AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರಿಸಿ ಬೊಬ್ಬಿರಿದರೂ ಅಭಿಷೇಕ್​ ಶರ್ಮಾಗೆ ಸಿಕ್ಕಿಲ್ಲ ಪಂದ್ಯ ಶ್ರೇಷ್ಠ ಪ್ರಶಸ್ತಿ..!

India vs New Zealand 3rd T20: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 153 ರನ್​ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ ಕೇವಲ 10 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಚೇಸಿಂಗ್​ನೊಂದಿಗೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 26, 2026 | 7:26 AM

Share
ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು.

ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಈ ಅಬ್ಬರದೊಂದಿಗೆ ಅಭಿಷೇಕ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು.

1 / 5
ಅರ್ಧಶತಕದ ಬಳಿಕ ಕೂಡ ಆರ್ಭಟ ಮುಂದುವರೆಸಿದ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ವಿಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿಲ್ಲ ಎಂಬುದು ಅಚ್ಚರಿ.

ಅರ್ಧಶತಕದ ಬಳಿಕ ಕೂಡ ಆರ್ಭಟ ಮುಂದುವರೆಸಿದ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 68 ರನ್ ಬಾರಿಸಿದ್ದರು. ಈ ವಿಸ್ಫೋಟಕ ಬ್ಯಾಟಿಂಗ್ ಹೊರತಾಗಿಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿಲ್ಲ ಎಂಬುದು ಅಚ್ಚರಿ.

2 / 5
ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಲಭಿಸಿದ್ದು ಜಸ್​ಪ್ರೀತ್ ಬುಮ್ರಾ ಅವರಿಗೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಬುಮ್ರಾ ನೀಡಿದ್ದು ಕೇವಲ 17 ರನ್ ಮಾತ್ರ. ಇದರ ನಡುವೆ 3 ವಿಕೆಟ್​ಗಳನ್ನು ಸಹ ಕಬಳಿಸಿದ್ದರು.

ಅಂದರೆ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಲಭಿಸಿದ್ದು ಜಸ್​ಪ್ರೀತ್ ಬುಮ್ರಾ ಅವರಿಗೆ. ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ಬುಮ್ರಾ ನೀಡಿದ್ದು ಕೇವಲ 17 ರನ್ ಮಾತ್ರ. ಇದರ ನಡುವೆ 3 ವಿಕೆಟ್​ಗಳನ್ನು ಸಹ ಕಬಳಿಸಿದ್ದರು.

3 / 5
ಬ್ಯಾಟಿಂಗ್ ಸ್ನೇಹಿ ಪಿಚ್​​ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸುವ ಮೂಲಕ ನ್ಯೂಝಿಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಜಸ್​ಪ್ರೀತ್ ಬುಮ್ರಾ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಭಾರತ ತಂಡದ ವೇಗಿಗೆ ನೀಡಲಾಗಿದೆ.

ಬ್ಯಾಟಿಂಗ್ ಸ್ನೇಹಿ ಪಿಚ್​​ನಲ್ಲಿ ಅತ್ಯುತ್ತಮ ದಾಳಿ ಸಂಘಟಿಸುವ ಮೂಲಕ ನ್ಯೂಝಿಲೆಂಡ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಜಸ್​ಪ್ರೀತ್ ಬುಮ್ರಾ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಭಾರತ ತಂಡದ ವೇಗಿಗೆ ನೀಡಲಾಗಿದೆ.

4 / 5
ಇದಾಗ್ಯೂ ಈ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ ಮೂರು ಪಂದ್ಯಗಳ ಮೂಲಕ ಒಟ್ಟು 152 ರನ್ ಕಲೆಹಾಕಿದ್ದಾರೆ. ಈ ಭರ್ಜರಿ ಪ್ರದರ್ಶನವನ್ನು ಮುಂದಿನ ಎರಡು ಮ್ಯಾಚ್​ಗಳಲ್ಲಿ ಮುಂದುವರೆಸಿದರೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳಬಹುದು.

ಇದಾಗ್ಯೂ ಈ ಸರಣಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಅಭಿಷೇಕ್ ಶರ್ಮಾ ಮೂರು ಪಂದ್ಯಗಳ ಮೂಲಕ ಒಟ್ಟು 152 ರನ್ ಕಲೆಹಾಕಿದ್ದಾರೆ. ಈ ಭರ್ಜರಿ ಪ್ರದರ್ಶನವನ್ನು ಮುಂದಿನ ಎರಡು ಮ್ಯಾಚ್​ಗಳಲ್ಲಿ ಮುಂದುವರೆಸಿದರೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳಬಹುದು.

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!