಜಾರಕಿಹೊಳಿ ಬಾಂಬ್​: ನಮ್ಮ ಮಂತ್ರಿ ಮೇಲೆ ಹನಿಟ್ರ್ಯಾಪ್ ಆಗಿದೆ​
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ಸಾರ್ವಜನಿಕ ಹಣ ಪೋಲು ಮಾಡುವ ವಿಷಯದಲ್ಲಿ ಕಾಂಗ್ರೆಸ್ ವಿವಿ ಆರಂಭಿಸಿದೆ: ಅಶೋಕ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ನಮ್ಮ ನಡತೆ ಸರಿಯಾಗಿದ್ದರೆ ಯಾರೂ ಟಾರ್ಗೆಟ್ ಮಾಡಲ್ಲ: ಬಾಲಕೃಷ್ಣ
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ನಿರ್ಣಯ ಅಂಗೀಕಾರ, ಜೋಶಿ ಏನಂದ್ರು?
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ಕುಮಾರಸ್ವಾಮಿ ಹಾಸನ ಬಿಟ್ಟು ರಾಮನಗರ ಬಂದಿದ್ದು ಯಾಕೆ? ಶಿವಕುಮಾರ್
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ನೀರು ಉಳಿಸುವ ಅಭಿಯಾನಕ್ಕಾಗಿ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಡಿಕೆಶಿ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಫಲಾನುಭವಿಗಳು ಬಡವರಾದರೇನು, ಅವರಿಗೂ ಕಮಿಟ್ಮೆಂಟ್​ಗಳಿರುತ್ತವೆ: ಸರವಣ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ
ಕೈಗೆ ಗಂಭೀರ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅತ್ತೆ