AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ಗೆ ಕೊರೋನಾತಂಕ ಶುರು..!

IPL 2022 Mega Auction: ಬೆಂಗಳೂರಿನ ಈಗಾಗಲೇ ಕೊರೋನಾ ಸುರಕ್ಷತಾ ನಿಯಮಾವಳಿ ಜಾರಿಯಲ್ಲಿದ್ದು, ಹೀಗಾಗಿ ಮೆಗಾ ಹರಾಜನ್ನು ಬೇರೆ ಕಡೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TV9 Web
| Edited By: |

Updated on:Jan 05, 2022 | 10:59 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಸಿದ್ದತೆಗಳನ್ನು ಆರಂಭಿಸಿದ ಬಿಸಿಸಿಐಗೆ ಕೊರೋನಾ ಓಮಿಕ್ರಾನ್ ಹೊಸ ತಲೆನೋವುಂಟು ಮಾಡಿದೆ. ಈಗಾಗಲೇ ರಿಟೈನ್ ಪ್ರಕ್ರಿಯೆ ಮುಗಿಸಿರುವ ಬಿಸಿಸಿಐ ಮುಂದಿನ ತಿಂಗಳು ಮೆಗಾ ಹರಾಜು ನಡೆಸಲು ಪ್ಲ್ಯಾನ್ ರೂಪಿಸಿತ್ತು.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಸಿದ್ದತೆಗಳನ್ನು ಆರಂಭಿಸಿದ ಬಿಸಿಸಿಐಗೆ ಕೊರೋನಾ ಓಮಿಕ್ರಾನ್ ಹೊಸ ತಲೆನೋವುಂಟು ಮಾಡಿದೆ. ಈಗಾಗಲೇ ರಿಟೈನ್ ಪ್ರಕ್ರಿಯೆ ಮುಗಿಸಿರುವ ಬಿಸಿಸಿಐ ಮುಂದಿನ ತಿಂಗಳು ಮೆಗಾ ಹರಾಜು ನಡೆಸಲು ಪ್ಲ್ಯಾನ್ ರೂಪಿಸಿತ್ತು.

1 / 6
ಅದರಂತೆ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಸಲು ನಿರ್ಧರಿಸಲಾಗಿತ್ತು. ಆದರೀಗ ದೇಶದಲ್ಲಿ ಕೊರೋನಾ ಓಮಿಕ್ರಾನ್ ಪ್ರಕರಣಗಳು ಹೆಚ್ಚಾದ ಕಾರಣ ಇದೀಗ ರಣಜಿ ಟೂರ್ನಿಯನ್ನು ಮುಂದೂಡಲಾಗಿದೆ.

ಅದರಂತೆ ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 15 ಮೆಗಾ ಹರಾಜು ನಡೆಸಲು ನಿರ್ಧರಿಸಲಾಗಿತ್ತು. ಆದರೀಗ ದೇಶದಲ್ಲಿ ಕೊರೋನಾ ಓಮಿಕ್ರಾನ್ ಪ್ರಕರಣಗಳು ಹೆಚ್ಚಾದ ಕಾರಣ ಇದೀಗ ರಣಜಿ ಟೂರ್ನಿಯನ್ನು ಮುಂದೂಡಲಾಗಿದೆ.

2 / 6
 ಅಷ್ಟೇ ಅಲ್ಲದೆ ಈ ಹಿಂದೆ ನಿರ್ಧರಿಸಿದಂತೆ ಫೆಬ್ರವರಿ 12 ರಂದು ಮೆಗಾ ಹರಾಜನ್ನು ಶುರು ಮಾಡುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ಮುಂದಿನ ತಿಂಗಳು ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಾದರೆ ರಾಜ್ಯಗಳ ನಡುವಣ ಪ್ರಯಾಣ ಹಾಗೂ ವಿಮಾನಯಾನ ರದ್ದಾಗಲಿದೆ. ಹೀಗಾಗಿ ಹರಾಜು ದಿನಾಂಕವನ್ನು ಬದಲಿಸುವ ಬಗ್ಗೆ ಬಿಸಿಸಿಐ ಚರ್ಚಿಸಿದೆ.

ಅಷ್ಟೇ ಅಲ್ಲದೆ ಈ ಹಿಂದೆ ನಿರ್ಧರಿಸಿದಂತೆ ಫೆಬ್ರವರಿ 12 ರಂದು ಮೆಗಾ ಹರಾಜನ್ನು ಶುರು ಮಾಡುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಏಕೆಂದರೆ ಮುಂದಿನ ತಿಂಗಳು ದೇಶದಲ್ಲಿ ಕೊರೋನಾ ಪ್ರಕರಣ ಹೆಚ್ಚಾದರೆ ರಾಜ್ಯಗಳ ನಡುವಣ ಪ್ರಯಾಣ ಹಾಗೂ ವಿಮಾನಯಾನ ರದ್ದಾಗಲಿದೆ. ಹೀಗಾಗಿ ಹರಾಜು ದಿನಾಂಕವನ್ನು ಬದಲಿಸುವ ಬಗ್ಗೆ ಬಿಸಿಸಿಐ ಚರ್ಚಿಸಿದೆ.

3 / 6
ಅಷ್ಟೇ ಅಲ್ಲದೆ ಬೆಂಗಳೂರಿನ ಈಗಾಗಲೇ ಕೊರೋನಾ ಸುರಕ್ಷತಾ ನಿಯಮಾವಳಿ ಜಾರಿಯಲ್ಲಿದ್ದು, ಹೀಗಾಗಿ ಮೆಗಾ ಹರಾಜನ್ನು ಬೇರೆ ಕಡೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿಯೇ ಬಿಸಿಸಿಐ ಫೆಬ್ರವರಿ 12 ಮತ್ತು 13 ರಂದು ಮೆಗಾ ಹರಾಜಿ ನಡೆಸಲು ಬೆಂಗಳೂರಿನಲ್ಲಿ ಯಾವುದೇ ಹೋಟೆಲ್‌ಗಳನ್ನು ಕಾಯ್ದಿರಿಸಿಲ್ಲ ಎಂದು ತಿಳಿದು ಬಂದಿದೆ.

ಅಷ್ಟೇ ಅಲ್ಲದೆ ಬೆಂಗಳೂರಿನ ಈಗಾಗಲೇ ಕೊರೋನಾ ಸುರಕ್ಷತಾ ನಿಯಮಾವಳಿ ಜಾರಿಯಲ್ಲಿದ್ದು, ಹೀಗಾಗಿ ಮೆಗಾ ಹರಾಜನ್ನು ಬೇರೆ ಕಡೆ ಶಿಫ್ಟ್ ಮಾಡುವ ಸಾಧ್ಯತೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿಯೇ ಬಿಸಿಸಿಐ ಫೆಬ್ರವರಿ 12 ಮತ್ತು 13 ರಂದು ಮೆಗಾ ಹರಾಜಿ ನಡೆಸಲು ಬೆಂಗಳೂರಿನಲ್ಲಿ ಯಾವುದೇ ಹೋಟೆಲ್‌ಗಳನ್ನು ಕಾಯ್ದಿರಿಸಿಲ್ಲ ಎಂದು ತಿಳಿದು ಬಂದಿದೆ.

4 / 6
ಕೆಲವು ವಿಷಯಗಳು ನಮ್ಮ ಕೈಯಲ್ಲಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ರಾಜ್ಯ ಸಂಘಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಮೆಗಾ ಹರಾಜಿನ ಸ್ಥಳವನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆ ಮುಂದುವರೆದಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜಿನ ದಿನಾಂಕ ಹಾಗೂ ಸ್ಥಳ ಸ್ಥಳಾಂತರವಾಗುವ ಸಾಧ್ಯತೆಯಿದೆ.

ಕೆಲವು ವಿಷಯಗಳು ನಮ್ಮ ಕೈಯಲ್ಲಿಲ್ಲ. ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ರಾಜ್ಯ ಸಂಘಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಮೆಗಾ ಹರಾಜಿನ ಸ್ಥಳವನ್ನು ಸ್ಥಳಾಂತರಿಸುವ ಬಗ್ಗೆ ಚರ್ಚೆ ಮುಂದುವರೆದಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೀಗಾಗಿ ಮೆಗಾ ಹರಾಜಿನ ದಿನಾಂಕ ಹಾಗೂ ಸ್ಥಳ ಸ್ಥಳಾಂತರವಾಗುವ ಸಾಧ್ಯತೆಯಿದೆ.

5 / 6
ಒಟ್ಟಿನಲ್ಲಿ 10 ತಂಡಗಳೊಂದಿಗೆ ಹೊಸ ಸೀಸನ್ ಶುರು ಮಾಡುವ ಭರ್ಜರಿ ಸಿದ್ದತೆಯಲ್ಲಿದ್ದ ಬಿಸಿಸಿಐನ ಲೆಕ್ಕಚಾರಗಳು ಇದೀಗ ಕೊರೋನಾ ಓಮಿಕ್ರಾನ್ ಕಾರಣದಿಂದ ತಲೆಕೆಳಗಾಗುತ್ತಿವೆ. ಇದಾಗ್ಯೂ ಮುಂದಿನ ಎರಡು ತಿಂಗಳು ಕಾಲ ಭಾರತದಲ್ಲಿ ಕೊರೋನಾಂತಕ ಇದ್ದರೆ ಅನಿವಾರ್ಯವಾಗಿ ಐಪಿಎಲ್​ ಟೂರ್ನಿ ವಿದೇಶಕ್ಕೆ ಸ್ಥಳಾಂತರವಾದರೂ ಅಚ್ಚರಿಪಡಬೇಕಿಲ್ಲ.

ಒಟ್ಟಿನಲ್ಲಿ 10 ತಂಡಗಳೊಂದಿಗೆ ಹೊಸ ಸೀಸನ್ ಶುರು ಮಾಡುವ ಭರ್ಜರಿ ಸಿದ್ದತೆಯಲ್ಲಿದ್ದ ಬಿಸಿಸಿಐನ ಲೆಕ್ಕಚಾರಗಳು ಇದೀಗ ಕೊರೋನಾ ಓಮಿಕ್ರಾನ್ ಕಾರಣದಿಂದ ತಲೆಕೆಳಗಾಗುತ್ತಿವೆ. ಇದಾಗ್ಯೂ ಮುಂದಿನ ಎರಡು ತಿಂಗಳು ಕಾಲ ಭಾರತದಲ್ಲಿ ಕೊರೋನಾಂತಕ ಇದ್ದರೆ ಅನಿವಾರ್ಯವಾಗಿ ಐಪಿಎಲ್​ ಟೂರ್ನಿ ವಿದೇಶಕ್ಕೆ ಸ್ಥಳಾಂತರವಾದರೂ ಅಚ್ಚರಿಪಡಬೇಕಿಲ್ಲ.

6 / 6

Published On - 10:11 pm, Wed, 5 January 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ