AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

IPL 2022 AB de Villiers: ಈ ಹಿಂದೆಯೇ ಈ ಬಗ್ಗೆ ಮಾಹಿತಿ ನೀಡಿದ್ದ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ.

TV9 Web
| Edited By: |

Updated on: Mar 08, 2022 | 8:30 PM

Share
ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ವರ್ಷವಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

ಆರ್​ಸಿಬಿ ತಂಡದ ಆಪತ್ಭಾಂಧವ ಎಬಿ ಡಿವಿಲಿಯರ್ಸ್​ ಕಳೆದ ವರ್ಷವಷ್ಟೇ ಎಲ್ಲಾ ಮಾದರಿಯ ಕ್ರಿಕೆಟ್ ವಿದಾಯ ಹೇಳಿದ್ದರು. ಇದಕ್ಕೂ ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದ ಎಬಿಡಿ ಆ ಬಳಿಕ ಲೀಗ್ ಕ್ರಿಕೆಟ್​ನಲ್ಲಿ ಮುಂದುವರೆದಿದ್ದರು.

1 / 7
ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

ಅದರಲ್ಲೂ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪ್ರಮುಖ ಅಂಗವಾಗಿದ್ದರು. ಆರ್​ಸಿಬಿ ಪರ 156 ಐಪಿಎಲ್‌ ಪಂದ್ಯಗಳಾಡಿದ್ದ ಎಬಿಡಿ ಒಟ್ಟು 4,491 ರನ್‌ಗಳನ್ನು ಕಲೆಹಾಕಿದ್ದರು. ಅಷ್ಟೇ ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ರನ್ ಬಾರಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಬರೆದಿದ್ದಾರೆ.

2 / 7
ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

ಇನ್ನು ಆರ್​ಸಿಬಿ ಪರ ವಿರಾಟ್‌ ಕೊಹ್ಲಿ ಬಳಿಕ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ. ಇದಾಗ್ಯೂ ದಿಢೀರಣೆ ನಿವೃತ್ತಿ ಘೋಷಿಸಿ ಎಬಿಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

3 / 7
ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಮೆಂಟರ್​ ರೂಪದಲ್ಲಿ ಎಂಬುದು ವಿಶೇಷ.

ಎಬಿಡಿ ಅವರ ಈ ನಿರ್ಧಾರ ಆರ್​ಸಿಬಿ ಅಭಿಮಾನಿಗಳ ನೋವಿಗೆ ಕಾರಣವಾಗಿತ್ತು. ಆದರೀಗ ಎಬಿಡಿ ಮತ್ತೆ ಆರ್​ಸಿಬಿಗೆ ಕಂಬ್ಯಾಕ್ ಸಾಧ್ಯತೆಯಿದೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಬದಲಾಗಿ ಮೆಂಟರ್​ ರೂಪದಲ್ಲಿ ಎಂಬುದು ವಿಶೇಷ.

4 / 7
ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಮೆಂಟರ್ ಆಗುವ ಸಾಧ್ಯತೆಯಿದೆ.  ವರದಿಗಳ ಪ್ರಕಾರ, RCB ಎಬಿಡಿಯನ್ನು ಮೆಂಟರ್ ಆಗಿ  ನೇಮಿಸಲು ಉತ್ಸುಕವಾಗಿದೆ. ಹೀಗಾಗಿ ಮತ್ತೊಮ್ಮೆ ಆರ್​ಸಿಬಿ ಜೊತೆ ಎಬಿ ಡಿವಿಲಿಯರ್ಸ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಹೌದು, ಎಬಿ ಡಿವಿಲಿಯರ್ಸ್​ ಆರ್​ಸಿಬಿ ತಂಡದ ಮೆಂಟರ್ ಆಗುವ ಸಾಧ್ಯತೆಯಿದೆ. ವರದಿಗಳ ಪ್ರಕಾರ, RCB ಎಬಿಡಿಯನ್ನು ಮೆಂಟರ್ ಆಗಿ ನೇಮಿಸಲು ಉತ್ಸುಕವಾಗಿದೆ. ಹೀಗಾಗಿ ಮತ್ತೊಮ್ಮೆ ಆರ್​ಸಿಬಿ ಜೊತೆ ಎಬಿ ಡಿವಿಲಿಯರ್ಸ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

5 / 7
ಈ ಹಿಂದೆಯೇ ಈ ಬಗ್ಗೆ ಮಾಹಿತಿ ನೀಡಿದ್ದ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಅಂತಹ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದರು.

ಈ ಹಿಂದೆಯೇ ಈ ಬಗ್ಗೆ ಮಾಹಿತಿ ನೀಡಿದ್ದ ಆರ್​ಸಿಬಿ ತಂಡ ಕೋಚ್ ಸಂಜಯ್ ಬಂಗಾರ್, ಪ್ರತಿ ತಂಡಕ್ಕೂ ಬ್ಯಾಟಿಂಗ್ ಕೋಚ್ ಇರಬೇಕಾಗಿರುವುದು ಅನಿವಾರ್ಯ. ಅದರಲ್ಲೂ ಎಬಿಡಿ ಅವರಂತಹ ಆಟಗಾರನಿಗೆ ಅಂತಹ ಸ್ಥಾನ ನೀಡುವುದು ಅದು ತಂಡಕ್ಕೆ ಮತ್ತು ಆಟಗಾರರಿಗೆ ಒಳ್ಳೆಯದು ಎಂದಿದ್ದರು.

6 / 7
ಈ ಮೂಲಕ ಎಬಿಡಿಯನ್ನು ಆರ್​ಸಿಬಿ ಬಳಗಕ್ಕೆ ಕರೆತರುವ ಸೂಚನೆ ನೀಡಿದ್ದರು.  ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಮೆಂಟರ್ ಆಗಿ ಅಥವಾ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಈ ಮೂಲಕ ಎಬಿಡಿಯನ್ನು ಆರ್​ಸಿಬಿ ಬಳಗಕ್ಕೆ ಕರೆತರುವ ಸೂಚನೆ ನೀಡಿದ್ದರು. ಹೀಗಾಗಿ ಎಬಿ ಡಿವಿಲಿಯರ್ಸ್​ ಮತ್ತೆ ಆರ್​ಸಿಬಿ ತಂಡದಲ್ಲಿ ಮೆಂಟರ್ ಆಗಿ ಅಥವಾ ಬ್ಯಾಟಿಂಗ್ ಕೋಚ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ