AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್​ನಲ್ಲಿ ಪಾಕ್ ಆಟಗಾರರಿಗೆ ಸಿಕ್ಕ ಭಾಗ್ಯ ಕೊಹ್ಲಿ, ಗೇಲ್, ಎಬಿಡಿಗೆ ಇನ್ನೂ ಸಿಕ್ಕಿಲ್ಲ

RCB: ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. 6076 ರನ್ ಗಳಿಸಿರುವ ಕೊಹ್ಲಿ ಐಪಿಎಲ್​ನಲ್ಲಿ 5 ಶತಕ ಮತ್ತು 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Sep 14, 2021 | 5:58 PM

Share
ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

ಐಪಿಎಲ್​ನ ದ್ವಿತಿಯಾರ್ಧಕ್ಕೆ ಭಾನುವಾರ ಚಾಲನೆ ದೊರೆಯಲಿದೆ. ಟೂರ್ನಿಯ ಉಳಿದ 31 ಪಂದ್ಯಗಳನ್ನು ಯುಎಇನ ಶಾರ್ಜಾ, ಅಬುಧಾಬಿ ಹಾಗೂ ದುಬೈ ಕ್ರಿಕೆಟ್ ಮೈದಾನದಲ್ಲಿ ಆಡಲಾಗುತ್ತದೆ. ಆದರೆ ದ್ವಿತಿಯಾರ್ಧ ಆರಂಭಕ್ಕೂ ಮುನ್ನವೇ ಈ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ತಂಡವನ್ನು ಹೆಸರಿಸಿದ್ದಾರೆ ಟೀಮ್ ಇಂಡಿಯಾ ಮಾಜಿ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್.

1 / 5
ಈ ಲೆಕ್ಕಾಚಾರಗಳಲ್ಲಿ ಎಂದಿನಂತೆ ಬಲಿಷ್ಠ ತಂಡವಾಗಿ ಆರ್​ಸಿಬಿ ಕೂಡ ಇರುವುದು ವಿಶೇಷ. ಒಂದು ವೇಳೆ ಈ ಸಲ ಆರ್​ಸಿಬಿ ಕಪ್ ಗೆದ್ದರೆ ಇಬ್ಬರು ಲೆಜೆಂಡ್ ಆಟಗಾರರ 13 ವರ್ಷಗಳ ದೀರ್ಘ ಕಾಯುವಿಕೆಗೆ ಫುಲ್ ಸ್ಟಾಪ್ ಬೀಳಲಿದೆ. ಹೌದು, ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ.  6076 ರನ್ ಗಳಿಸಿರುವ ಕೊಹ್ಲಿ ಐಪಿಎಲ್​ನಲ್ಲಿ  5 ಶತಕ ಮತ್ತು 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇದಾಗ್ಯೂ ಒಂದೇ ಒಂದು ಬಾರಿ ಕಪ್ ಗೆದ್ದ ತಂಡದ ಭಾಗವಾಗಲು ಸಾಧ್ಯವಾಗಿಲ್ಲ.

ಈ ಲೆಕ್ಕಾಚಾರಗಳಲ್ಲಿ ಎಂದಿನಂತೆ ಬಲಿಷ್ಠ ತಂಡವಾಗಿ ಆರ್​ಸಿಬಿ ಕೂಡ ಇರುವುದು ವಿಶೇಷ. ಒಂದು ವೇಳೆ ಈ ಸಲ ಆರ್​ಸಿಬಿ ಕಪ್ ಗೆದ್ದರೆ ಇಬ್ಬರು ಲೆಜೆಂಡ್ ಆಟಗಾರರ 13 ವರ್ಷಗಳ ದೀರ್ಘ ಕಾಯುವಿಕೆಗೆ ಫುಲ್ ಸ್ಟಾಪ್ ಬೀಳಲಿದೆ. ಹೌದು, ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. 6076 ರನ್ ಗಳಿಸಿರುವ ಕೊಹ್ಲಿ ಐಪಿಎಲ್​ನಲ್ಲಿ 5 ಶತಕ ಮತ್ತು 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಇದಾಗ್ಯೂ ಒಂದೇ ಒಂದು ಬಾರಿ ಕಪ್ ಗೆದ್ದ ತಂಡದ ಭಾಗವಾಗಲು ಸಾಧ್ಯವಾಗಿಲ್ಲ.

2 / 5
ಇನ್ನು  ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಐಪಿಎಲ್​ನಲ್ಲಿ 5056 ರನ್ ಗಳಿಸಿದ್ದಾರೆ. ಹಲವು ಪಂದ್ಯಗಳನ್ನೂ ಸಹ ಗೆಲ್ಲಿಸಿಕೊಟ್ಟಿದ್ದಾರೆ. ಇದಾಗ್ಯೂ ಐಪಿಎಲ್ ಟ್ರೋಫಿ ಎನ್ನುವುದು ಎಬಿಡಿಗೆ ಮರೀಚಿಕೆ. ಹಾಗೆಯೇ ಪಂಜಾಬ್ ಕಿಂಗ್ಸ್ ತಂಡ ಆಟಗಾರ ಕ್ರಿಸ್ ಗೇಲ್ 4950 ರನ್ ಗಳಿಸಿದ್ದಾರೆ. ಕೆಕೆಆರ್, ಆರ್​ಸಿಬಿ ಸೇರಿದಂತೆ ಮೂರು ಫ್ರಾಂಚೈಸಿಗಳ ಪರ ಆಡಿರುವ ಗೇಲ್ ಕೂಡ ಇದುವರೆಗೆ ಐಪಿಎಲ್ ಟ್ರೋಫಿ ಗೆದ್ದ ತಂಡದ ಭಾಗವಾಗಿಲ್ಲ ಎಂಬುದು ವಿಶೇಷ.

ಇನ್ನು ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಐಪಿಎಲ್​ನಲ್ಲಿ 5056 ರನ್ ಗಳಿಸಿದ್ದಾರೆ. ಹಲವು ಪಂದ್ಯಗಳನ್ನೂ ಸಹ ಗೆಲ್ಲಿಸಿಕೊಟ್ಟಿದ್ದಾರೆ. ಇದಾಗ್ಯೂ ಐಪಿಎಲ್ ಟ್ರೋಫಿ ಎನ್ನುವುದು ಎಬಿಡಿಗೆ ಮರೀಚಿಕೆ. ಹಾಗೆಯೇ ಪಂಜಾಬ್ ಕಿಂಗ್ಸ್ ತಂಡ ಆಟಗಾರ ಕ್ರಿಸ್ ಗೇಲ್ 4950 ರನ್ ಗಳಿಸಿದ್ದಾರೆ. ಕೆಕೆಆರ್, ಆರ್​ಸಿಬಿ ಸೇರಿದಂತೆ ಮೂರು ಫ್ರಾಂಚೈಸಿಗಳ ಪರ ಆಡಿರುವ ಗೇಲ್ ಕೂಡ ಇದುವರೆಗೆ ಐಪಿಎಲ್ ಟ್ರೋಫಿ ಗೆದ್ದ ತಂಡದ ಭಾಗವಾಗಿಲ್ಲ ಎಂಬುದು ವಿಶೇಷ.

3 / 5
ಇದಾಗ್ಯೂ ಪಾಕಿಸ್ತಾನ್ ತಂಡದ ಕೆಲ ಆಟಗಾರರಿಗೆ ಐಪಿಎಲ್ ಟ್ರೋಫಿ ಗೆದ್ದ ತಂಡಗಳ ಭಾಗವಾಗುವ ಅವಕಾಶ ಲಭಿಸಿದೆ. 2008 ರಲ್ಲಿ ಪಾಕ್​ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಿದ್ದರು. ಚೊಚ್ಚಲ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ವೇಳೆ ತಂಡದಲ್ಲಿ ಪಾಕ್ ಎಡಗೈ ವೇಗದ ಬೌಲರ್‌ ಸೊಹೈಲ್ ತನ್ವಿರ್, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕಮ್ರಾನ್ ಅಕ್ಮಲ್ ಮತ್ತು ಯೂನಿಸ್ ಖಾನ್ ಚಾಂಪಿಯನ್ ತಂಡದ ಭಾಗವಾಗಿದ್ದರು.

ಇದಾಗ್ಯೂ ಪಾಕಿಸ್ತಾನ್ ತಂಡದ ಕೆಲ ಆಟಗಾರರಿಗೆ ಐಪಿಎಲ್ ಟ್ರೋಫಿ ಗೆದ್ದ ತಂಡಗಳ ಭಾಗವಾಗುವ ಅವಕಾಶ ಲಭಿಸಿದೆ. 2008 ರಲ್ಲಿ ಪಾಕ್​ ಆಟಗಾರರು ಐಪಿಎಲ್​ನಲ್ಲಿ ಭಾಗವಹಿಸಿದ್ದರು. ಚೊಚ್ಚಲ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್​ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಈ ವೇಳೆ ತಂಡದಲ್ಲಿ ಪಾಕ್ ಎಡಗೈ ವೇಗದ ಬೌಲರ್‌ ಸೊಹೈಲ್ ತನ್ವಿರ್, ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಕಮ್ರಾನ್ ಅಕ್ಮಲ್ ಮತ್ತು ಯೂನಿಸ್ ಖಾನ್ ಚಾಂಪಿಯನ್ ತಂಡದ ಭಾಗವಾಗಿದ್ದರು.

4 / 5
ಅಷ್ಟೇ ಅಲ್ಲದೆ ಚೊಚ್ಚಲ ಟೂರ್ನಿಯಲ್ಲಿ 11 ಪಂದ್ಯಗಳಿಂದ 22  ವಿಕೆಟ್ ಪಡೆದು ಸೊಹೈಲ್ ತನ್ವೀರ್ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. 2008ರ ಉಗ್ರರ ಮುಂಬೈ ದಾಳಿ ಬಳಿಕ ಪಾಕ್ ಆಟಗಾರರನ್ನು ಐಪಿಎಲ್​ನಿಂದ ಕೈ ಬಿಡಲು ಭಾರತ ಸರ್ಕಾರ ನಿರ್ದೇಶಿಸಿತ್ತು. ಅದರಂತೆ ಕಳೆದ  13 ಸೀಸನ್​ಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಾಕ್ ಆಟಗಾರರಿಗೆ ನಿಷೇಧ ಹೇರಲಾಗಿದೆ.

ಅಷ್ಟೇ ಅಲ್ಲದೆ ಚೊಚ್ಚಲ ಟೂರ್ನಿಯಲ್ಲಿ 11 ಪಂದ್ಯಗಳಿಂದ 22 ವಿಕೆಟ್ ಪಡೆದು ಸೊಹೈಲ್ ತನ್ವೀರ್ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದರು. 2008ರ ಉಗ್ರರ ಮುಂಬೈ ದಾಳಿ ಬಳಿಕ ಪಾಕ್ ಆಟಗಾರರನ್ನು ಐಪಿಎಲ್​ನಿಂದ ಕೈ ಬಿಡಲು ಭಾರತ ಸರ್ಕಾರ ನಿರ್ದೇಶಿಸಿತ್ತು. ಅದರಂತೆ ಕಳೆದ 13 ಸೀಸನ್​ಗಳಿಂದ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಾಕ್ ಆಟಗಾರರಿಗೆ ನಿಷೇಧ ಹೇರಲಾಗಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!