AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡಕ್ಕೆ ಬಿಗ್ ಶಾಕ್: ತಂಡದ ಸ್ಟಾರ್ ಆಟಗಾರ ಔಟ್..?

IPL 2022: ಈ ಬಾರಿಯ ಮೆಗಾ ಹರಾಜಿನ 2ನೇ ದುಬಾರಿ ಆಟಗಾರರಾಗಿದ್ದರು. ಇದೀಗ ಟೂರ್ನಿ ಆರಂಭಕ್ಕೂ ಮುನ್ನವೇ ಗಾಯಗೊಂಡಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

TV9 Web
| Edited By: |

Updated on:Mar 02, 2022 | 6:44 PM

Share
ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ತಂಡದಿಂದ ಹೊರಬೀಳುವ ಆಘಾತ ಸುದ್ದಿಯೊಂದು ಹೊರಬಿದ್ದಿದೆ.

ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ತಂಡದಿಂದ ಹೊರಬೀಳುವ ಆಘಾತ ಸುದ್ದಿಯೊಂದು ಹೊರಬಿದ್ದಿದೆ.

1 / 5
ಹೌದು, ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುತ್ತಿದ್ದ ವೇಳೆ ಸ್ನಾಯು ಸೆಳೆತಕ್ಕೊಳಗಾದ ಚಹರ್ ಆ ಬಳಿಕ ಮೈದಾನ ತೊರೆದಿದ್ದರು. ಅಷ್ಟೇ ಅಲ್ಲದೆ ಗಾಯದ ಕಾರಣ ಶ್ರೀಲಂಕಾ ವಿರುದ್ದದ ಸರಣಿಯಿಂದ ಕೂಡ ಹೊರಗುಳಿದಿದ್ದರು.

ಹೌದು, ವೆಸ್ಟ್ ಇಂಡೀಸ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ದೀಪಕ್ ಚಹರ್ ಗಾಯಗೊಂಡಿದ್ದರು. ಬೌಲಿಂಗ್ ಮಾಡುತ್ತಿದ್ದ ವೇಳೆ ಸ್ನಾಯು ಸೆಳೆತಕ್ಕೊಳಗಾದ ಚಹರ್ ಆ ಬಳಿಕ ಮೈದಾನ ತೊರೆದಿದ್ದರು. ಅಷ್ಟೇ ಅಲ್ಲದೆ ಗಾಯದ ಕಾರಣ ಶ್ರೀಲಂಕಾ ವಿರುದ್ದದ ಸರಣಿಯಿಂದ ಕೂಡ ಹೊರಗುಳಿದಿದ್ದರು.

2 / 5
ಇದೀಗ ದೀಪಕ್ ಚಹರ್ ಕ್ವಾಡ್ರೈಸ್ಪ್ಸ್ ಸ್ನಾಯು (ಎಲುಬಿನ ಮುಂಭಾಗದ 4 ಸ್ನಾಯುಗಳ ಗುಂಪು) ಸೆಳೆತಕ್ಕೆ ಒಳಗಾಗಿರುವುದು ಖಚಿತವಾಗಿದೆ. ಸಾಮಾನ್ಯವಾಗಿ ಈ ಸಮಸ್ಯೆ ಕಾಣಿಸಿಕೊಂಡರೆ ಚೇತರಿಸಿಕೊಳ್ಳಲು ಕೆಲ ವಾರಗಳೇ ತೆಗೆದುಕೊಳ್ಳುತ್ತವೆ. ಹೀಗಾಗಿ ಹೆಚ್ಚಿನ ವಿಶ್ರಾಂತಿ ಪಡೆಯಬೇಕಾಗುತ್ತದೆ. ಅತ್ತ ಮಾರ್ಚ್ 26 ರಿಂದ ಐಪಿಎಲ್ ಶುರುವಾಗಲಿದೆ. ಇದರೊಳಗೆ ದೀಪಕ್ ಚಹರ್ ಚೇತರಿಸಿಕೊಂಡರೆ ಮಾತ್ರ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೀಗ ದೀಪಕ್ ಚಹರ್ ಕ್ವಾಡ್ರೈಸ್ಪ್ಸ್ ಸ್ನಾಯು (ಎಲುಬಿನ ಮುಂಭಾಗದ 4 ಸ್ನಾಯುಗಳ ಗುಂಪು) ಸೆಳೆತಕ್ಕೆ ಒಳಗಾಗಿರುವುದು ಖಚಿತವಾಗಿದೆ. ಸಾಮಾನ್ಯವಾಗಿ ಈ ಸಮಸ್ಯೆ ಕಾಣಿಸಿಕೊಂಡರೆ ಚೇತರಿಸಿಕೊಳ್ಳಲು ಕೆಲ ವಾರಗಳೇ ತೆಗೆದುಕೊಳ್ಳುತ್ತವೆ. ಹೀಗಾಗಿ ಹೆಚ್ಚಿನ ವಿಶ್ರಾಂತಿ ಪಡೆಯಬೇಕಾಗುತ್ತದೆ. ಅತ್ತ ಮಾರ್ಚ್ 26 ರಿಂದ ಐಪಿಎಲ್ ಶುರುವಾಗಲಿದೆ. ಇದರೊಳಗೆ ದೀಪಕ್ ಚಹರ್ ಚೇತರಿಸಿಕೊಂಡರೆ ಮಾತ್ರ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

3 / 5
ಆದರೆ ಕ್ರಿಕ್​ಇನ್​ಫೋ ಮಾಹಿತಿ ಪ್ರಕಾರ ಐಪಿಎಲ್​ ಆರಂಭದ ವೇಳೆಗೆ  ದೀಪಕ್ ಚಹರ್ ಗುಣಮುಖರಾಗುವುದು ಕೂಡ ಅನುಮಾನ. ಹೀಗಾಗಿ ಸಿಎಸ್​ಕೆ ತಂಡದ ಆರಂಭಿಕ ಪಂದ್ಯಗಳಿಂದ ಚಹರ್ ಹೊರಗುಳಿಯುವುದು ಖಚಿತವಾಗಿದೆ. ಅಷ್ಟೇ ಅಲ್ಲದೆ ಗಾಯದ ಗಂಭೀರತೆಯ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದ್ದು, ಒಂದು ವೇಳೆ ಗಾಯ ಗಂಭೀರವಾಗಿದ್ದರೆ ಇಡೀ ಐಪಿಎಲ್ ಟೂರ್ನಿಯನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಆದರೆ ಕ್ರಿಕ್​ಇನ್​ಫೋ ಮಾಹಿತಿ ಪ್ರಕಾರ ಐಪಿಎಲ್​ ಆರಂಭದ ವೇಳೆಗೆ ದೀಪಕ್ ಚಹರ್ ಗುಣಮುಖರಾಗುವುದು ಕೂಡ ಅನುಮಾನ. ಹೀಗಾಗಿ ಸಿಎಸ್​ಕೆ ತಂಡದ ಆರಂಭಿಕ ಪಂದ್ಯಗಳಿಂದ ಚಹರ್ ಹೊರಗುಳಿಯುವುದು ಖಚಿತವಾಗಿದೆ. ಅಷ್ಟೇ ಅಲ್ಲದೆ ಗಾಯದ ಗಂಭೀರತೆಯ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದ್ದು, ಒಂದು ವೇಳೆ ಗಾಯ ಗಂಭೀರವಾಗಿದ್ದರೆ ಇಡೀ ಐಪಿಎಲ್ ಟೂರ್ನಿಯನ್ನು ಮಿಸ್ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

4 / 5
ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು. ಆಲ್​​ರೌಂಡರ್ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಚಹರ್ ಈ ಬಾರಿಯ ಮೆಗಾ ಹರಾಜಿನ 2ನೇ ದುಬಾರಿ ಆಟಗಾರರಾಗಿದ್ದರು. ಇದೀಗ ಟೂರ್ನಿ ಆರಂಭಕ್ಕೂ ಮುನ್ನವೇ ಗಾಯಗೊಂಡಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಈ ಬಾರಿಯ ಮೆಗಾ ಹರಾಜಿನಲ್ಲಿ ದೀಪಕ್ ಚಹರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್​ ಬರೋಬ್ಬರಿ 14 ಕೋಟಿ ರೂ. ನೀಡಿ ಮತ್ತೆ ಖರೀದಿಸಿತ್ತು. ಆಲ್​​ರೌಂಡರ್ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಚಹರ್ ಈ ಬಾರಿಯ ಮೆಗಾ ಹರಾಜಿನ 2ನೇ ದುಬಾರಿ ಆಟಗಾರರಾಗಿದ್ದರು. ಇದೀಗ ಟೂರ್ನಿ ಆರಂಭಕ್ಕೂ ಮುನ್ನವೇ ಗಾಯಗೊಂಡಿರುವುದು ಸಿಎಸ್​ಕೆ ತಂಡದ ಚಿಂತೆಯನ್ನು ಹೆಚ್ಚಿಸಿದೆ.

5 / 5

Published On - 5:51 pm, Wed, 2 March 22

Follow Us
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ