AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಮುಂದೆ ಮಂಕಾದ ಚೆನ್ನೈ; ಐಪಿಎಲ್ ಇತಿಹಾಸದಲ್ಲಿ 2ನೇ ಬಾರಿಗೆ ಕೆಟ್ಟ ದಾಖಲೆ ಬರೆದ ಧೋನಿ ಬಳಗ

IPL 2022: ಐಪಿಎಲ್‌ನಲ್ಲಿ ಚೆನ್ನೈನ ಅತ್ಯಂತ ಕಡಿಮೆ ಸ್ಕೋರ್ 79 ಆಗಿದ್ದು, ಈ ಸ್ಕೋರ್ ಕೂಡ ಮುಂಬೈ ವಿರುದ್ಧವೇ ಬಂದಿದೆ. ಮುಂಬೈ 2013ರ ಮೇ 5ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ತಂಡವನ್ನು 80 ರನ್‌ಗಳಿಂದ ಸೋಲಿಸಿತ್ತು.

ಪೃಥ್ವಿಶಂಕರ
|

Updated on:May 12, 2022 | 11:12 PM

Share
ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿ ಗೆದ್ದಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಈ ತಂಡವು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವೆಂದು ಪರಿಗಣಿಸಲ್ಪಟ್ಟಿದೆ. ಆದರೆ ಈ ತಂಡಕ್ಕೆ ಐಪಿಎಲ್ 2022 ಉತ್ತಮವಾಗಿಲ್ಲ. ಪ್ರಸಕ್ತ ಋತುವಿನಲ್ಲಿ ಪ್ಲೇಆಫ್‌ ರೇಸ್‌ನಲ್ಲಿ ಉಳಿಯಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋಲನುಭವಿಸಿ ಪಂದ್ಯಾವಳಿಯಿಂದ ಹೊರಬಿದ್ದಿದೆ.

1 / 5
ಮುಂಬೈ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಜೊತೆಗೆ ಮೊದಲ ಎಸೆತದಲ್ಲೇ ಚೆನ್ನೈಗೆ ತೊಂದರೆ ನೀಡಿದರು. ಇದರೊಂದಿಗೆ ಚೆನ್ನೈಗೆ 100 ರನ್ ಗಳಿಸಲೂ ಸಹ ಮುಂಬೈ ಅವಕಾಶ ನೀಡಲಿಲ್ಲ. ಚೆನ್ನೈ ತಂಡ 16 ಓವರ್‌ಗಳಲ್ಲಿ ಕೇವಲ 97 ರನ್‌ಗಳಿಗೆ ಆಲೌಟಾಯಿತು. ಇದು ಐಪಿಎಲ್‌ನಲ್ಲಿ ಚೆನ್ನೈನ ಎರಡನೇ ಅತಿ ಕಡಿಮೆ ಸ್ಕೋರ್ ಆಗಿದೆ.

2 / 5
ಐಪಿಎಲ್‌ನಲ್ಲಿ ಚೆನ್ನೈನ ಅತ್ಯಂತ ಕಡಿಮೆ ಸ್ಕೋರ್ 79 ಆಗಿದ್ದು, ಈ ಸ್ಕೋರ್ ಕೂಡ ಮುಂಬೈ ವಿರುದ್ಧವೇ ಬಂದಿದೆ. ಮುಂಬೈ 2013ರ ಮೇ 5ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ತಂಡವನ್ನು 80 ರನ್‌ಗಳಿಂದ ಸೋಲಿಸಿತ್ತು. ಆದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 139 ರನ್ ಗಳಿಸಿತು. ಈ ಪಂದ್ಯವನ್ನು ಮುಂಬೈ 60 ರನ್‌ಗಳಿಂದ ಗೆದ್ದುಕೊಂಡಿತು.

3 / 5
ಐಪಿಎಲ್‌ನಲ್ಲಿ ಚೆನ್ನೈನ ಮೂರನೇ ಅತಿ ಕಡಿಮೆ ಸ್ಕೋರ್ 109 ರನ್, ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧ 2008 ರಂದು ಈ ಕಳಪೆ ಆಟ ಪ್ರದರ್ಶಿಸಿದ್ದರು. ಮುಂಬೈ 26 ಏಪ್ರಿಲ್ 2019 ರಂದು ಚೆನ್ನೈ ಅನ್ನು 109 ರನ್‌ಗಳಿಗೆ ಆಲ್​ಔಟ್ ಮಾಡಿತ್ತು.

4 / 5
ಗುರುವಾರ ಚೆನ್ನೈ ಪರ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಉಳಿಸಲು ಸಾಕಷ್ಟು ಪ್ರಯತ್ನಿಸಿದರು ಆದರೆ ಅವರಿಗೆ ಇನ್ನೊಂದು ತುದಿಯಿಂದ ಬೆಂಬಲ ಸಿಗಲಿಲ್ಲ. ಚೆನ್ನೈ ಪರ ಧೋನಿ ಅಜೇಯ 36 ರನ್ ಗಳಿಸಿದರು. ತಂಡದ ನಾಲ್ವರು ಬ್ಯಾಟ್ಸ್‌ಮನ್‌ಗಳು ಮಾತ್ರ ಎರಡಂಕಿ ದಾಟಲು ಸಾಧ್ಯವಾಯಿತು. ಡ್ವೇನ್ ಬ್ರಾವೋ 12 ರನ್ ಗಳಿಸಿದರು. ಶಿವಂ ದುಬೆ ಮತ್ತು ಅಂಬಟಿ ರಾಯುಡು ತಲಾ 10 ರನ್‌ಗಳ ಕಾಣಿಕೆ ನೀಡಿದರು.

5 / 5

Published On - 11:03 pm, Thu, 12 May 22

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?