AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಈ ನಾಲ್ವರನ್ನು ಉಳಿಸಿಕೊಳ್ಳಬೇಕೆಂದ ಮಾಜಿ ಆರ್​ಸಿಬಿ ನಾಯಕ

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Edited By: |

Updated on: Nov 27, 2021 | 10:24 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಿಟೈನ್ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಈ ಬಾರಿ ಹೊಸ ಎರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಎಲ್ಲಾ ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅದರಂತೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಿಟೈನ್ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಈ ಬಾರಿ ಹೊಸ ಎರಡು ತಂಡಗಳು ಸೇರ್ಪಡೆಯಾಗುತ್ತಿರುವ ಕಾರಣ ಎಲ್ಲಾ ಫ್ರಾಂಚೈಸಿಗಳು ಅಳೆದು ತೂಗಿ ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅದರಂತೆ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಗರಿಷ್ಠ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

1 / 6
ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡೆ ಇನ್ನೂ ಕೂಡ ನಿಗೂಢವಾಗಿದೆ. ಇದಾಗ್ಯೂ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಆರ್​ಸಿಬಿ ಉಳಿಸಿಕೊಳ್ಳುವ ಉಳಿದ ಆಟಗಾರರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಇಂತಹದೊಂದು ಪ್ರಶ್ನೆಗೆ ಆರ್​ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡ ಉಳಿಸಿಕೊಳ್ಳಲೇಬೇಕಾದ ನಾಲ್ವರು ಆಟಗಾರರನ್ನೂ ಕೂಡ ಹೆಸರಿಸಿದ್ದಾರೆ.

ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡೆ ಇನ್ನೂ ಕೂಡ ನಿಗೂಢವಾಗಿದೆ. ಇದಾಗ್ಯೂ ಆರ್​ಸಿಬಿ ವಿರಾಟ್ ಕೊಹ್ಲಿ ಹಾಗೂ ಗ್ಲೆನ್​ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಆದರೆ ಆರ್​ಸಿಬಿ ಉಳಿಸಿಕೊಳ್ಳುವ ಉಳಿದ ಆಟಗಾರರು ಯಾರು ಎಂಬ ಪ್ರಶ್ನೆ ಎಲ್ಲರಲ್ಲಿದೆ. ಇಂತಹದೊಂದು ಪ್ರಶ್ನೆಗೆ ಆರ್​ಸಿಬಿ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ಉತ್ತರ ನೀಡಿದ್ದಾರೆ. ಅಷ್ಟೇ ಅಲ್ಲದೆ ಆರ್​ಸಿಬಿ ತಂಡ ಉಳಿಸಿಕೊಳ್ಳಲೇಬೇಕಾದ ನಾಲ್ವರು ಆಟಗಾರರನ್ನೂ ಕೂಡ ಹೆಸರಿಸಿದ್ದಾರೆ.

2 / 6
 ಈ ಬಗ್ಗೆ ಮಾತನಾಡಿರುವ ವೆಟ್ಟೋರಿ, ಈ ಬಾರಿ ಎಬಿ ಡಿವಿಲಿಯರ್ಸ್​ ತಂಡದಲ್ಲಿಲ್ಲ. ಎಬಿಡಿ ನಿವೃತ್ತಿ ಘೋಷಿಸಿರುವ ಕಾರಣ ಆರ್​ಸಿಬಿಗೆ ರಿಟೈನ್ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ. ಇಲ್ಲದಿದ್ದರೆ ಅವರಿಗೂ ಸ್ಥಾನ ನೀಡಲೇಬೇಕಿತ್ತು. ಆದರೀಗ ಅವರಿಲ್ಲದ ಕಾರಣ, ನಾಲ್ವರ ಆಯ್ಕೆ ಸುಲಭವಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ವೆಟ್ಟೋರಿ, ಈ ಬಾರಿ ಎಬಿ ಡಿವಿಲಿಯರ್ಸ್​ ತಂಡದಲ್ಲಿಲ್ಲ. ಎಬಿಡಿ ನಿವೃತ್ತಿ ಘೋಷಿಸಿರುವ ಕಾರಣ ಆರ್​ಸಿಬಿಗೆ ರಿಟೈನ್ ಪ್ರಕ್ರಿಯೆ ಮತ್ತಷ್ಟು ಸುಲಭವಾಗಿದೆ. ಇಲ್ಲದಿದ್ದರೆ ಅವರಿಗೂ ಸ್ಥಾನ ನೀಡಲೇಬೇಕಿತ್ತು. ಆದರೀಗ ಅವರಿಲ್ಲದ ಕಾರಣ, ನಾಲ್ವರ ಆಯ್ಕೆ ಸುಲಭವಾಗಿದೆ ಎಂದು ತಿಳಿಸಿದ್ದಾರೆ.

3 / 6
 ಅದರಂತೆ ಆರ್​ಸಿಬಿ ತಂಡವು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲಿದೆ. ಅವರ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಬೇಕು ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

ಅದರಂತೆ ಆರ್​ಸಿಬಿ ತಂಡವು ಮೊದಲ ಆಯ್ಕೆಯಾಗಿ ವಿರಾಟ್ ಕೊಹ್ಲಿಯನ್ನು ಉಳಿಸಿಕೊಳ್ಳಲಿದೆ. ಅವರ ಜೊತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಬೇಕು ಎಂದು ಡೇನಿಯಲ್ ವೆಟ್ಟೋರಿ ಹೇಳಿದ್ದಾರೆ.

4 / 6
ಇನ್ನು 3ನೇ ಆಟಗಾರನಾಗಿ ನನ್ನ ಪ್ರಕಾರ, ಯುಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಬೇಕು. ಏಕೆಂದರೆ 2014 ರಿಂದ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದಿದ್ದಾರೆ ವೆಟ್ಟೋರಿ.

ಇನ್ನು 3ನೇ ಆಟಗಾರನಾಗಿ ನನ್ನ ಪ್ರಕಾರ, ಯುಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಬೇಕು. ಏಕೆಂದರೆ 2014 ರಿಂದ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಹೀಗಾಗಿ ಅವರನ್ನು ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದಿದ್ದಾರೆ ವೆಟ್ಟೋರಿ.

5 / 6
ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಹರ್ಷಲ್ ಪಟೇಲ್ ಅವರನ್ನು ತಂಡದಲ್ಲಿರಿಸಿಕೊಳ್ಳುವುದು ಉತ್ತಮ ಎಂದು ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ. ಹರ್ಷಲ್ ಕಳೆದ ಸೀಸನ್​ನಲ್ಲಿನ ಅತ್ಯಂತ ಯಶಸ್ವಿ ಬೌಲರ್. 32 ವಿಕೆಟ್ ಪಡೆದಿರುವ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ.

ಹಾಗೆಯೇ ನಾಲ್ಕನೇ ಆಯ್ಕೆಯಾಗಿ ಹರ್ಷಲ್ ಪಟೇಲ್ ಅವರನ್ನು ತಂಡದಲ್ಲಿರಿಸಿಕೊಳ್ಳುವುದು ಉತ್ತಮ ಎಂದು ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ. ಹರ್ಷಲ್ ಕಳೆದ ಸೀಸನ್​ನಲ್ಲಿನ ಅತ್ಯಂತ ಯಶಸ್ವಿ ಬೌಲರ್. 32 ವಿಕೆಟ್ ಪಡೆದಿರುವ ಅವರನ್ನು ಆರ್​ಸಿಬಿ ಉಳಿಸಿಕೊಳ್ಳುವುದು ಉತ್ತಮ ಆಯ್ಕೆ ಎಂದು ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ ತಿಳಿಸಿದ್ದಾರೆ.

6 / 6
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ