AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಈ ನಾಲ್ವರನ್ನು ಉಳಿಸಿಕೊಳ್ಳಬೇಕೆಂದ ಮಾಜಿ ಆರ್​ಸಿಬಿ ನಾಯಕ

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Edited By: |

Updated on: Nov 27, 2021 | 10:24 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಿಟೈನ್ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಈ ಬಾರಿ ಹೊಸ ಎರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಎಲ್ಲಾ ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅದರಂತೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಿಟೈನ್ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಈ ಬಾರಿ ಹೊಸ ಎರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಎಲ್ಲಾ ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅದರಂತೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

1 / 6
ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡೆ ಇನ್ನೂ ಕೂಡ ನಿಗೂಢವಾಗಿದೆ. ಇದಾಗ್ಯೂ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಆರ್​ಸಿಬಿ ಉಳಿಸಿಕೊಳ್ಳುವ ಉಳಿದ ಆಟಗಾರರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಇಂತಹದೊಂದು ಪ್ರಶ್ನೆಗೆ ಆರ್​ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡ ಉಳಿಸಿಕೊಳ್ಳಲೇಬೇಕಾದ ನಾಲ್ವರು ಆಟಗಾರರನ್ನೂ ಕೂಡ ಹೆಸರಿಸಿದ್ದಾರೆ.

ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡೆ ಇನ್ನೂ ಕೂಡ ನಿಗೂಢವಾಗಿದೆ. ಇದಾಗ್ಯೂ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಆರ್​ಸಿಬಿ ಉಳಿಸಿಕೊಳ್ಳುವ ಉಳಿದ ಆಟಗಾರರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಇಂತಹದೊಂದು ಪ್ರಶ್ನೆಗೆ ಆರ್​ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡ ಉಳಿಸಿಕೊಳ್ಳಲೇಬೇಕಾದ ನಾಲ್ವರು ಆಟಗಾರರನ್ನೂ ಕೂಡ ಹೆಸರಿಸಿದ್ದಾರೆ.

2 / 6
 ಈ ಬಗ್ಗೆ ಮಾತನಾಡಿರುವ ವೆಟ್ಟೋರಿ, ಈ ಬಾರಿ ಎಬಿ ಡಿವಿಲಿಯರ್ಸ್​ ತಂಡದಲ್ಲಿಲ್ಲ. ಎಬಿಡಿ ನಿವೃತ್ತಿ ಘೋಷಿಸಿರುವ ಕಾರಣ ಆರ್​ಸಿಬಿಗೆ ರಿಟೈನ್ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ. ಇಲ್ಲದಿದ್ದರೆ ಅವರಿಗೂ ಸ್ಥಾನ ನೀಡಲೇಬೇಕಿತ್ತು. ಆದರೀಗ ಅವರಿಲ್ಲದ ಕಾರಣ, ನಾಲ್ವರ ಆಯ್ಕೆ ಸುಲಭವಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ವೆಟ್ಟೋರಿ, ಈ ಬಾರಿ ಎಬಿ ಡಿವಿಲಿಯರ್ಸ್​ ತಂಡದಲ್ಲಿಲ್ಲ. ಎಬಿಡಿ ನಿವೃತ್ತಿ ಘೋಷಿಸಿರುವ ಕಾರಣ ಆರ್​ಸಿಬಿಗೆ ರಿಟೈನ್ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ. ಇಲ್ಲದಿದ್ದರೆ ಅವರಿಗೂ ಸ್ಥಾನ ನೀಡಲೇಬೇಕಿತ್ತು. ಆದರೀಗ ಅವರಿಲ್ಲದ ಕಾರಣ, ನಾಲ್ವರ ಆಯ್ಕೆ ಸುಲಭವಾಗಿದೆ ಎಂದು ತಿಳಿಸಿದ್ದಾರೆ.

3 / 6
 ಅದರಂತೆ ಆರ್​ಸಿಬಿ ತಂಡವು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲಿದೆ. ಅವರ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಬೇಕು ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಅದರಂತೆ ಆರ್​ಸಿಬಿ ತಂಡವು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲಿದೆ. ಅವರ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಬೇಕು ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

4 / 6
ಇನ್ನು 3ನೇ ಆಟಗಾರನಾಗಿ ನನ್ನ ಪ್ರಕಾರ, ಯುಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಬೇಕು. ಏಕೆಂದರೆ 2014 ರಿಂದ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದಿದ್ದಾರೆ ವೆಟ್ಟೋರಿ.

ಇನ್ನು 3ನೇ ಆಟಗಾರನಾಗಿ ನನ್ನ ಪ್ರಕಾರ, ಯುಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಬೇಕು. ಏಕೆಂದರೆ 2014 ರಿಂದ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದಿದ್ದಾರೆ ವೆಟ್ಟೋರಿ.

5 / 6
ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಹರ್ಷಲ್ ಪಟೇಲ್ ಅವರನ್ನು ತಂಡದಲ್ಲಿರಿಸಿಕೊಳ್ಳುವುದು ಉತ್ತಮ ಎಂದು ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ. ಹರ್ಷಲ್ ಕಳೆದ ಸೀಸನ್​ನಲ್ಲಿನ ಅತ್ಯಂತ ಯಶಸ್ವಿ ಬೌಲರ್. 32 ವಿಕೆಟ್ ಪಡೆದಿರುವ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ.

ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಹರ್ಷಲ್ ಪಟೇಲ್ ಅವರನ್ನು ತಂಡದಲ್ಲಿರಿಸಿಕೊಳ್ಳುವುದು ಉತ್ತಮ ಎಂದು ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ. ಹರ್ಷಲ್ ಕಳೆದ ಸೀಸನ್​ನಲ್ಲಿನ ಅತ್ಯಂತ ಯಶಸ್ವಿ ಬೌಲರ್. 32 ವಿಕೆಟ್ ಪಡೆದಿರುವ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ.

6 / 6
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!