IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

IPL 2022 Final: ಐಪಿಎಲ್ 2022 ರ ಫೈನಲ್ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

|

Updated on:May 29, 2022 | 6:13 PM

ಐಪಿಎಲ್ 2022 ರ ಫೈನಲ್ ಪಂದ್ಯ ರಾಜಸ್ಥಾನ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಇದು ವಿಶ್ವದ ಅತಿ ದೊಡ್ಡ ಕ್ರೀಡಾಂಗಣವಾಗಿದೆ. ಅದೂ ಅಲ್ಲದೆ ಈ ಮೈದಾನದ ವಿಶೇಷತೆಗಳು ಹಲವು.

1 / 5
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಸರ್ದಾರ್ ಪಟೇಲ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ 63 ಎಕರೆಗಳಷ್ಟು ವಿಸ್ತಾರವಾಗಿದೆ. ಈ ಮೈದಾನವನ್ನು ಹಿಂದೆ ಮೊಟೆರಾ ಸ್ಟೇಡಿಯಂ ಎಂದು ಕರೆಯಲಾಗುತ್ತಿತ್ತು. ಆದರೆ ಫೆಬ್ರವರಿ 2021 ರಲ್ಲಿ, ಈ ಕ್ರೀಡಾಂಗಣದ ಹೆಸರನ್ನು ನರೇಂದ್ರ ಮೋದಿ ಸ್ಟೇಡಿಯಂ ಎಂದು ಬದಲಾಯಿಸಲಾಯಿತು.

2 / 5
IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

ನರೇಂದ್ರ ಮೋದಿ ಸ್ಟೇಡಿಯಂ 1.32 ಲಕ್ಷ ಆಸನ ಸಾಮರ್ಥ್ಯ ಹೊಂದಿದೆ. ಹಾಗೆ ನೋಡಿದರೆ ಇದು ಜಗತ್ತಿನ ಅತಿ ದೊಡ್ಡ ಕ್ರೀಡಾಂಗಣ. ಹಿಂದೆ, MCG ಕ್ರೀಡಾಂಗಣ ಮೊದಲ ಸ್ಥಾನ ಪಡೆದಿತ್ತು, ಇದು 90,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ.

3 / 5
IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

ಕ್ರೀಡಾಂಗಣವು ನಾಲ್ಕು ಡ್ರೆಸ್ಸಿಂಗ್ ಕೊಠಡಿಗಳನ್ನು ಹೊಂದಿದೆ. ಇನ್ನೊಂದು ಕ್ರೀಡಾಂಗಣವು ಎರಡು ಡ್ರೆಸ್ಸಿಂಗ್ ಕೊಠಡಿಗಳನ್ನು ಹೊಂದಿದೆ. ವ್ಯಾಯಾಮಕ್ಕಾಗಿ ಜಿಮ್ ಮತ್ತು ಈಜುಕೊಳವೂ ಇದೆ. ವಿಶ್ವದ ಯಾವುದೇ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂತಹ ಸೌಲಭ್ಯವಿಲ್ಲ. 3,000 ಕಾರುಗಳು ಮತ್ತು 10,000 ದ್ವಿಚಕ್ರ ವಾಹನಗಳಿಗೆ ಏಕಕಾಲದಲ್ಲಿ ಪಾರ್ಕಿಂಗ್ ವ್ಯವಸ್ಥೆ ಇದೆ.

4 / 5
IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

ನರೇಂದ್ರ ಮೋದಿ ಸ್ಟೇಡಿಯಂ ಇದುವರೆಗೆ 14 ಟೆಸ್ಟ್, 27 ODI ಮತ್ತು 6 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಇದಲ್ಲದೇ 16 ಐಪಿಎಲ್ ಪಂದ್ಯಗಳು ಕ್ರೀಡಾಂಗಣದಲ್ಲಿ ನಡೆದಿವೆ. ಗುಜರಾತ್ ಟೈಟಾನ್ಸ್ ತವರು ಮೈದಾನ. ಈ ಕ್ರೀಡಾಂಗಣವು 2010, 2014 ಮತ್ತು 2015 ರಲ್ಲಿ ರಾಜಸ್ಥಾನ ರಾಯಲ್ಸ್‌ನ ತವರು ಮೈದಾನವಾಗಿತ್ತು.

5 / 5

Published On - 6:00 pm, Sun, 29 May 22

Follow us
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ