AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಮುಂದೆ ಮಂಕಾದ ಚೆನ್ನೈ; ಐಪಿಎಲ್ ಇತಿಹಾಸದಲ್ಲಿ 2ನೇ ಬಾರಿಗೆ ಕೆಟ್ಟ ದಾಖಲೆ ಬರೆದ ಧೋನಿ ಬಳಗ

IPL 2022: ಐಪಿಎಲ್‌ನಲ್ಲಿ ಚೆನ್ನೈನ ಅತ್ಯಂತ ಕಡಿಮೆ ಸ್ಕೋರ್ 79 ಆಗಿದ್ದು, ಈ ಸ್ಕೋರ್ ಕೂಡ ಮುಂಬೈ ವಿರುದ್ಧವೇ ಬಂದಿದೆ. ಮುಂಬೈ 2013ರ ಮೇ 5ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ತಂಡವನ್ನು 80 ರನ್‌ಗಳಿಂದ ಸೋಲಿಸಿತ್ತು.

ಪೃಥ್ವಿಶಂಕರ
|

Updated on:May 12, 2022 | 11:12 PM

Share
ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿ ಗೆದ್ದಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಈ ತಂಡವು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವೆಂದು ಪರಿಗಣಿಸಲ್ಪಟ್ಟಿದೆ. ಆದರೆ ಈ ತಂಡಕ್ಕೆ ಐಪಿಎಲ್ 2022 ಉತ್ತಮವಾಗಿಲ್ಲ. ಪ್ರಸಕ್ತ ಋತುವಿನಲ್ಲಿ ಪ್ಲೇಆಫ್‌ ರೇಸ್‌ನಲ್ಲಿ ಉಳಿಯಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋಲನುಭವಿಸಿ ಪಂದ್ಯಾವಳಿಯಿಂದ ಹೊರಬಿದ್ದಿದೆ.

1 / 5
ಮುಂಬೈ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಜೊತೆಗೆ ಮೊದಲ ಎಸೆತದಲ್ಲೇ ಚೆನ್ನೈಗೆ ತೊಂದರೆ ನೀಡಿದರು. ಇದರೊಂದಿಗೆ ಚೆನ್ನೈಗೆ 100 ರನ್ ಗಳಿಸಲೂ ಸಹ ಮುಂಬೈ ಅವಕಾಶ ನೀಡಲಿಲ್ಲ. ಚೆನ್ನೈ ತಂಡ 16 ಓವರ್‌ಗಳಲ್ಲಿ ಕೇವಲ 97 ರನ್‌ಗಳಿಗೆ ಆಲೌಟಾಯಿತು. ಇದು ಐಪಿಎಲ್‌ನಲ್ಲಿ ಚೆನ್ನೈನ ಎರಡನೇ ಅತಿ ಕಡಿಮೆ ಸ್ಕೋರ್ ಆಗಿದೆ.

2 / 5
ಐಪಿಎಲ್‌ನಲ್ಲಿ ಚೆನ್ನೈನ ಅತ್ಯಂತ ಕಡಿಮೆ ಸ್ಕೋರ್ 79 ಆಗಿದ್ದು, ಈ ಸ್ಕೋರ್ ಕೂಡ ಮುಂಬೈ ವಿರುದ್ಧವೇ ಬಂದಿದೆ. ಮುಂಬೈ 2013ರ ಮೇ 5ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ತಂಡವನ್ನು 80 ರನ್‌ಗಳಿಂದ ಸೋಲಿಸಿತ್ತು. ಆದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 139 ರನ್ ಗಳಿಸಿತು. ಈ ಪಂದ್ಯವನ್ನು ಮುಂಬೈ 60 ರನ್‌ಗಳಿಂದ ಗೆದ್ದುಕೊಂಡಿತು.

3 / 5
ಐಪಿಎಲ್‌ನಲ್ಲಿ ಚೆನ್ನೈನ ಮೂರನೇ ಅತಿ ಕಡಿಮೆ ಸ್ಕೋರ್ 109 ರನ್, ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧ 2008 ರಂದು ಈ ಕಳಪೆ ಆಟ ಪ್ರದರ್ಶಿಸಿದ್ದರು. ಮುಂಬೈ 26 ಏಪ್ರಿಲ್ 2019 ರಂದು ಚೆನ್ನೈ ಅನ್ನು 109 ರನ್‌ಗಳಿಗೆ ಆಲ್​ಔಟ್ ಮಾಡಿತ್ತು.

4 / 5
ಗುರುವಾರ ಚೆನ್ನೈ ಪರ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಉಳಿಸಲು ಸಾಕಷ್ಟು ಪ್ರಯತ್ನಿಸಿದರು ಆದರೆ ಅವರಿಗೆ ಇನ್ನೊಂದು ತುದಿಯಿಂದ ಬೆಂಬಲ ಸಿಗಲಿಲ್ಲ. ಚೆನ್ನೈ ಪರ ಧೋನಿ ಅಜೇಯ 36 ರನ್ ಗಳಿಸಿದರು. ತಂಡದ ನಾಲ್ವರು ಬ್ಯಾಟ್ಸ್‌ಮನ್‌ಗಳು ಮಾತ್ರ ಎರಡಂಕಿ ದಾಟಲು ಸಾಧ್ಯವಾಯಿತು. ಡ್ವೇನ್ ಬ್ರಾವೋ 12 ರನ್ ಗಳಿಸಿದರು. ಶಿವಂ ದುಬೆ ಮತ್ತು ಅಂಬಟಿ ರಾಯುಡು ತಲಾ 10 ರನ್‌ಗಳ ಕಾಣಿಕೆ ನೀಡಿದರು.

5 / 5

Published On - 11:03 pm, Thu, 12 May 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ