AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ

IPL 2021: ಇಂಗ್ಲೆಂಡ್​ನಿಂದ ಯುಎಇಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ನಲ್ಲಿದ್ದರು. ಅದರಂತೆ ರೋಹಿತ್ ಶರ್ಮಾ ಸೆಪ್ಟೆಂಬರ್ 18 ರಂದು ಕ್ವಾರಂಟೈನ್​ ಮುಗಿಸಿ ಹೊರಬಂದಿದ್ದರು.

TV9 Web
| Edited By: |

Updated on:Sep 19, 2021 | 8:51 PM

Share
ಯುಎಇನಲ್ಲಿ ಐಪಿಎಲ್​ ದ್ವಿತಿಯಾರ್ಧಕ್ಕೆ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ಮುಖಾಮುಖಿಯಾಗಿತ್ತು. ಈ ಪಂದ್ಯದ ಟಾಸ್ ವೇಳೆ ಎಲ್ಲರಿಗೂ ಅಚ್ಚರಿ ಕಾದಿತ್ತು. ಏಕೆಂದರೆ ಟಾಸ್​ಗಾಗಿ ಮುಂಬೈ ಇಂಡಿಯನ್ಸ್​ ನಾಯಕ ರೋಹಿತ್ ಶರ್ಮಾ ಬದಲಿಗೆ ಹಂಗಾಮಿ ನಾಯಕ ಕೀರನ್ ಪೊಲಾರ್ಡ್​ ಆಗಮಿಸಿದ್ದರು.

ಯುಎಇನಲ್ಲಿ ಐಪಿಎಲ್​ ದ್ವಿತಿಯಾರ್ಧಕ್ಕೆ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ಮುಖಾಮುಖಿಯಾಗಿತ್ತು. ಈ ಪಂದ್ಯದ ಟಾಸ್ ವೇಳೆ ಎಲ್ಲರಿಗೂ ಅಚ್ಚರಿ ಕಾದಿತ್ತು. ಏಕೆಂದರೆ ಟಾಸ್​ಗಾಗಿ ಮುಂಬೈ ಇಂಡಿಯನ್ಸ್​ ನಾಯಕ ರೋಹಿತ್ ಶರ್ಮಾ ಬದಲಿಗೆ ಹಂಗಾಮಿ ನಾಯಕ ಕೀರನ್ ಪೊಲಾರ್ಡ್​ ಆಗಮಿಸಿದ್ದರು.

1 / 5
ಇದರ ಬೆನ್ನಲ್ಲೇ ಮೊದಲ ಪಂದ್ಯದಿಂದ ಹಿಟ್​ಮ್ಯಾನ್ ಹೊರಗುಳಿಯಲು ಕಾರಣವೇನು ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಪಂದ್ಯ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಮಾತನಾಡಿದ್ದ ಕೀರನ್ ಪೊಲಾರ್ಡ್​​ ರೋಹಿತ್ ಶರ್ಮಾ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ನಾನು ತಂಡವನ್ನು ಮುನ್ನಡೆಸುತ್ತಿದ್ದೇನೆ ಎಂದಷ್ಟೇ ತಿಳಿಸಿದ್ದರು.

ಇದರ ಬೆನ್ನಲ್ಲೇ ಮೊದಲ ಪಂದ್ಯದಿಂದ ಹಿಟ್​ಮ್ಯಾನ್ ಹೊರಗುಳಿಯಲು ಕಾರಣವೇನು ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಪಂದ್ಯ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಮಾತನಾಡಿದ್ದ ಕೀರನ್ ಪೊಲಾರ್ಡ್​​ ರೋಹಿತ್ ಶರ್ಮಾ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ನಾನು ತಂಡವನ್ನು ಮುನ್ನಡೆಸುತ್ತಿದ್ದೇನೆ ಎಂದಷ್ಟೇ ತಿಳಿಸಿದ್ದರು.

2 / 5
ಇದಾಗ್ಯೂ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿಯಲು ಕಾರಣ ಹಳೆಯ ಗಾಯ​​ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್​ ವಿರುದ್ದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರು. ಇದೇ ವೇಳೆ ಹಲವು ಬಾರಿ ಚೆಂಡು ತೊಡೆ ಭಾಗಕ್ಕೆ ತಾಗಿದ್ದರಿಂದ ರಕ್ತ ಹೆಪ್ಪುಗಟ್ಟಿತ್ತು. ಇದಾದ ಬಳಿಕ ಹಿಟ್​ಮ್ಯಾನ್ ಅಭ್ಯಾಸ ನಡೆಸಿರಲಿಲ್ಲ.

ಇದಾಗ್ಯೂ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿಯಲು ಕಾರಣ ಹಳೆಯ ಗಾಯ​​ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್​ ವಿರುದ್ದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರು. ಇದೇ ವೇಳೆ ಹಲವು ಬಾರಿ ಚೆಂಡು ತೊಡೆ ಭಾಗಕ್ಕೆ ತಾಗಿದ್ದರಿಂದ ರಕ್ತ ಹೆಪ್ಪುಗಟ್ಟಿತ್ತು. ಇದಾದ ಬಳಿಕ ಹಿಟ್​ಮ್ಯಾನ್ ಅಭ್ಯಾಸ ನಡೆಸಿರಲಿಲ್ಲ.

3 / 5
 ಇಂಗ್ಲೆಂಡ್​ನಿಂದ ಯುಎಇಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ನಲ್ಲಿದ್ದರು. ಅದರಂತೆ ರೋಹಿತ್ ಶರ್ಮಾ ಸೆಪ್ಟೆಂಬರ್ 18 ರಂದು ಕ್ವಾರಂಟೈನ್​ ಮುಗಿಸಿ ಹೊರಬಂದಿದ್ದರು. ಇತ್ತ 10 ದಿನಗಳಿಗೂ ಹೆಚ್ಚಿನ ದಿನ ಮೈದಾನದಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಸಂಪೂರ್ಣ ಅಭ್ಯಾಸ ಆರಂಭಿಸಿ ಕಣಕ್ಕಿಳಿಯಲು ಬಯಸಿದ್ದಾರೆ.

ಇಂಗ್ಲೆಂಡ್​ನಿಂದ ಯುಎಇಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ನಲ್ಲಿದ್ದರು. ಅದರಂತೆ ರೋಹಿತ್ ಶರ್ಮಾ ಸೆಪ್ಟೆಂಬರ್ 18 ರಂದು ಕ್ವಾರಂಟೈನ್​ ಮುಗಿಸಿ ಹೊರಬಂದಿದ್ದರು. ಇತ್ತ 10 ದಿನಗಳಿಗೂ ಹೆಚ್ಚಿನ ದಿನ ಮೈದಾನದಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಸಂಪೂರ್ಣ ಅಭ್ಯಾಸ ಆರಂಭಿಸಿ ಕಣಕ್ಕಿಳಿಯಲು ಬಯಸಿದ್ದಾರೆ.

4 / 5
ಹಾಗೆಯೇ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಯಾವುದೇ ಗಾಯ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆವಹಿಸಬೇಕಾಗುತ್ತದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದು ಹಿಟ್​ಮ್ಯಾನ್ 2ನೇ ಪಂದ್ಯದ ವೇಳೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಹಾಗೆಯೇ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಯಾವುದೇ ಗಾಯ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆವಹಿಸಬೇಕಾಗುತ್ತದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದು ಹಿಟ್​ಮ್ಯಾನ್ 2ನೇ ಪಂದ್ಯದ ವೇಳೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

5 / 5

Published On - 8:02 pm, Sun, 19 September 21

Follow Us
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ
ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ ವಿಶೇಷ ಪೂಜೆ; ಮಳೆ-ಬೆಳೆಗಾಗಿ ಪ್ರಾರ್ಥನೆ
ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ
ಶಾಸಕ ಶ್ರೀನಿವಾಸ್ ಮಾನೆ ಜನ್ಮದಿನ: ಧರ್ಮಗುರುಗಳಿಗೆ ರಕ್ತ ತುಲಾಭಾರ