AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ

IPL 2021: ಇಂಗ್ಲೆಂಡ್​ನಿಂದ ಯುಎಇಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ನಲ್ಲಿದ್ದರು. ಅದರಂತೆ ರೋಹಿತ್ ಶರ್ಮಾ ಸೆಪ್ಟೆಂಬರ್ 18 ರಂದು ಕ್ವಾರಂಟೈನ್​ ಮುಗಿಸಿ ಹೊರಬಂದಿದ್ದರು.

TV9 Web
| Edited By: |

Updated on:Sep 19, 2021 | 8:51 PM

Share
ಯುಎಇನಲ್ಲಿ ಐಪಿಎಲ್​ ದ್ವಿತಿಯಾರ್ಧಕ್ಕೆ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ಮುಖಾಮುಖಿಯಾಗಿತ್ತು. ಈ ಪಂದ್ಯದ ಟಾಸ್ ವೇಳೆ ಎಲ್ಲರಿಗೂ ಅಚ್ಚರಿ ಕಾದಿತ್ತು. ಏಕೆಂದರೆ ಟಾಸ್​ಗಾಗಿ ಮುಂಬೈ ಇಂಡಿಯನ್ಸ್​ ನಾಯಕ ರೋಹಿತ್ ಶರ್ಮಾ ಬದಲಿಗೆ ಹಂಗಾಮಿ ನಾಯಕ ಕೀರನ್ ಪೊಲಾರ್ಡ್​ ಆಗಮಿಸಿದ್ದರು.

ಯುಎಇನಲ್ಲಿ ಐಪಿಎಲ್​ ದ್ವಿತಿಯಾರ್ಧಕ್ಕೆ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್​ ಮುಖಾಮುಖಿಯಾಗಿತ್ತು. ಈ ಪಂದ್ಯದ ಟಾಸ್ ವೇಳೆ ಎಲ್ಲರಿಗೂ ಅಚ್ಚರಿ ಕಾದಿತ್ತು. ಏಕೆಂದರೆ ಟಾಸ್​ಗಾಗಿ ಮುಂಬೈ ಇಂಡಿಯನ್ಸ್​ ನಾಯಕ ರೋಹಿತ್ ಶರ್ಮಾ ಬದಲಿಗೆ ಹಂಗಾಮಿ ನಾಯಕ ಕೀರನ್ ಪೊಲಾರ್ಡ್​ ಆಗಮಿಸಿದ್ದರು.

1 / 5
ಇದರ ಬೆನ್ನಲ್ಲೇ ಮೊದಲ ಪಂದ್ಯದಿಂದ ಹಿಟ್​ಮ್ಯಾನ್ ಹೊರಗುಳಿಯಲು ಕಾರಣವೇನು ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಪಂದ್ಯ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಮಾತನಾಡಿದ್ದ ಕೀರನ್ ಪೊಲಾರ್ಡ್​​ ರೋಹಿತ್ ಶರ್ಮಾ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ನಾನು ತಂಡವನ್ನು ಮುನ್ನಡೆಸುತ್ತಿದ್ದೇನೆ ಎಂದಷ್ಟೇ ತಿಳಿಸಿದ್ದರು.

ಇದರ ಬೆನ್ನಲ್ಲೇ ಮೊದಲ ಪಂದ್ಯದಿಂದ ಹಿಟ್​ಮ್ಯಾನ್ ಹೊರಗುಳಿಯಲು ಕಾರಣವೇನು ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಪಂದ್ಯ ಆರಂಭಕ್ಕೂ ಮುನ್ನ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಇದಾಗ್ಯೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ಬಗ್ಗೆ ಮಾತನಾಡಿದ್ದ ಕೀರನ್ ಪೊಲಾರ್ಡ್​​ ರೋಹಿತ್ ಶರ್ಮಾ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ನಾನು ತಂಡವನ್ನು ಮುನ್ನಡೆಸುತ್ತಿದ್ದೇನೆ ಎಂದಷ್ಟೇ ತಿಳಿಸಿದ್ದರು.

2 / 5
ಇದಾಗ್ಯೂ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿಯಲು ಕಾರಣ ಹಳೆಯ ಗಾಯ​​ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್​ ವಿರುದ್ದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರು. ಇದೇ ವೇಳೆ ಹಲವು ಬಾರಿ ಚೆಂಡು ತೊಡೆ ಭಾಗಕ್ಕೆ ತಾಗಿದ್ದರಿಂದ ರಕ್ತ ಹೆಪ್ಪುಗಟ್ಟಿತ್ತು. ಇದಾದ ಬಳಿಕ ಹಿಟ್​ಮ್ಯಾನ್ ಅಭ್ಯಾಸ ನಡೆಸಿರಲಿಲ್ಲ.

ಇದಾಗ್ಯೂ ರೋಹಿತ್ ಶರ್ಮಾ ಮೊದಲ ಪಂದ್ಯದಿಂದ ಹೊರಗುಳಿಯಲು ಕಾರಣ ಹಳೆಯ ಗಾಯ​​ ಎನ್ನಲಾಗಿದೆ. ಏಕೆಂದರೆ ಇಂಗ್ಲೆಂಡ್​ ವಿರುದ್ದ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿದ್ದರು. ಇದೇ ವೇಳೆ ಹಲವು ಬಾರಿ ಚೆಂಡು ತೊಡೆ ಭಾಗಕ್ಕೆ ತಾಗಿದ್ದರಿಂದ ರಕ್ತ ಹೆಪ್ಪುಗಟ್ಟಿತ್ತು. ಇದಾದ ಬಳಿಕ ಹಿಟ್​ಮ್ಯಾನ್ ಅಭ್ಯಾಸ ನಡೆಸಿರಲಿಲ್ಲ.

3 / 5
 ಇಂಗ್ಲೆಂಡ್​ನಿಂದ ಯುಎಇಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ನಲ್ಲಿದ್ದರು. ಅದರಂತೆ ರೋಹಿತ್ ಶರ್ಮಾ ಸೆಪ್ಟೆಂಬರ್ 18 ರಂದು ಕ್ವಾರಂಟೈನ್​ ಮುಗಿಸಿ ಹೊರಬಂದಿದ್ದರು. ಇತ್ತ 10 ದಿನಗಳಿಗೂ ಹೆಚ್ಚಿನ ದಿನ ಮೈದಾನದಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಸಂಪೂರ್ಣ ಅಭ್ಯಾಸ ಆರಂಭಿಸಿ ಕಣಕ್ಕಿಳಿಯಲು ಬಯಸಿದ್ದಾರೆ.

ಇಂಗ್ಲೆಂಡ್​ನಿಂದ ಯುಎಇಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು 6 ದಿನಗಳ ಕಾಲ ಕ್ವಾರಂಟೈನ್​ನಲ್ಲಿದ್ದರು. ಅದರಂತೆ ರೋಹಿತ್ ಶರ್ಮಾ ಸೆಪ್ಟೆಂಬರ್ 18 ರಂದು ಕ್ವಾರಂಟೈನ್​ ಮುಗಿಸಿ ಹೊರಬಂದಿದ್ದರು. ಇತ್ತ 10 ದಿನಗಳಿಗೂ ಹೆಚ್ಚಿನ ದಿನ ಮೈದಾನದಿಂದ ಹೊರಗುಳಿದಿದ್ದ ಕಾರಣ ರೋಹಿತ್ ಶರ್ಮಾ ಸಂಪೂರ್ಣ ಅಭ್ಯಾಸ ಆರಂಭಿಸಿ ಕಣಕ್ಕಿಳಿಯಲು ಬಯಸಿದ್ದಾರೆ.

4 / 5
ಹಾಗೆಯೇ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಯಾವುದೇ ಗಾಯ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆವಹಿಸಬೇಕಾಗುತ್ತದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದು ಹಿಟ್​ಮ್ಯಾನ್ 2ನೇ ಪಂದ್ಯದ ವೇಳೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಹಾಗೆಯೇ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಏಕೆಂದರೆ ಮುಂಬರುವ ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಯಾವುದೇ ಗಾಯ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆವಹಿಸಬೇಕಾಗುತ್ತದೆ. ಹೀಗಾಗಿ ಮೊದಲ ಪಂದ್ಯದಿಂದ ಹೊರಗುಳಿದು ಹಿಟ್​ಮ್ಯಾನ್ 2ನೇ ಪಂದ್ಯದ ವೇಳೆ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

5 / 5

Published On - 8:02 pm, Sun, 19 September 21

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ