AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಪರ ಆಡುವ ಸುಳಿವು ನೀಡಿದ್ರಾ ಡೇವಿಡ್ ವಾರ್ನರ್?

IPL 2022 David Warner: ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಿದ್ದ ವಾರ್ನರ್ 2016 ರಲ್ಲಿ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದರು.

TV9 Web
| Edited By: |

Updated on: Dec 08, 2021 | 9:06 PM

Share
ಮುಂದಿನ ಸೀಸನ್​ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಒಂದೆಡೆಯಾದರೆ, ಎಬಿ ಡಿವಿಲಿಯರ್ಸ್ ಸ್ಥಾನದಲ್ಲಿ ಆಯ್ಕೆಯಾಗುವ ಆಟಗಾರ ಯಾರೆಂಬ ಕುತೂಹಲ ಇನ್ನೊಂದೆಡೆ. ಆರ್​ಸಿಬಿ ಫ್ರಾಂಚೈಸಿ ಈ ಎರಡೂ ಸ್ಥಾನಗಳನ್ನು ತುಂಬುವ ಆಟಗಾರನ ಹುಡುಕಾಟದಲ್ಲಿರುವುದಂತು ಸತ್ಯ.

ಮುಂದಿನ ಸೀಸನ್​ ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಒಂದೆಡೆಯಾದರೆ, ಎಬಿ ಡಿವಿಲಿಯರ್ಸ್ ಸ್ಥಾನದಲ್ಲಿ ಆಯ್ಕೆಯಾಗುವ ಆಟಗಾರ ಯಾರೆಂಬ ಕುತೂಹಲ ಇನ್ನೊಂದೆಡೆ. ಆರ್​ಸಿಬಿ ಫ್ರಾಂಚೈಸಿ ಈ ಎರಡೂ ಸ್ಥಾನಗಳನ್ನು ತುಂಬುವ ಆಟಗಾರನ ಹುಡುಕಾಟದಲ್ಲಿರುವುದಂತು ಸತ್ಯ.

1 / 6
ಆದರೆ ಅಂತಹ ಸಮರ್ಥ ಆಟಗಾರ ಯಾರಿದ್ದಾರೆ ಎಂದು ಗಮನಿಸಿದರೆ, ಮೆಗಾ ಹರಾಜು ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಹೆಸರು ಕಾಣ ಸಿಗುತ್ತದೆ. ಆದರೆ ಹರಾಜಿನಲ್ಲಿರುವ ಕಾರಣ ವಾರ್ನರ್ ಅವರನ್ನು ಯಾರು ಬೇಕಾದರೂ ಖರೀದಿಸಬಹುದು. ಇದಾಗ್ಯೂ ವಾರ್ನರ್ ಯಾವ ತಂಡದ ಪರ ಆಡಲು ಬಯಸುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಆದರೆ ಅಂತಹ ಸಮರ್ಥ ಆಟಗಾರ ಯಾರಿದ್ದಾರೆ ಎಂದು ಗಮನಿಸಿದರೆ, ಮೆಗಾ ಹರಾಜು ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಹೆಸರು ಕಾಣ ಸಿಗುತ್ತದೆ. ಆದರೆ ಹರಾಜಿನಲ್ಲಿರುವ ಕಾರಣ ವಾರ್ನರ್ ಅವರನ್ನು ಯಾರು ಬೇಕಾದರೂ ಖರೀದಿಸಬಹುದು. ಇದಾಗ್ಯೂ ವಾರ್ನರ್ ಯಾವ ತಂಡದ ಪರ ಆಡಲು ಬಯಸುತ್ತಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

2 / 6
ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಿದ್ದ ವಾರ್ನರ್ 2016 ರಲ್ಲಿ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದರು. ಇದಾಗ್ಯೂ ಕಳೆದ ಸೀಸನ್​ನಲ್ಲಿನ ಕಳಪೆ ಫಾರ್ಮ್​ ಕಾರಣ ವಾರ್ನರ್ ಅವರನ್ನು ಕೈಬಿಡಲಾಗಿತ್ತು. ಇದೀಗ ಡೇವಿಡ್ ವಾರ್ನರ್ ಮೆಗಾ ಹರಾಜಿನ ಹಾಟ್ ಫೇವರೇಟ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

ಏಕೆಂದರೆ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸಿದ್ದ ವಾರ್ನರ್ 2016 ರಲ್ಲಿ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದರು. ಇದಾಗ್ಯೂ ಕಳೆದ ಸೀಸನ್​ನಲ್ಲಿನ ಕಳಪೆ ಫಾರ್ಮ್​ ಕಾರಣ ವಾರ್ನರ್ ಅವರನ್ನು ಕೈಬಿಡಲಾಗಿತ್ತು. ಇದೀಗ ಡೇವಿಡ್ ವಾರ್ನರ್ ಮೆಗಾ ಹರಾಜಿನ ಹಾಟ್ ಫೇವರೇಟ್ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

3 / 6
ಇನ್ನು ಮುಂದಿನ ಸೀಸನ್​​ನಲ್ಲಿ ಹೊಸ ಎರಡು ತಂಡಗಳು ಸೇರ್ಪಡೆಯಾಗಿದ್ದು, ಹೀಗಾಗಿ ಮೆಗಾ ಹರಾಜಿಗೂ ಮುನ್ನವೇ ವಾರ್ನರ್ ಅವರನ್ನು ಆಯ್ಕೆ ಮಾಡುವ ಅವಕಾಶ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗಿದೆ. ಇದಾಗ್ಯೂ ಇದುವರೆಗೆ ವಾರ್ನರ್ ಹೊಸ ತಂಡಗಳ ಪರ ಒಪ್ಪಂದ ಮಾಡಿಕೊಂಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇನ್ನು ಮುಂದಿನ ಸೀಸನ್​​ನಲ್ಲಿ ಹೊಸ ಎರಡು ತಂಡಗಳು ಸೇರ್ಪಡೆಯಾಗಿದ್ದು, ಹೀಗಾಗಿ ಮೆಗಾ ಹರಾಜಿಗೂ ಮುನ್ನವೇ ವಾರ್ನರ್ ಅವರನ್ನು ಆಯ್ಕೆ ಮಾಡುವ ಅವಕಾಶ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗಿದೆ. ಇದಾಗ್ಯೂ ಇದುವರೆಗೆ ವಾರ್ನರ್ ಹೊಸ ತಂಡಗಳ ಪರ ಒಪ್ಪಂದ ಮಾಡಿಕೊಂಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

4 / 6
ಹೀಗಾಗಿಯೇ ಎಸ್​ಆರ್​ಹೆಚ್, ಸಿಎಸ್​ಕೆ ಸೇರಿದಂತೆ ಅನೇಕ ತಂಡಗಳ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಯಾವ ತಂಡದ ಪರ ಆಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗಳ ಎಡೆಯಲ್ಲಿ ಆರ್​ಸಿಬಿ ಅಭಿಮಾನಿ ಕೂಡ ಕಂಡು ಬಂದಿದ್ದು, ನೀವು ಆರ್​ಸಿಬಿ ಪರ ಆಡಬೇಕೆಂದು ವಾರ್ನರ್ ಅವರಲ್ಲಿ ಮನವಿ ಮಾಡಿದ್ದಾರೆ.

ಹೀಗಾಗಿಯೇ ಎಸ್​ಆರ್​ಹೆಚ್, ಸಿಎಸ್​ಕೆ ಸೇರಿದಂತೆ ಅನೇಕ ತಂಡಗಳ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಯಾವ ತಂಡದ ಪರ ಆಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗಳ ಎಡೆಯಲ್ಲಿ ಆರ್​ಸಿಬಿ ಅಭಿಮಾನಿ ಕೂಡ ಕಂಡು ಬಂದಿದ್ದು, ನೀವು ಆರ್​ಸಿಬಿ ಪರ ಆಡಬೇಕೆಂದು ವಾರ್ನರ್ ಅವರಲ್ಲಿ ಮನವಿ ಮಾಡಿದ್ದಾರೆ.

5 / 6
ಇದಕ್ಕೆ ವಾರ್ನರ್ ಹಾರ್ಟ್ ಎಮೋಜಿ ಮೂಲಕ ಪ್ರತಿಕ್ರಿಯಿಸಿರುವುದು ವಿಶೇಷ. ಅಂದರೆ ಉಳಿದ ಯಾವುದೇ ತಂಡಗಳ ಅಭಿಮಾನಿಗಳ ಕೋರಿಕೆಗೆ ಉತ್ತರಿಸದ ವಾರ್ನರ್ ಆರ್​ಸಿಬಿ ಅಭಿಮಾನಿಗೆ ಹಾರ್ಟ್ ಎಮೋಜಿಯ ಪ್ರತ್ಯುತ್ತರ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದನ್ನು ಗಮನಿಸಿರುವ ಆರ್​ಸಿಬಿ ಅಭಿಮಾನಿಗಳು ಡೇವಿಡ್ ವಾರ್ನರ್ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ವಾರ್ನರ್ ಹಾರ್ಟ್ ಎಮೋಜಿ ಮೂಲಕ ಪ್ರತಿಕ್ರಿಯಿಸಿರುವುದು ವಿಶೇಷ. ಅಂದರೆ ಉಳಿದ ಯಾವುದೇ ತಂಡಗಳ ಅಭಿಮಾನಿಗಳ ಕೋರಿಕೆಗೆ ಉತ್ತರಿಸದ ವಾರ್ನರ್ ಆರ್​ಸಿಬಿ ಅಭಿಮಾನಿಗೆ ಹಾರ್ಟ್ ಎಮೋಜಿಯ ಪ್ರತ್ಯುತ್ತರ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇದನ್ನು ಗಮನಿಸಿರುವ ಆರ್​ಸಿಬಿ ಅಭಿಮಾನಿಗಳು ಡೇವಿಡ್ ವಾರ್ನರ್ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

6 / 6
Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ