AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮತ್ತೆ ಒಂದೇ ತಂಡದಲ್ಲಿ ಪಾಂಡ್ಯ ಬ್ರದರ್ಸ್​..?

IPL 2022 Hardik Pandya: ಹಳೆಯ 8 ಫ್ರಾಂಚೈಸಿಗಳಿಗೆ ರಿಟೈನ್ ಪಟ್ಟಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿದ್ದು, ಹೀಗಾಗಿ ಇನ್ನೆರಡು ದಿನಗಳಲ್ಲಿ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಬೇಕಿದೆ.

TV9 Web
| Edited By: |

Updated on: Nov 27, 2021 | 3:17 PM

Share
ಮುಂಬೈ ಇಂಡಿಯನ್ಸ್​ ತಂಡದಿಂದ ಪಾಂಡ್ಯ ಬ್ರದರ್ಸ್ ಹೊರಬೀಳುವುದು ಖಚಿತವಾಗಿದೆ. ಮೆಗಾ ಹರಾಜಿಗೂ ಮುನ್ನ ಮುಂಬೈ ರೋಹಿತ್ ಶರ್ಮಾ, ಬುಮ್ರಾ, ಇಶಾನ್ ಕಿಶನ್ ಹಾಗೂ ಪೊಲಾರ್ಡ್​ ಅವರನ್ನು ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆದರೆ ಇತ್ತ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಹೊರಬೀಳಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಹೊಸ ಫ್ರಾಂಚೈಸಿ ಇಬ್ಬರನ್ನು ಸಂಪರ್ಕಿಸಿದೆ ಎಂದು ವರದಿಯೊಂದು ತಿಳಿಸಿದೆ.

ಮುಂಬೈ ಇಂಡಿಯನ್ಸ್​ ತಂಡದಿಂದ ಪಾಂಡ್ಯ ಬ್ರದರ್ಸ್ ಹೊರಬೀಳುವುದು ಖಚಿತವಾಗಿದೆ. ಮೆಗಾ ಹರಾಜಿಗೂ ಮುನ್ನ ಮುಂಬೈ ರೋಹಿತ್ ಶರ್ಮಾ, ಬುಮ್ರಾ, ಇಶಾನ್ ಕಿಶನ್ ಹಾಗೂ ಪೊಲಾರ್ಡ್​ ಅವರನ್ನು ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆದರೆ ಇತ್ತ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ಹೊರಬೀಳಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಹೊಸ ಫ್ರಾಂಚೈಸಿ ಇಬ್ಬರನ್ನು ಸಂಪರ್ಕಿಸಿದೆ ಎಂದು ವರದಿಯೊಂದು ತಿಳಿಸಿದೆ.

1 / 5
ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯರನ್ನು ಆಯ್ಕೆ ಮಾಡಲು ಅಹಮದಾಬಾದ್ ಫ್ರಾಂಚೈಸಿ ಆಸಕ್ತಿ ಹೊಂದಿದ್ದು, ಹೀಗಾಗಿ ಇಬ್ಬರನ್ನು ಸಂಪರ್ಕಿಸಿದೆ ಎನ್ನಲಾಗಿದೆ. ಏಕೆಂದರೆ ಇಬ್ಬರೂ ಗುಜರಾತ್ ಮೂಲದ ಆಟಗಾರರಾಗಿರುವ ಕಾರಣ, ಸ್ಥಳೀಯ ಅಭಿಮಾನಿಗಳನ್ನು ಸೆಳೆಯಲು ಅಹಮದಾಬಾದ್ ಫ್ರಾಂಚೈಸಿ ಪಾಂಡ್ಯ ಬ್ರದರ್ಸ್​ ಅನ್ನು ಖರೀದಿಸಲು ಬಯಸಿದೆ. ಹೀಗಾಗಿ ಇಬ್ಬರಲ್ಲಿ ಒಬ್ಬರು ಹೊಸ ಫ್ರಾಂಚೈಸಿ ಪರ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯರನ್ನು ಆಯ್ಕೆ ಮಾಡಲು ಅಹಮದಾಬಾದ್ ಫ್ರಾಂಚೈಸಿ ಆಸಕ್ತಿ ಹೊಂದಿದ್ದು, ಹೀಗಾಗಿ ಇಬ್ಬರನ್ನು ಸಂಪರ್ಕಿಸಿದೆ ಎನ್ನಲಾಗಿದೆ. ಏಕೆಂದರೆ ಇಬ್ಬರೂ ಗುಜರಾತ್ ಮೂಲದ ಆಟಗಾರರಾಗಿರುವ ಕಾರಣ, ಸ್ಥಳೀಯ ಅಭಿಮಾನಿಗಳನ್ನು ಸೆಳೆಯಲು ಅಹಮದಾಬಾದ್ ಫ್ರಾಂಚೈಸಿ ಪಾಂಡ್ಯ ಬ್ರದರ್ಸ್​ ಅನ್ನು ಖರೀದಿಸಲು ಬಯಸಿದೆ. ಹೀಗಾಗಿ ಇಬ್ಬರಲ್ಲಿ ಒಬ್ಬರು ಹೊಸ ಫ್ರಾಂಚೈಸಿ ಪರ ಕಣಕ್ಕಿಳಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

2 / 5
ಅದರಲ್ಲೂ ಹಾರ್ದಿಕ್ ಪಾಂಡ್ಯರನ್ನು ನೇರವಾಗಿ ಆಯ್ಕೆ ಮಾಡಲು ಅಹಮದಾಬಾದ್ ಫ್ರಾಂಚೈಸಿ ಬಯಸಿದ್ದು, ಅದರಂತೆ ಮೆಗಾ ಹರಾಜಿಗೂ ಮುನ್ನವೇ ಹಾರ್ದಿಕ್ ಪಾಂಡ್ಯ ಹೊಸ ಫ್ರಾಂಚೈಸಿಯ ಪಾಲಾಗುವ ಸಾಧ್ಯತೆ ಹೆಚ್ಚಿದೆ.

ಅದರಲ್ಲೂ ಹಾರ್ದಿಕ್ ಪಾಂಡ್ಯರನ್ನು ನೇರವಾಗಿ ಆಯ್ಕೆ ಮಾಡಲು ಅಹಮದಾಬಾದ್ ಫ್ರಾಂಚೈಸಿ ಬಯಸಿದ್ದು, ಅದರಂತೆ ಮೆಗಾ ಹರಾಜಿಗೂ ಮುನ್ನವೇ ಹಾರ್ದಿಕ್ ಪಾಂಡ್ಯ ಹೊಸ ಫ್ರಾಂಚೈಸಿಯ ಪಾಲಾಗುವ ಸಾಧ್ಯತೆ ಹೆಚ್ಚಿದೆ.

3 / 5
ಇನ್ನು ಕೃನಾಲ್ ಅವರನ್ನು ಹರಾಜಿನಲ್ಲಿ ಟಾರ್ಗೆಟ್ ಮಾಡುವ ಮೂಲಕ ಪಾಂಡ್ಯ ಬ್ರದರ್ಸ್​ ಅನ್ನು ಅಹಮದಾಬಾದ್​ ತಂಡದಲ್ಲಿ ಜೊತೆಗೂಡಿಸಲು ಹೊಸ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಬಳಿಕ ಮತ್ತೆ ಪಾಂಡ್ಯ ಬ್ರದರ್ಸ್ ಒಂದೇ ತಂಡದಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಇನ್ನು ಕೃನಾಲ್ ಅವರನ್ನು ಹರಾಜಿನಲ್ಲಿ ಟಾರ್ಗೆಟ್ ಮಾಡುವ ಮೂಲಕ ಪಾಂಡ್ಯ ಬ್ರದರ್ಸ್​ ಅನ್ನು ಅಹಮದಾಬಾದ್​ ತಂಡದಲ್ಲಿ ಜೊತೆಗೂಡಿಸಲು ಹೊಸ ಫ್ರಾಂಚೈಸಿ ಪ್ಲ್ಯಾನ್ ರೂಪಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಬಳಿಕ ಮತ್ತೆ ಪಾಂಡ್ಯ ಬ್ರದರ್ಸ್ ಒಂದೇ ತಂಡದಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4 / 5
ಹಳೆಯ 8 ಫ್ರಾಂಚೈಸಿಗಳಿಗೆ ರಿಟೈನ್ ಪಟ್ಟಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿದ್ದು, ಹೀಗಾಗಿ ಇನ್ನೆರಡು ದಿನಗಳಲ್ಲಿ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಬೇಕಿದೆ. ಅದರಂತೆ ನವೆಂಬರ್ 30 ರಂದು ಅಧಿಕೃತವಾಗಿ ಯಾರೆಲ್ಲಾ ರಿಟೈನ್ ಆಗಿದ್ದಾರೆ ಎಂಬುದು ಬಹಿರಂಗವಾಗಲಿದೆ.

ಹಳೆಯ 8 ಫ್ರಾಂಚೈಸಿಗಳಿಗೆ ರಿಟೈನ್ ಪಟ್ಟಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿದ್ದು, ಹೀಗಾಗಿ ಇನ್ನೆರಡು ದಿನಗಳಲ್ಲಿ ಎಲ್ಲಾ ಫ್ರಾಂಚೈಸಿಗಳು ಉಳಿಸಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಬೇಕಿದೆ. ಅದರಂತೆ ನವೆಂಬರ್ 30 ರಂದು ಅಧಿಕೃತವಾಗಿ ಯಾರೆಲ್ಲಾ ರಿಟೈನ್ ಆಗಿದ್ದಾರೆ ಎಂಬುದು ಬಹಿರಂಗವಾಗಲಿದೆ.

5 / 5
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ