AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಹೊಸ ತಂಡಗಳಿಗೆ ಮೂಲ ಬೆಲೆ ಫಿಕ್ಸ್​: ಇಷ್ಟು ಮೊತ್ತ ನೀಡಿ ಖರೀದಿಸುವವರು ಯಾರು?

IPL 2022: ಇನ್ನು ತಂಡಗಳ ಖರೀದಿಗಾಗಿ ಅದಾನಿ ಗ್ರೂಪ್, ಆರ್​ಪಿ ಸಂಜೀವ್ ಗೊಯೆಂಕಾ ಗ್ರೂಪ್, ಫಾರ್ಮಾ ಕಂಪನಿ ಟುರೆಟ್ ಮತ್ತು ಬ್ಯಾಂಕಿಂಗ್ ವಲಯದ ಕಂಪನಿಗಳು ಆಸಕ್ತಿ ಹೊಂದಿವೆ.

TV9 Web
| Updated By: ಝಾಹಿರ್ ಯೂಸುಫ್

Updated on:Sep 06, 2021 | 6:03 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14ನ ದ್ವಿತಿಯಾರ್ಧ ರಂಗೇರಲು ಇನ್ನು ವಾರಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಮುಂದಿನ ಸೀಸನ್​ಗಾಗಿ ತಯಾರಿಗಳನ್ನು ಆರಂಭಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಹೊಸ ತಂಡಗಳ ಸೇರ್ಪಡೆಗೆ ಸಿದ್ಧತೆಗಳನ್ನು ಶುರು ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14ನ ದ್ವಿತಿಯಾರ್ಧ ರಂಗೇರಲು ಇನ್ನು ವಾರಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಮುಂದಿನ ಸೀಸನ್​ಗಾಗಿ ತಯಾರಿಗಳನ್ನು ಆರಂಭಿಸಿದೆ. ಅದರ ಮೊದಲ ಹೆಜ್ಜೆ ಎಂಬಂತೆ ಹೊಸ ತಂಡಗಳ ಸೇರ್ಪಡೆಗೆ ಸಿದ್ಧತೆಗಳನ್ನು ಶುರು ಮಾಡಿದೆ.

1 / 6
 ಈ ಹಿಂದೆಯೇ ಬಿಸಿಸಿಐ ತಿಳಿಸಿದಂತೆ, 15ನೇ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದೆ. ಪ್ರಸ್ತುತ ಇರುವ 8 ತಂಡಗಳೊಂದಿಗೆ ಮತ್ತೆರಡು ತಂಡಗಳು ಸೇರ್ಪಡೆಯಾಗಲಿದೆ. ಆದರೆ ಆ ಎರಡು ಹೊಸ ತಂಡಗಳು ಯಾವ ನಗರವನ್ನು ಪ್ರತಿನಿಧಿಸಲಿದೆ ಎಂಬುದನ್ನು ಇದುವರೆಗೆ ಸ್ಪಷ್ಟಪಡಿಸಿರಲಿಲ್ಲ.

ಈ ಹಿಂದೆಯೇ ಬಿಸಿಸಿಐ ತಿಳಿಸಿದಂತೆ, 15ನೇ ಸೀಸನ್​ ಐಪಿಎಲ್​ನಲ್ಲಿ ಒಟ್ಟು 10 ತಂಡಗಳು ಭಾಗವಹಿಸಲಿದೆ. ಪ್ರಸ್ತುತ ಇರುವ 8 ತಂಡಗಳೊಂದಿಗೆ ಮತ್ತೆರಡು ತಂಡಗಳು ಸೇರ್ಪಡೆಯಾಗಲಿದೆ. ಆದರೆ ಆ ಎರಡು ಹೊಸ ತಂಡಗಳು ಯಾವ ನಗರವನ್ನು ಪ್ರತಿನಿಧಿಸಲಿದೆ ಎಂಬುದನ್ನು ಇದುವರೆಗೆ ಸ್ಪಷ್ಟಪಡಿಸಿರಲಿಲ್ಲ.

2 / 6
ಇದೀಗ ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

ಇದೀಗ ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, 2 ತಂಡಗಳ ಫ್ರಾಂಚೈಸಿಗಾಗಿ ಒಟ್ಟು 6 ನಗರಗಳನ್ನು ಆಯ್ಕೆ ಮಾಡಲಾಗಿದೆ. ಈ ನಗರಗಳ ಸ್ಟೇಡಿಯಂಗಳನ್ನು ಕೇಂದ್ರೀಕರಿಸಿ ತಂಡಗಳ ಬಿಡ್ಡಿಂಗ್ ನಡೆಯಲಿದೆ. ಅದರಂತೆ ಹೊಸ 2 ತಂಡಗಳ ಕೇಂದ್ರಗಳಾಗಿ ಲಕ್ನೋ, ಅಹಮದಾಬಾದ್, ರಾಂಚಿ, ಕಟಕ್, ಗುವಾಹಟಿ ಮತ್ತು ಧರ್ಮಶಾಲಾ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಲಾಗಿದೆ.

3 / 6
ಮಾಧ್ಯಮ ವರದಿಯ ಪ್ರಕಾರ, ಬಿಸಿಸಿಐ ಹಿಂದಿ ಮಾತನಾಡುವ ಪ್ರದೇಶಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಿಕೊಂಡಿದೆ. ಏಕೆಂದರೆ ಕಳೆದ ವರ್ಷ ಶೇಕಡಾ 65 ರಷ್ಟು ಐಪಿಎಲ್ ವೀಕ್ಷಕರು ಹಿಂದಿ ಮಾತನಾಡುವ ಪ್ರದೇಶಗಳ ಮೂಲದವರಾಗಿದ್ದರು. ಹೀಗಾಗಿ ಹೊಸ ತಂಡಗಳ ಆಯ್ಕೆಯಲ್ಲಿ ದಕ್ಷಿಣ ರಾಜ್ಯದ ನಗರಗಳನ್ನು ಕೈ ಬಿಡಲಾಗಿದೆ ಎಂದು ತಿಳಿಸಲಾಗಿದೆ.

ಮಾಧ್ಯಮ ವರದಿಯ ಪ್ರಕಾರ, ಬಿಸಿಸಿಐ ಹಿಂದಿ ಮಾತನಾಡುವ ಪ್ರದೇಶಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಿಕೊಂಡಿದೆ. ಏಕೆಂದರೆ ಕಳೆದ ವರ್ಷ ಶೇಕಡಾ 65 ರಷ್ಟು ಐಪಿಎಲ್ ವೀಕ್ಷಕರು ಹಿಂದಿ ಮಾತನಾಡುವ ಪ್ರದೇಶಗಳ ಮೂಲದವರಾಗಿದ್ದರು. ಹೀಗಾಗಿ ಹೊಸ ತಂಡಗಳ ಆಯ್ಕೆಯಲ್ಲಿ ದಕ್ಷಿಣ ರಾಜ್ಯದ ನಗರಗಳನ್ನು ಕೈ ಬಿಡಲಾಗಿದೆ ಎಂದು ತಿಳಿಸಲಾಗಿದೆ.

4 / 6
ಲಕ್ನೋ, ರಾಂಚಿ, ಧರ್ಮಶಾಲಾ ನಗರಗಳು ಹೆಚ್ಚು ಹಿಂದಿ ಮಾತನಾಡುವ ಪ್ರದೇಶಗಳಾಗಿದ್ದು, ಹೀಗಾಗಿ ಇದೇ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಿ ಐಪಿಎಲ್​ ವೀಕ್ಷಕರ ಹಾಗೂ ಪ್ರೇಕ್ಷಕರನ್ನು ಹೆಚ್ಚಿಸಲು ಬಿಸಿಸಿಐ ಪ್ಲ್ಯಾನ್ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಇನ್ನು ಎರಡು ಹೊಸ ತಂಡಗಳ ಹರಾಜು ದಿನಾಂಕವನ್ನು ಬಿಸಿಸಿಐ ಇನ್ನೂ ಘೋಷಿಸಿಲ್ಲ.

ಲಕ್ನೋ, ರಾಂಚಿ, ಧರ್ಮಶಾಲಾ ನಗರಗಳು ಹೆಚ್ಚು ಹಿಂದಿ ಮಾತನಾಡುವ ಪ್ರದೇಶಗಳಾಗಿದ್ದು, ಹೀಗಾಗಿ ಇದೇ ನಗರಗಳ ಸ್ಟೇಡಿಯಂಗಳನ್ನು ಆಯ್ಕೆ ಮಾಡಿ ಐಪಿಎಲ್​ ವೀಕ್ಷಕರ ಹಾಗೂ ಪ್ರೇಕ್ಷಕರನ್ನು ಹೆಚ್ಚಿಸಲು ಬಿಸಿಸಿಐ ಪ್ಲ್ಯಾನ್ ಮಾಡಿಕೊಂಡಿದೆ ಎಂದು ಹೇಳಲಾಗಿದೆ. ಇನ್ನು ಎರಡು ಹೊಸ ತಂಡಗಳ ಹರಾಜು ದಿನಾಂಕವನ್ನು ಬಿಸಿಸಿಐ ಇನ್ನೂ ಘೋಷಿಸಿಲ್ಲ.

5 / 6
ಇದಾಗ್ಯೂ ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಅದರಂತೆ ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ.

ಇದಾಗ್ಯೂ ಹೊಸ ಎರಡು ತಂಡಗಳ ಹರಾಜಿಗಾಗಿ ಬಿಸಿಸಿಐ ಮೂಲ ಬೆಲೆ ನಿಗದಿಪಡಿಸಿದ್ದು, ಅದರಂತೆ ಒಂದು ತಂಡದ ಬೆಲೆ 2 ಸಾವಿರ ರೂ. ಕೋಟಿ ಆಗಿರಲಿದೆ. ಅದರಂತೆ ಎರಡು ತಂಡಗಳ ಹರಾಜಿನ ಮೂಲಕ ಬಿಸಿಸಿಐ ಬರೋಬ್ಬರಿ 5 ಸಾವಿರ ರೂ. ಕೋಟಿ ಆದಾಯಗಳಿಸುವ ಇರಾದೆಯಲ್ಲಿದೆ.

6 / 6

Published On - 5:39 pm, Tue, 31 August 21

Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ