IPL 2022: ಮುಂಬೈ ಮುಂದೆ ಮಂಕಾದ ಚೆನ್ನೈ; ಐಪಿಎಲ್ ಇತಿಹಾಸದಲ್ಲಿ 2ನೇ ಬಾರಿಗೆ ಕೆಟ್ಟ ದಾಖಲೆ ಬರೆದ ಧೋನಿ ಬಳಗ

IPL 2022: ಐಪಿಎಲ್‌ನಲ್ಲಿ ಚೆನ್ನೈನ ಅತ್ಯಂತ ಕಡಿಮೆ ಸ್ಕೋರ್ 79 ಆಗಿದ್ದು, ಈ ಸ್ಕೋರ್ ಕೂಡ ಮುಂಬೈ ವಿರುದ್ಧವೇ ಬಂದಿದೆ. ಮುಂಬೈ 2013ರ ಮೇ 5ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ತಂಡವನ್ನು 80 ರನ್‌ಗಳಿಂದ ಸೋಲಿಸಿತ್ತು.

|

Updated on:May 12, 2022 | 11:12 PM

ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿ ಗೆದ್ದಿದೆ. ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಈ ತಂಡವು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡವೆಂದು ಪರಿಗಣಿಸಲ್ಪಟ್ಟಿದೆ. ಆದರೆ ಈ ತಂಡಕ್ಕೆ ಐಪಿಎಲ್ 2022 ಉತ್ತಮವಾಗಿಲ್ಲ. ಪ್ರಸಕ್ತ ಋತುವಿನಲ್ಲಿ ಪ್ಲೇಆಫ್‌ ರೇಸ್‌ನಲ್ಲಿ ಉಳಿಯಲು ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋಲನುಭವಿಸಿ ಪಂದ್ಯಾವಳಿಯಿಂದ ಹೊರಬಿದ್ದಿದೆ.

1 / 5
ಮುಂಬೈ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಜೊತೆಗೆ ಮೊದಲ ಎಸೆತದಲ್ಲೇ ಚೆನ್ನೈಗೆ ತೊಂದರೆ ನೀಡಿದರು. ಇದರೊಂದಿಗೆ ಚೆನ್ನೈಗೆ 100 ರನ್ ಗಳಿಸಲೂ ಸಹ ಮುಂಬೈ ಅವಕಾಶ ನೀಡಲಿಲ್ಲ. ಚೆನ್ನೈ ತಂಡ 16 ಓವರ್‌ಗಳಲ್ಲಿ ಕೇವಲ 97 ರನ್‌ಗಳಿಗೆ ಆಲೌಟಾಯಿತು. ಇದು ಐಪಿಎಲ್‌ನಲ್ಲಿ ಚೆನ್ನೈನ ಎರಡನೇ ಅತಿ ಕಡಿಮೆ ಸ್ಕೋರ್ ಆಗಿದೆ.

2 / 5
ಐಪಿಎಲ್‌ನಲ್ಲಿ ಚೆನ್ನೈನ ಅತ್ಯಂತ ಕಡಿಮೆ ಸ್ಕೋರ್ 79 ಆಗಿದ್ದು, ಈ ಸ್ಕೋರ್ ಕೂಡ ಮುಂಬೈ ವಿರುದ್ಧವೇ ಬಂದಿದೆ. ಮುಂಬೈ 2013ರ ಮೇ 5ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ತಂಡವನ್ನು 80 ರನ್‌ಗಳಿಂದ ಸೋಲಿಸಿತ್ತು. ಆದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 139 ರನ್ ಗಳಿಸಿತು. ಈ ಪಂದ್ಯವನ್ನು ಮುಂಬೈ 60 ರನ್‌ಗಳಿಂದ ಗೆದ್ದುಕೊಂಡಿತು.

3 / 5
ಐಪಿಎಲ್‌ನಲ್ಲಿ ಚೆನ್ನೈನ ಮೂರನೇ ಅತಿ ಕಡಿಮೆ ಸ್ಕೋರ್ 109 ರನ್, ಅವರು ರಾಜಸ್ಥಾನ್ ರಾಯಲ್ಸ್ ವಿರುದ್ಧ 2008 ರಂದು ಈ ಕಳಪೆ ಆಟ ಪ್ರದರ್ಶಿಸಿದ್ದರು. ಮುಂಬೈ 26 ಏಪ್ರಿಲ್ 2019 ರಂದು ಚೆನ್ನೈ ಅನ್ನು 109 ರನ್‌ಗಳಿಗೆ ಆಲ್​ಔಟ್ ಮಾಡಿತ್ತು.

4 / 5
ಗುರುವಾರ ಚೆನ್ನೈ ಪರ ಮಹೇಂದ್ರ ಸಿಂಗ್ ಧೋನಿ ತಂಡವನ್ನು ಉಳಿಸಲು ಸಾಕಷ್ಟು ಪ್ರಯತ್ನಿಸಿದರು ಆದರೆ ಅವರಿಗೆ ಇನ್ನೊಂದು ತುದಿಯಿಂದ ಬೆಂಬಲ ಸಿಗಲಿಲ್ಲ. ಚೆನ್ನೈ ಪರ ಧೋನಿ ಅಜೇಯ 36 ರನ್ ಗಳಿಸಿದರು. ತಂಡದ ನಾಲ್ವರು ಬ್ಯಾಟ್ಸ್‌ಮನ್‌ಗಳು ಮಾತ್ರ ಎರಡಂಕಿ ದಾಟಲು ಸಾಧ್ಯವಾಯಿತು. ಡ್ವೇನ್ ಬ್ರಾವೋ 12 ರನ್ ಗಳಿಸಿದರು. ಶಿವಂ ದುಬೆ ಮತ್ತು ಅಂಬಟಿ ರಾಯುಡು ತಲಾ 10 ರನ್‌ಗಳ ಕಾಣಿಕೆ ನೀಡಿದರು.

5 / 5

Published On - 11:03 pm, Thu, 12 May 22

Follow us
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್